ಸ್ವಚ್ಛಗೊಂಡ ಫ್ಲೈಓವರ್ ಅಡಿ
Team Udayavani, Dec 11, 2018, 1:50 AM IST
ಕುಂದಾಪುರ: ಸ್ವಚ್ಛ ಪುರಸಭೆಗೆ ಅಪವಾದ ಎಂಬಂತೆ ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯ ಶೆರೋನ್, ಶೆಲೊಮ್ ಹೋಟೆಲ್ ಎದುರು ಫ್ಲೈ ಓವರ್ ಅಡಿ ರೋಗ ರುಜಿನಗಳ ಉತ್ಪಾದನಾ ತಾಣವಾಗಿದ್ದ ಕೊಳಚೆಗೆ ಮುಕ್ತಿ ದೊರೆತಿದೆ. ಸಂಗ್ರಹಗೊಂಡಿದ್ದ ಕೊಳಚೆ ನೀರನ್ನು ಶುಚಿಗೊಳಿಸಿ ಕಾಂಕ್ರಿಟ್ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ.
ಫ್ಲೈ ಓವರ್ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುವವರು ಒಂದಷ್ಟು ಸಾಮಾಗ್ರಿಗಳನ್ನು ರಾಶಿ ಹಾಕಿದ್ದಾರೆ. ಕಾರ್ಮಿಕರು ಅಲ್ಲೇ ಬಿಡಾರ ಮಾಡಿದ್ದಾರೆ. ಅವರ ಶೌಚ, ಸ್ನಾನಗೃಹಗಳೂ ಅಲ್ಲೇ ಇವೆ. ಅದರ ಕೊಳಚೆ ನೀರು ತೆರೆದ ಚರಂಡಿಯಂತೆ ಫ್ಲೈಓವರ್ ಅಡಿಯಲ್ಲಿ ಸಂಗ್ರಹವಾಗಿದೆ. ಮಳೆಗಾಲದಲ್ಲಿ ಕೂಡ ಇಲ್ಲಿ ನೀರು ಸಂಗ್ರಹ ಆಗುತ್ತಿತ್ತು. ಈಗ ಗಬ್ಬು ನಾರುವ ತ್ಯಾಜ್ಯ ನೀರು ಸಂಗ್ರಹವಾಗತೊಡಗಿದೆ. ಸಂಗ್ರಹವಾದ ತ್ಯಾಜ್ಯ ನೀರು ಹೊರ ಹೋಗದಂತೆ ಸರ್ವೀಸ್ ರಸ್ತೆ ಕಾಮಗಾರಿ ಮಾಡಲಾಗಿದೆ. ಈ ಕುರಿತು ಉದಯವಾಣಿ ವರದಿ ಪ್ರಕಟಿಸಿತ್ತು. ಇದೀಗ ವರದಿಗೆ ಸ್ಪಂದಿಸಿದ ಪುರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ನವಯುಗ ಸಂಸ್ಥೆ ಸ್ವಚ್ಛತೆಗೆ ಆದ್ಯತೆ ನೀಡಿದೆ. ಆದರೆ ಬೀಡುಬಿಟ್ಟ ಕಾರ್ಮಿಕರಿಗೆ ಇನ್ನೂ ಶೌಚ, ಸ್ನಾನದ ಮನೆಯ ವ್ಯವಸ್ಥೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ