ರಾಷ್ಟ್ರೀಯ ಹೆದ್ದಾರಿ ಚತುಷ್ಪಥ: ಸಮಸ್ಯೆಗಳ ಆಗರ


Team Udayavani, Nov 19, 2018, 2:15 AM IST

national-highway-construction-18-11.jpg

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ದಿನದಿಂದ ದಿನಕ್ಕೆ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ. ರಸ್ತೆ ಅಗಲಗೊಳಿಸುವ ಭರದಲ್ಲಿ ಸ್ಥಳೀಯ ವ್ಯವಸ್ಥೆಗಳ ಸರಿಯಾದ ಮಾಹಿತಿ ಪಡೆಯದ ಪರಿಣಾಮ ಕುಂದಾಪುರದಿಂದ ಶಿರೂರಿನವರೆಗೆ ಹತ್ತಾರು ಹಳ್ಳಿಗಳು ಹೆದ್ದಾರಿಯ ಸಂಪರ್ಕ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಏನು ಸಮಸ್ಯೆ?
ಕುಂದಾಪುರದಿಂದ ಗೋವಾ ಗಡಿಯವರೆಗಿನ ರಾ.ಹೆ. ಚತುಷ್ಪಥ ಕಾಮಗಾರಿ 2015ರಲ್ಲಿ ಪ್ರಾರಂಭಗೊಂಡಿತ್ತು. ಉತ್ತರಕನ್ನಡ ಬಿಟ್ಟರೆ ಉಳಿದ ಬಹುತೇಕ ಭಾಗಗಳಲ್ಲಿ ಮುಕ್ಕಾಲಂಶ ಪೂರ್ಣಗೊಂಡಿದ್ದು, 2019ರ ಒಳಗೆ ಸಂಪೂರ್ಣವಾಗುವ ಸಾಧ್ಯತೆಯಿದೆ. ಈ ಹಂತದಲ್ಲಿ ಒಂದೊಂದೇ ಸಮಸ್ಯೆಗಳು ಬೆಳಕಿಗೆ ಬರುತ್ತಿದ್ದು, ಯೋಜನೆಯ ಆರಂಭದಲ್ಲಿ ಅಧಿಕಾರಿಗಳು ತೋರಿಸಿದ ವಿವರಗಳಿಗೂ ಕಾಮಗಾರಿ ಅನುಷ್ಠಾನಕ್ಕೂ ಅಜಗಜಾಂತರ ಇರುವುದು ಅತ್ಯಂತ ಆತಂಕಕಾರಿ.


ಹೆದ್ದಾರಿ ಅಗಲಗೊಳಿಸಲು ಸರಕಾರಿ ಜಾಗವನ್ನೇ ಬಳಸುವ ಉದ್ದೇಶ ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಚಿಂತನೆಯಿಂದಾಗಿ ಹಳ್ಳಿ ರಸ್ತೆಗಳು ಹೆದ್ದಾರಿಯ ನೇರ ಸಂಪರ್ಕವನ್ನು ಕಡಿದುಕೊಳ್ಳುವ ಭೀತಿಯಿದೆ. ಮಾತ್ರವಲ್ಲದೆ, ಒಂದೆರಡು ಕಿ.ಮೀ. ದೂರ ಹೆಚ್ಚುವರಿಯಾಗಿ ಸುತ್ತುಬಳಸಬೇಕಾದ ಸ್ಥಿತಿ ಇದೆ. ಇದರಿಂದಾಗಿ ಉಪ್ಪುಂದ, ಮಧ್ದೋಡಿ, ಕೊಲ್ಲೂರು ಭಾಗದ ಸಂಪರ್ಕ ರಸ್ತೆಗಳು, ಶಿರೂರು ಸಮೀಪದ ತೂದಳ್ಳಿ, ಆಲಂದೂರು, ಜೋಗೂರು, ದೊಂಬೆ -ಕರಾವಳಿ ರಸ್ತೆ, ಕೋಟೆಮನೆ, ಬಿಜೂರು ಸಹಿತ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಜಂಕ್ಷನ್‌ಗಳು ಇನ್ನು ಇರುವ ಸಾಧ್ಯತೆಗಳಿಲ್ಲ. ಇಂಥ ಹಲವು ಸಮಸ್ಯೆಗಳು ಸಾರ್ವಜನಿಕರಿಗೆ ಕಗ್ಗಂಟಾಗಿ ಪರಿಣಮಿಸಲಿವೆ.

ಅಪಘಾತ ಹೆಚ್ಚಳ, ಅಪೂರ್ಣ ಕಾಮಗಾರಿ
ಕಾಮಗಾರಿ ಪ್ರಾರಂಭವಾದಂದಿನಿಂದ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿದೆ. ಶಿರೂರಿನ ಕೆಳಪೇಟೆ ಸಹಿತ ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಪ್ರಮುಖ ರಸ್ತೆಗಳಿಗೆ ಅಂಡರ್‌ಪಾಸ್‌ ಇಲ್ಲ. ಹೆದ್ದಾರಿ ದಾಟಿಯೇ ಇನ್ನೊಂದು ಭಾಗಕ್ಕೆ ತೆರಳಬೇಕಾದ ಸ್ಥಿತಿ ಉದ್ಭವಿಸಲಿದೆ. ಕೆಲವು ಪ್ರಮುಖ ಊರುಗಳಲ್ಲಿ ಬಸ್‌ ನಿಲ್ದಾಣ ಇಲ್ಲ. ಮಳೆಗಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ. ಸ್ಥಳೀಯ ಗ್ರಾ.ಪಂ.ಗಳಿಗೂ ಅವರ ವ್ಯಾಪ್ತಿಯ ಚತುಷ್ಪಥ ಕಾಮಗಾರಿ ವಿವರ ಇಲ್ಲದಿರುವುದು ನಮ್ಮ ವ್ಯವಸ್ಥೆಗೆ ಹಿಡಿದ ಕೈಗನ್ನಡಿ.

ರಸ್ತೆ ಆಗಿಲ್ಲ, ಟೋಲ್‌ಗೇಟ್‌ ಸಿದ್ಧ
ಗುತ್ತಿಗೆ ಪಡೆದ ಕಂಪೆನಿ ಚತುಷ್ಪಥ ಕಾಮಗಾರಿ ಪೂರ್ಣಗೊಳಿಸಿಲ್ಲ. ಆದರೆ ಟೋಲ್‌ಗೇಟ್‌ ಸಿದ್ಧವಾಗಿರುವುದು ವಿಪರ್ಯಾಸ. ಶಿರೂರಿನ ಆರ್ಮಿ ಬಳಿ ಟೋಲ್‌ಗೇಟ್‌ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿರೂರು ಹಾಗೂ ಭಟ್ಕಳ ಅಂತರ ಕೇವಲ ಆರೇಳು ಕಿ.ಮೀ. ಮಾತ್ರ, ಇಲ್ಲಿನ ಜನರು ವ್ಯವಹಾರಕ್ಕಾಗಿ ದಿನಕ್ಕೆ ನಾಲ್ಕೈದು ಬಾರಿ ಉತ್ತರ ಕನ್ನಡಕ್ಕೆ ಹೋಗಿಬರುತ್ತಾರೆ. ಟೋಲ್‌ ನಿರ್ಮಾಣವಾದರೆ ಗಡಿಭಾಗದ ಗ್ರಾಮಗಳ ಕುರಿತು ಬದಲಿ ವ್ಯವಸ್ಥೆ ಮಾಡಬೇಕಾಗಿದೆ.

ಪ್ರತಿಭಟನೆಗೆ ಸಿದ್ಧತೆ
ಹೆದ್ದಾರಿ ಚತುಷ್ಪಥ ಕಾಮಗಾರಿ ಅವ್ಯವಸ್ಥೆ ಬಗ್ಗೆ ಚರ್ಚಿಸಲು ಕಾಟಾಚಾರಕ್ಕೆ ಒಂದೆರಡು ಸಭೆಗಳು ನಡೆದಿವೆ. ಎಲ್ಲೂ ಸಾರ್ವಜನಿಕರಿಗೆ ಪೂರ್ಣ ಮಾಹಿತಿ ದೊರೆತಿಲ್ಲ. ಸ್ಪಷ್ಟ ಮಾಹಿತಿ ನೀಡಬೇಕು ಮತ್ತು ಹಳ್ಳಿ ರಸ್ತೆಗಳಿಗೆ ಸಂಪರ್ಕ ಸಮಸ್ಯೆ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಶಿರೂರಿನಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ.

ಸಮೀಕ್ಷೆ ನಡೆಸಿ ಸೂಕ್ತ ನಿರ್ಧಾರ 
ಹೆದ್ದಾರಿ ಚತುಷ್ಪಥ ಕುರಿತು ಸಾರ್ವಜನಿಕರ ಸಮಸ್ಯೆಗಳ ಸಮನ್ವಯಕ್ಕಾಗಿ ವಿಶೇಷ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಹೆದ್ದಾರಿ ಪ್ರಾಧಿಕಾರದ ನಿರ್ದೇಶನದಂತೆ ಕಂಪೆನಿ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕರು ಇಲಾಖೆಗೆ ದೂರು ಸಲ್ಲಿಸಬಹುದಾಗಿದೆ. ಮೇಲಧಿಕಾರಿಗಳು ಸ್ಥಳ ಸಮೀಕ್ಷೆ ನಡೆಸಿ ಸೂಕ್ತ ನಿರ್ಧಾರ ತೆ‌ಗೆದುಕೊಳ್ಳುತ್ತಾರೆ. ಅಪಘಾತ ನಿಯಂತ್ರಣ ಮತ್ತು ಮುಂಜಾಗ್ರತೆಯನ್ನು ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ.
– ಯೋಗೇಂದ್ರಪ್ಪ, ಐ.ಆರ್‌.ಬಿ. ಪ್ರಾಜೆಕ್ಟ್ ಮ್ಯಾನೇಜರ್‌

— ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.