ಸರ್ವಋತುವಿಗೆ ಇನ್ನೂ ತೆರೆದುಕೊಳ್ಳದ ರಾಜ್ಯದ ಏಕೈಕ ಹೊರ ಬಂದರು


Team Udayavani, Dec 13, 2018, 2:10 AM IST

sarvaruthu-12-12.jpg

ಕುಂದಾಪುರ: ರಾಜ್ಯದ ಏಕೈಕ ಹೊರ ಬಂದರು ಆಗಿರುವ ಮರವಂತೆಯಲ್ಲಿ ಬ್ರೇಕ್‌ ವಾಟರ್‌ ಕಾಮಗಾರಿ ವಿಳಂಬದಿಂದಾಗಿ ಸರ್ವಋತುವಿಗೆ ಈ ಬಂದರು ಇನ್ನೂ ತೆರೆದುಕೊಂಡಿಲ್ಲ. ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ವತಿಯಿಂದ 55 ಕೋ. ರೂ. ವೆಚ್ಚದಲ್ಲಿ ಹೊರ ಬಂದರು (ಔಟ್‌ಡೋರ್‌) ನಿರ್ಮಾಣ ಕಾಮಗಾರಿ ಆರಂಭಗೊಂಡು 6 ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಗುತ್ತಿಗೆ ಪಡೆದ ಸಂಸ್ಥೆಯ ವಿರುದ್ಧ ಮೀನುಗಾರರಿಗೆ ಅಸಮಾಧಾನದಿಂದಾಗಿ ಕೆಲವು ಸಮಯದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಆ ಕಾರಣದಿಂದ ಈ ಬಂದರು ಎಲ್ಲ ಸಮಯದಲ್ಲಿಯೂ ಮೀನುಗಾರರರಿಗೆ ಪ್ರಯೋಜನಕ್ಕೆ ಸಿಗುತ್ತಿಲ್ಲ.

ಏನಿದು ಹೊರ ಬಂದರು?
ಇತರ ಮೀನುಗಾರಿಕಾ ಬಂದರು ಹಾಗೂ ಇಲ್ಲಿಗೂ ಇರುವ ಪ್ರಮುಖ ವ್ಯತ್ಯಾಸವೆಂದರೆ, ಬೇರೆಲ್ಲ ಬಂದರುಗಳು ಸಹಜ ಬಂದರು ಆಗಿದ್ದರೆ, ಇದು ಕೃತಕವಾಗಿ ನಿರ್ಮಿಸಿದ ಬಂದರು ಆಗಿದೆ. ಅಂದರೆ ಮರವಂತೆಯಲ್ಲಿ ಇಲ್ಲಿನ ಮೀನುಗಾರರು ಬೇರೆ ಬಂದರನ್ನು ಅವಲಂಬಿಸುವ ಬದಲು ತಮ್ಮ ಅನುಕೂಲಕ್ಕಾಗಿ ಸ್ವತಃ ಕೃತಕವಾಗಿ ನಿರ್ಮಿಸಿಕೊಂಡ ಬಂದರು ಇದಾಗಿದೆ. ನಾಡದೋಣಿ ಮೀನುಗಾರಿಕೆ ಇಲ್ಲಿನ ವೈಶಿಷ್ಟ್ಯವಾಗಿದೆ. 300ಕ್ಕೂ ಹೆಚ್ಚು ನಾಡದೋಣಿಗಳಿದ್ದು, ಸುಮಾರು 2 ಸಾವಿರಕ್ಕೂ ಹೆಚ್ಚಿನ ಮೀನುಗಾರರು ಇಲ್ಲಿದ್ದಾರೆ. ಇದಲ್ಲದೆ ಬೇರೆ ಕಡೆಗಳ ಮೀನುಗಾರರು ಕೂಡ ಇಲ್ಲಿಗೆ ಬರುತ್ತಾರೆ.

ಇದು ಮೀನುಗಾರರೇ ಸಮುದ್ರ ಅಲೆಗಳನ್ನು ತಡೆಯಲು ತಡೆಗೋಡೆ ಹಾಕಿ ನಿರ್ಮಿಸಿದ ಬಂದರು ಇದಾಗಿದೆ. ಆದರೆ ಅಲೆಗಳ ಅಬ್ಬರ ತಡೆಯಲು 6 ವರ್ಷಗಳ ಹಿಂದೆ ಆರಂಭವಾದ ಹೊಸ ಯೋಜನೆಯ ಬ್ರೇಕ್‌ ವಾಟರ್‌ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಜಾಸ್ತಿಯಾದಾಗ ಗಂಗೊಳ್ಳಿ, ಕೊಡೇರಿ ಸಹಿತ ಇನ್ನಿತರ ಬಂದರುಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆಯಿದೆ.

ಏಕೈಕ ಹೊರ ಬಂದರು
ನೆರೆಯ ರಾಜ್ಯ ಕೇರಳದಲ್ಲಿ 3 ಹೊರ ಬಂದರುಗಳಿದ್ದರೆ, ರಾಜ್ಯದ ಏಕೈಕ ಹೊರ ಬಂದರು ಮರವಂತೆಯಲ್ಲಿ ಮಾತ್ರ ಇರುವುದು. ಕೇರಳದ ಕರಾವಳಿಯ ಪ್ರತಿ 30 ಕಿ.ಮೀ. ಗೊಂದು ಬಂದರು ನಿರ್ಮಿಸಲಾಗಿದೆ.

ಮೀನುಗಾರರಿಗೆ ತೊಂದರೆ
ಹೊರ ಬಂದರಿನ ಬ್ರೇಕ್‌ ವಾಟರ್‌ ಕಾಮಗಾರಿ ವಿಳಂಬದಿಂದಾಗಿ ಮೀನುಗಾರರಿಗೆ ಎಲ್ಲ ಸಮಯದಲ್ಲಿಯೂ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸ್ಥಗಿತಗೊಂಡ ಕಾಮಗಾರಿಯನ್ನೂ ತ್ವರಿತಗತಿಯಲ್ಲಿ ಆರಂಭಿಸಿ, ಪೂರ್ಣಗೊಳಿಸಿ, ಮೀನುಗಾರರಿಗೆ ಅನುಕೂಲ ಮಾಡಿಕೊಡಲಿ.
– ಸಂಜೀವ ಖಾರ್ವಿ, ಮೀನುಗಾರರು, ಮರವಂತೆ 

ಮಾರ್ಚ್‌ನೊಳಗೆ ಪೂರ್ಣ
ಮರವಂತೆಯ ಹೊರ ಬಂದರು ಕಾಮಗಾರಿ ಕಳೆದ 3-4 ತಿಂಗಳಿಂದ ಸ್ಥಗಿತಗೊಂಡಿತ್ತು. ಈಗ ಮತ್ತೆ ಅಲ್ಲಿನ ಮೀನುಗಾರರ ಅಭಿಪ್ರಾಯಗಳನ್ನು ಪಡೆದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಸುಮಾರು 45 ಕೋ.ರೂ. ವೆಚ್ಚದ ಕಾಮಗಾರಿ ಮುಗಿದಿದ್ದು, ಇನ್ನೂ ಸುಮಾರು 9 ಕೋ.ರೂ. ವೆಚ್ಚದ ಕಾಮಗಾರಿ ಬಾಕಿಯಿದೆ. ಅದು ಮುಂದಿನ ಮಾರ್ಚ್‌ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಅದಲ್ಲದೆ ಎರಡನೇ ಹಂತದ ಯೋಜನೆಗೂ ಪ್ರಸ್ತಾವನೆ ಸಲ್ಲಿಸಲು ತಯಾರಿ ನಡೆಯುತ್ತಿದೆ. 
– ಕ್ಸೇವಿಯರ್‌ ಡಯಾಸ್‌, ಸಹಾಯಕ ಎಂಜಿನಿಯರ್‌, ಬಂದರು ಮತ್ತು ಮೀನುಗಾರಿಕಾ ಇಲಾಖೆ

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.