ಅಂಗಡಿಗೆ ಬೆಂಕಿ: ಅಪರಾಧ ಸಾಬೀತು
Team Udayavani, Dec 6, 2018, 11:06 AM IST
ಕುಂದಾಪುರ: ಮೂರು ವರ್ಷಗಳ ಹಿಂದೆ ಗಂಗೊಳ್ಳಿಯಲ್ಲಿ ಕೋಮುದ್ವೇಷದಿಂದ ಅಂಗಡಿಗೆ ಬೆಂಕಿ ಹಾಕಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ತಪ್ಪಿತಸ್ಥರಿಗೆ ಡಿ.10ರಂದು ಶಿಕ್ಷೆ ಪ್ರಕಟಿಸುವುದಾಗಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಗಂಗೊಳ್ಳಿ ಬಾದ್ಶಾ ಮೊಹಲ್ಲಾದ ಮಹ್ಮದ್ ಜುನೈದ್ ಹಾಗೂ ವೆಲ್ಡಿಂಗ್ ಜಾಫರ್ ಯಾನೆ ಜಾಫರ್ ಅವರು 2015ರ ಜ. 21ರಂದು ನುಸುಕಿನ ಜಾವ 2.20ಕ್ಕೆ ಗಂಗೊಳ್ಳಿ ಮುಖ್ಯರಸ್ತೆಯ ವೆಂಕಟೇಶ ಭಾಸ್ಕರ ಶೆಣೈ ಅವರ ಅಂಗಡಿಯ ಗೋದಾಮು, ಕಾರು ಹಾಗೂ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದರು. ಪ್ರಕರಣದಲ್ಲಿ ಒಟ್ಟು 28 ಸಾಕ್ಷಿಗಳಿದ್ದು, ಈ ಪೈಕಿ 14 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಅವರು ಅಪರಾಧ ಸಾಬೀತಾಗಿದೆ ಎಂದು ಪ್ರಕಟಿಸಿದ್ದಾರೆ. ಸರಕಾರದ ಪರ ಜಿಲ್ಲಾ ಸಹಾಯಕ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ