ಇಂದಿರಾ ಕ್ಯಾಂಟೀನ್ಗಳಲ್ಲಿ ಗಂಜಿ ಊಟ
Team Udayavani, Nov 22, 2018, 9:29 AM IST
ಕುಂದಾಪುರ: ಉಡುಪಿ ಜಿಲ್ಲೆಯ ಇಂದಿರಾ ಕ್ಯಾಂಟೀನ್ಗಳಲ್ಲಿ ಮಧ್ಯಾಹ್ನ ಗಂಜಿ ಊಟ ಕೊಡಲು ಜಿಲ್ಲಾಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ ಎಂದು ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದ್ದಾರೆ.
ಅವರು ಬುಧವಾರ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ 500 ಕ್ಯಾಂಟೀನ್ ಸ್ಥಾಪಿಸಿ ನಿತ್ಯ 3 ಲಕ್ಷ ಜನರಿಗೆ ಊಟ ಕೊಡುವ ಗುರಿಯಿತ್ತು. ಈಗ 1.4 ಲಕ್ಷ ಜನ ಪ್ರಯೋಜನ ಪಡೆಯುತ್ತಿದ್ದಾರೆ. ಶುಚಿತ್ವ ಹಾಗೂ ಬಿಸಿ ಆಹಾರಕ್ಕೆ ಮಹತ್ವ ನೀಡಲಾಗಿದೆ. ಅನ್ನಭಾಗ್ಯ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದಂತೆ ಶ್ರಮಿಕ ವರ್ಗವೂ ಹಸಿವುಮುಕ್ತ ಆಗಬೇಕೆಂದು ಕ್ಯಾಂಟೀನ್ ಆರಂಭಿಸಲಾಗಿದೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಎರಡು ಕ್ಯಾಂಟೀನ್ಗಳಿದ್ದು, ಕಾರ್ಕಳ, ಕುಂದಾಪುರ ಸಹಿತ ಜಿಲ್ಲೆಯಲ್ಲಿ ನಾಲ್ಕು ಇವೆ. ಕುಂದಾಪುರ ಆಸ್ಪತ್ರೆ ಬಳಿ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗುವುದು ಎಂದರು.
ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಸಹಾಯಕ ಕಮಿಷನರ್ ಟಿ. ಭೂಬಾಲನ್, ನಗರ ಕೋಶ ಯೋಜನ ನಿರ್ದೇಶಕ ಅರುಣಪ್ರಭಾ, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕ್ಯಾಂಟೀನ್ ಉದ್ಘಾಟಿಸಿದ ಸಚಿವರು ಸ್ವತ್ಛತೆ, ಅಡುಗೆ ಕೋಣೆ ಪರಿಶೀಲಿಸಿ ಇತರರಿಗೆ ಉಪಾಹಾರ ಬಡಿಸಿಕೊಟ್ಟು ತಾವೂ ಸೇವಿಸಿದರು. ಉಪ್ಪಿಟ್ಟು, ಕೇಸರಿಭಾತ್ ಮಾಡಲಾಗಿತ್ತು.
“ಸದ್ಬಳಕೆ ಮಾಡಿಕೊಳ್ಳಿ’
ಕಾರ್ಕಳ: ಸಮ್ಮಿಶ್ರ ಸರಕಾರದಲ್ಲಿ ಹಿಂದಿನ ಸರಕಾರದ ಎಲ್ಲ ಯೋಜನೆಗಳು ಮುಂದುವರಿಯಲಿವೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಚಿವೆ ಡಾ| ಜಯಮಾಲಾ ಹೇಳಿದರು. ತಾ.ಪಂ. ಸಭಾಂಗಣದಲ್ಲಿ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸಿದ ಅವರು, ಕೋಟಿ-ಚೆನ್ನಯ ಥೀಮ್ ಪಾರ್ಕ್ನ ಉಳಿದ ಕೆಲಸ ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ಹೇಳಿದರು. ಶಾಸಕ ಸುನೀಲ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ