ಮೋಡ- ಮಳೆ ಭೀತಿಯಲ್ಲಿ ಗೇರು ಬೆಳೆಗಾರರು


Team Udayavani, Jan 1, 2019, 8:50 PM IST

cashew-1-19.jpg

ಕುಂದಾಪುರ: ಕರಾವಳಿ ಭಾಗದ ಪ್ರಮುಖ ಬೆಳೆಗಳಲ್ಲಿ ಒಂದಾದ ಗೇರು ಕೃಷಿಗೆ ಈ ಬಾರಿ ಅಕಾಲಿಕ ಮಳೆ ಹಾಗೂ ಮೋಡ ಕವಿದ ವಾತಾವರಣ ಅಡ್ಡಿಯಾಗುವ ಆತಂಕ ಇಲ್ಲಿನ ಕೃಷಿಕರದ್ದು. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ, ಉಡುಪಿ ಜಿಲ್ಲೆಯ ಕಾರ್ಕಳ ಭಾಗಗಳಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗಿತ್ತು. ಚಳಿಗಾಲದಲ್ಲೂ ಮೋಡ ಕವಿದ ವಾತಾವರಣ ಆವರಿಸಿರುವುದರಿಂದ ಕರಾವಳಿ ಭಾಗದ ಗೇರು ಬೀಜ ಕೃಷಿಕರು ಆತಂಕಿತರಾಗಿದ್ದಾರೆ. ಈ ರೀತಿಯ ಪ್ರತಿಕೂಲ ಹವಾಮಾನದಿಂದಾಗಿ ಗೇರು ಬೀಜದ ಹೂವು ಕರಟಿ ಹೋಗುವುದಲ್ಲದೆ, ಉದುರಿ ಹೋಗುತ್ತಿದೆ.

ನವೆಂಬರ್‌ – ಡಿಸೆಂಬರ್‌ ಸಮಯದಲ್ಲಿ ಗೇರು ಹೂವು ಬಿಟ್ಟು, ಹಣ್ಣಾಗುವ ಸಮಯ. ಜನವರಿ – ಫೆಬ್ರವರಿ ತಿಂಗಳಲ್ಲಿ ಗೇರು ಫಸಲು ಕೊಡುವ ಸಮಯ. ಎಪ್ರಿಲ್‌, ಕೆಲವೆಡೆ ಮೇ ವರೆಗೂ ಗೇರು ಬೀಜ ಕೊಯ್ಲು ಇರುತ್ತದೆ. ಈ ವೇಳೆ ಚಳಿ ಇದ್ದರೆ ಅನುಕೂಲ. ಆದರೆ ಈ ಬಾರಿ ಉತ್ತಮ ಹೂವು ಬಿಟ್ಟರೂ, ಪ್ರತಿಕೂಲ ಹವಾಮಾನದಿಂದಾಗಿ ಆ ಹೂವೆಲ್ಲ ಕರಟಿ ಹೋಗುತ್ತಿದೆ. ಇದರಿಂದ ಈ ಋತುವಿನಲ್ಲಿ ಗೇರು ಬೀಜದ ಇಳುವರಿ ಕಡಿಮೆಯಾಗುವ ಭೀತಿ ಗೇರು ಕೃಷಿಕರದ್ದು. 

ದರ ಕುಸಿತ
ಈಗ ಕಳೆದ ವರ್ಷದ ಅಂದರೆ ಹಳೆ ಗೇರು ಬೀಜಗಳ ಮಾರಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕೆ.ಜಿ. ಗೆ 150 ರೂ. ಇತ್ತು. ಈಗ ದರ ಕುಸಿತಗೊಂಡಿದ್ದು, ಕೆ.ಜಿ. ಗೆ 90 ರೂ. ಅಷ್ಟೇ ಇದೆ. ಜನವರಿಯಿಂದ ಹೊಸ ಗೇರು ಬೀಜ ಮಾರಾಟಕ್ಕೆ ಸಿದ್ಧವಾಗುತ್ತದೆ.

50 ಸಾವಿರ ಹೆಕ್ಟೇರ್‌ ಪ್ರದೇಶ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಸಾವಿರ ಹೆಕ್ಟೇರ್‌ ಪ್ರದೇಶ ಹಾಗೂ ಉಡುಪಿ ಜಿಲ್ಲೆಯಲ್ಲಿ 19,541 ಹೆಕ್ಟೇರ್‌ ಪ್ರದೇಶದಲ್ಲಿ ಗೇರು ಕೃಷಿ ಬೆಳೆಯಲಾಗುತ್ತದೆ. ಅಂದರೆ ಕರಾವಳಿ ಭಾಗದಲ್ಲಿ ಒಟ್ಟು 50 ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶದಲ್ಲಿ ಗೇರು ಕೃಷಿಯಿದೆ. ಆದರೆ ಈ ಬಾರಿ ಚಳಿಗಾಲವಾಗಿದ್ದರೂ, ಕಳೆದ ಕೆಲ ದಿನಗಳಿಂದ ಪ್ರತಿಕೂಲ ಹವಾಮಾನದಿಂದಾಗಿ ಗೇರು ಬೆಳೆಗೆ ಮೋಡ ಕವಿದಂತಾಗಿದೆ. 

ಮೋಡದಿಂದ ನಷ್ಟ
ಮಳೆಯಾದರೂ ಪರ್ವಾಗಿಲ್ಲ. ಆದರೆ ಮೋಡ ಬಂದಲ್ಲಿ, ಗೇರು ಸಹಿತ ಯಾವುದೇ ಹೂವು ಬಿಡುವ ಕೃಷಿಗೆ ನಷ್ಟ. ಮೋಡಕ್ಕೆ ಗೇರು ಹೂವೆಲ್ಲ ಕರಟಿ ಹೋಗುತ್ತದೆ. ಹೂವು ಬಿಡುವ ಸಮಯದಲ್ಲಿಯೇ ಹೀಗೆ ಮೋಡವಾಗಿದ್ದು, ಈ ಸಲ ಹೆಚ್ಚಿನ ಪ್ರಮಾಣದಲ್ಲಿ ಗೇರು ಬೀಜವನ್ನು ನಿರೀಕ್ಷಿಸುವುದು ಕಷ್ಟ.
– ಕೃಷ್ಣ ನಾಯ್ಕ ತೆಂಕಬೆಟ್ಟು, ಬೆಳ್ವೆ

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.