ಗಂಗೊಳ್ಳಿ, ಯಡ್ತರೆ, ಬೈಂದೂರು: ಶಾಂತಿಯುತ ಮತದಾನ


Team Udayavani, Jan 2, 2019, 7:55 PM IST

gangolli-election-3-1.jpg

ಗಂಗೊಳ್ಳಿ: ಕುಂದಾಪುರ ತಾಲೂಕಿನ ಅತೀ ದೊಡ್ಡ ಗ್ರಾ.ಪಂ.ಗಳಲ್ಲಿ ಒಂದಾದ ಗಂಗೊಳ್ಳಿಯ ಗ್ರಾ.ಪಂ. ಆಡಳಿತದ ಚುಕ್ಕಾಣಿ ಹಿಡಿಯುವ ಸಲುವಾಗಿ ಮಂಗಳವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಒಟ್ಟು ಶೇ.45 ರಷ್ಟು ಮತದಾನವಾಗಿತ್ತು. ಗಂಗೊಳ್ಳಿಯಲ್ಲಿ 8 ಕ್ಷೇತ್ರಗಳಿಗೆ ಒಟ್ಟು 12 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿತ್ತು. ಒಟ್ಟು 33 ಸ್ಥಾನಗಳಿಗಾಗಿ 85 ಮಂದಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಶೇ. 63 ಮತದಾನ
ಬಂದರು ಪ್ರದೇಶವಿರುವ ಗಂಗೊಳ್ಳಿಯಲ್ಲಿ ಒಟ್ಟು 10,456 ಮಂದಿ ಮತದಾರರಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ಒಟ್ಟು ಶೇ. 63ರಷ್ಟು ಮಂದಿ ಮತ ಚಲಾಯಿಸಿದ್ದಾರೆ. 3 ಹಾಗೂ 4ನೇ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಶೇ. 10, ಬೆಳಗ್ಗೆ 11 ಗಂಟೆಗೆ ಶೇ.24 ಮತದಾನ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಶೇ. 36 ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಗಂಗೊಳ್ಳಿ, ಬೈಂದೂರು ಹಾಗೂ ಯಡ್ತರೆ ಗ್ರಾ.ಪಂ. ಚುನಾವಣೆಗೆ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತ ಯಂತ್ರ ಬಳಸಲಾಯಿತು. ಗಂಗೊಳ್ಳಿಯಲ್ಲಿ ಆರಂಭದಲ್ಲಿ ಒಂದು ಮತಗಟ್ಟೆಯಲ್ಲಿ ಇವಿಎಂ ಮತಯಂತ್ರದಲ್ಲಿ ಗೊಂದಲ ಉಂಟಾದರೂ, ಕೂಡಲೇ ಬದಲಿ ವ್ಯವಸ್ಥೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾದರು. ಈ ಚುನಾವಣೆಯಲ್ಲಿ ಗಂಗೊಳ್ಳಿ ಗ್ರಾಮದ ಮತದಾರರಿಗೆ ಎಡಗೈ ಮಧ್ಯದ ಬೆರಳಿಗೆ ಶಾಯಿ ಹಾಕಲಾಯಿತು.

3 ಅತಿಸೂಕ್ಷ್ಮ ಮತಗಟ್ಟೆ
ಒಟ್ಟು ಇರುವ 12 ಮತಗಟ್ಟೆಗಳ ಪೈಕಿ 9 ಸೂಕ್ಷ್ಮ ಮತಗಟ್ಟೆಗಳು ಹಾಗೂ 3 ಅತಿಸೂಕ್ಷ್ಮ ಮತಗಟ್ಟೆಗಳನ್ನಾಗಿ ವಿಂಗಡಿಸಲಾಗಿತ್ತು. ಸೂಕ್ಷ್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದ ಕುರಿತು ವರದಿಯಾಗಿಲ್ಲ. 

ಜ. 4 : ಮತ ಎಣಿಕೆ
ಕಣದಲ್ಲಿರುವ 85 ಅಭ್ಯರ್ಥಿಗಳ ಭವಿಷ್ಯ ಜ. 4 ರಂದು ನಿರ್ಧಾರವಾಗಲಿದೆ. ಜ. 4 ರಂದು ಬೆಳಗ್ಗೆ 8 ಗಂಟೆಗೆ ಕುಂದಾಪುರದ ಮಿನಿವಿಧಾನಸೌಧದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. 

ಮೀನುಗಾರಿಕೆಗೆ ರಜೆ
ಚುನಾವಣೆ ಸಂಬಂಧ ಗಂಗೊಳ್ಳಿ ಬಂದರಿನಲ್ಲಿ ಬುಧವಾರ ಮೀನುಗಾರಿಕಾ ಚಟುವಟಿಕೆಗೆ ರಜೆ ನೀಡಲಾಗಿತ್ತು. ಈ ದಿನ ಯಾವುದೇ ಮೀನುಗಾರಿಕಾ ಚಟುವಟಿಕೆ ನಡೆದಿಲ್ಲ.

ಯಡ್ತರೆ, ಬೈಂದೂರು: ಬಿರುಸಿನ ಮತದಾನ

ಬೈಂದೂರು:
ಯಡ್ತರೆ ಮತ್ತು ಬೈಂದೂರು ಗ್ರಾ.ಪಂ ಚುನಾವಣೆ ಶಾಂತಿಯುತವಾಗಿ ನಡೆಯಿತು. ಸ್ಥಳೀಯ ಚುನಾವಣೆಯಾದ ಕಾರಣ ಹಾಗೂ ತಾಲೂಕು ಕೇಂದ್ರದ ಪ್ರಮುಖ ಗ್ರಾಮಗಳಾಗಿರುವ ಯಡ್ತರೆ ಮತ್ತು ಬೈಂದೂರಿನಲ್ಲಿ ಕಾರ್ಯಕರ್ತರ ನಡುವೆ ಗೆಲುವಿಗಾಗಿ ಸಾಕಷ್ಟು ಪೈಪೋಟಿಗೆ ಕಸರತ್ತು ನಡೆದಿತ್ತು.

ಯಡ್ತರೆ ಗ್ರಾಮದಲ್ಲಿ 21 ಹಾಗೂ ಬೈಂದೂರು ಗ್ರಾಮದಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಬೆಳಗ್ಗೆ ಮೈಕಳ ಹಾಗೂ ಮಯ್ನಾಡಿ ಬೂತ್‌ನಲ್ಲಿ ಮತಯಂತ್ರ ಕೈಕೊಟ್ಟಿದ್ದು ಚುನಾವಣಾ ಪ್ರಾರಂಭವಾಗುವ ಸಮಯದೊಳಗೆ ಅಧಿಕಾರಿಗಳು ದುರಸ್ತಿ ಮಾಡಿಕೊಟ್ಟಿದ್ದರು.ಹೀಗಾಗಿ ಮತದಾನಕ್ಕೆ ಯಾವುದೇ ತೊಂದರೆಯಾಗಿಲ್ಲ. 4 ಗಂಟೆಯ ವೇಳೆಗೆ ಬೈಂದೂರು ಗ್ರಾಮದಲ್ಲಿ  ಶೇ. 55ಹಾಗೂ ಯಡ್ತರೆಯಲ್ಲಿ ಶೇ. 52 ಮತದಾನ ನಡೆದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.