ಕೋಡಿ: ಇನ್ನೂ ಮೇಲೇಳಲಿಲ್ಲ ಪುರಸಭೆಯ ನೀರಿನ ಟಾಂಕಿ


Team Udayavani, Jan 7, 2019, 8:15 PM IST

kodi-tank-7-1.jpg

ಕುಂದಾಪುರ: ಕೋಡಿ ಭಾಗದ ಜನತೆ ಪ್ರತಿನಿತ್ಯ ಈ ಭಾಗದಲ್ಲಿ ಹಾದುಹೋಗುವಾಗ ಇಂದೆಷ್ಟಾಗಿದೆ ಎಂದು ನೋಡಿ ಹ್ವಾಯ್‌… ಇಷ್ಟೆ  ಕಾಣಿ ಎಂದು ಮುಖ ತಿರುಗಿಸಿ ಹೋಗುವ ಕಾಮಗಾರಿ ಇದು ಎನ್ನುತ್ತಾರೆ ಜನ. ಈ ತಿಂಗಳು ಆಗುತ್ತದೆ, ಮುಂದಿನ ತಿಂಗಳು ಆಗುತ್ತದೆ ಎಂದು ಜನತೆ ಕಾದದ್ದೇ ಬಂತು. ಅಂದಿನ ಜನಪ್ರತಿನಿಧಿಗಳು ಕೂಡ ತಮ್ಮ ಅವಧಿಯಲ್ಲೇ ಕಾಮಗಾರಿ ಆಗುತ್ತದೆ ಎಂದು ಹೇಳಿಕೊಂಡಿದ್ದರು. ಆದರೆ ಸಮಯ ಇಷ್ಟಾದರೂ ಕಾಮಗಾರಿ ನಡೆಯುವುದು ಅಷ್ಟರಲ್ಲೇ ಇದೆ ಎಂಬಂತಿದೆ.

ಇಷ್ಟಕ್ಕೂ ಕೋಡಿ ಭಾಗದಲ್ಲಿ ಜಲ್ಲಿಕಲ್ಲು ತಂದು ಸುರಿದು, ಹೊಂಡ ತೆಗೆದು ಅದೆಷ್ಟು ಸಮಯವಾಯಿತೋ ಗೊತ್ತಿಲ್ಲ. ಸ್ಥಳೀಯರನ್ನು ಕೇಳಿದರೆ ಕೆಲಸಗಾರರು ಎಲ್ಲೋ ಹೋಗಿದ್ದಾರೆ‌, ಇಷ್ಟೇ ಕೆಲಸ ನಡೆದದ್ದು ಎಂದು ತೋರಿಸುತ್ತಾರೆ. ಕೋಡಿಯಲ್ಲೊಂದು ಟ್ಯಾಂಕಿ ಕಾಮಗಾರಿ ಪೂರ್ಣವಾದರೆ ಕುಂದಾಪುರದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಬಹುದು ಎಂಬ ಆಶಾಭಾವದಲ್ಲಿದ್ದಾರೆ. ಆದರೆ ಕಾಮಗಾರಿಯ ನಿಧಾನಗತಿ ಮಾತ್ರ ಜನರಿಗೆ ಬೇಸರ ತರಿಸಿದೆ.

35.5 ಕೋ.ರೂ. ಯೋಜನೆ
ಕುಂದಾಪುರ ಪುರಸಭೆ ವ್ಯಾಪ್ತಿಯ ಜನರಿಗೆ, ವಾಣಿಜ್ಯಉಪಯೋಗಕ್ಕೆ ದಿನದ 24 ತಾಸು ನೀರು ಒದಗಿಸಲು ಯೋಜನೆಯ ಕಾಮಗಾರಿ ಆಗುತ್ತಿದೆ. 23.1 ಕೋ.ರೂ.ಗಳಲ್ಲಿ ಕಾಮಗಾರಿ ನಡೆಯುತ್ತಿದ್ದು ಏಶ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಸಾಲದಿಂದ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಹೂಡಿಕೆ ಯೋಜನೆ (ಜಲಸಿರಿ) ಮೂಲಕ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಕರ್ನಾಟಕ ಸಮಗ್ರ ನೀರು ನಿರ್ವಹಣೆ ಹೂಡಿಕೆಯಲ್ಲಿ ಕಾಮಗಾರಿ ನಡೆಯುತ್ತಿದೆ.

ಕಾಮಗಾರಿಗೆ ಕಲ್ಕತ್ತಾದ ಮೆ| ಜಿ.ಕೆ. ಡಬ್ಲ್ಯೂಕನ್ಸಲ್ಟ್ ಸಂಸ್ಥೆ ತಾಂತ್ರಿಕ ಸಲಹೆ ನೀಡುತ್ತಿದೆ. 2017ರಲ್ಲಿ ಕಾಮಗಾರಿಗೆ ಟೆಂಡರ್‌ ಮಂಜೂರಾಗಿದೆ. ಒಟ್ಟು ಅವಧಿ 25 ತಿಂಗಳು. ಆದ್ದರಿಂದ ಆದಷ್ಟು ಶೀಘ್ರ ಕಾಮಗಾರಿ ಮುಗಿಸಬೇಕಿದೆ. ಕಾಮಗಾರಿ ಮುಗಿದ ನಂತರ 96 ತಿಂಗಳು ಅಂದರೆ 9 ವರ್ಷ ಅದರ ನಿರ್ವಹಣೆ ಹೊಣೆಯೂ ಕಾಮಗಾರಿ ನಿರ್ವಹಿಸಿದ ಸಂಸ್ಥೆಯದ್ದೇ ಆಗಿರುತ್ತದೆ. ಹಾಗಾಗಿ ಕಾಮಗಾರಿಗೆ 23.1 ಕೋ.ರೂ. ನೀಡಿದ್ದರೆ ಅದರ ನಿರ್ವಹಣೆಗೆ ಎಂದೇ 12.4 ಕೋ.ರೂ. ನೀಡಲಾಗುತ್ತಿದೆ. ಒಟ್ಟು 35.5 ಕೋ.ರೂ. ವೆಚ್ಚದ ಕಾಮಗಾರಿ ಇದಾಗಿದೆ.

ಎರಡು ಕಡೆ ಟ್ಯಾಂಕಿ ರಚನೆಯಾಗಬೇಕಿದ್ದು ಸಂಗಮ್‌ ಬಳಿ ರಚನೆಯಾಗುತ್ತಿದೆ. ಪೂರ್ಣ ಹಂತಕ್ಕೆ ತಲುಪಿದೆ. ಕೋಡಿ ಸಮೀಪ ಕಡಲ ತೀರದಲ್ಲಿ ಟ್ಯಾಂಕಿ ರಚನೆ ಕಾಮಗಾರಿಗೆ ಸಿದ್ಧತೆ ಮಾತ್ರ ನಡೆದಿದೆ. 32 ಕಿ.ಮೀ. ಪೈಪ್‌ಲೈನ್‌ ಎರಡು ಟ್ಯಾಂಕಿಗಳಿಂದ 6 ಸಾವಿರ ಸಂಪರ್ಕಗಳಿಗೆ ನೀರು ಕೊಡಲು ಒಟ್ಟು 32 ಕಿ.ಮೀ. ಪೈಪ್‌ಲೈನ್‌ ಕಾಮಗಾರಿ ನಡೆಯಲಿದೆ. ಈಗ 15 ಕಿ.ಮೀ. ಪೈಪ್‌ಲೈನ್‌ ಹಾಕಿಯಾಗಿದೆ. ಪ್ರಸ್ತುತ ಪುರಸಭೆ ವ್ಯಾಪ್ತಿಯಲ್ಲಿ 3 ಸಾವಿರ ನೀರಿನ ಸಂಪರ್ಕಗಳಿವೆ. ಇನ್ನು ಇದು ದುಪ್ಪಟ್ಟು ಆಗಲಿದ್ದು ದಿನವಿಡೀ ನೀರು ಒದಗಿಸಲು ಈ ಯೋಜನೆ ರೂಪಿಸಲಾಗಿದೆ.

ಪೈಪ್‌ಲೈನ್‌
ಕೋಡಿಯಿಂದ ನೀರಿನ ಯೋಜನೆಗಾಗಿ ಭಾರೀ ಗಾತ್ರದ ಪೈಪ್‌ಗಳ ಅಳವಡಿಕೆ ಮಾಡಲಾಗುತ್ತಿದೆ. ದೊಡ್ಡ ದೊಡ್ಡ ಗಾತ್ರದ ಪೈಪ್‌ಗಳನ್ನು ತಂದು ಹಾಕಲಾಗಿದ್ದು ರಸ್ತೆ ಪಕ್ಕ ಜೆಸಿಬಿ ಮೂಲಕ ಕಣಿ ತೆಗೆದು ಪೈಪ್‌ಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ.

ತರಾತುರಿಯಲ್ಲಿ ಆಗುತ್ತಿದೆ
ಸಂಗಮ್‌ ಬಳಿಯ ಟಾಂಕಿ ರಚನೆ ಕಾಮಗಾರಿ ಚೆನ್ನಾಗಿ ನಡೆದು ಪೂರ್ಣ ಹಂತಕ್ಕೆ ತಲುಪಿದೆ. ಕೋಡಿ ಕಾಮಗಾರಿ ಕೂಡಾ ಆಗುತ್ತಿದೆ. ಪೈಪ್‌ಲೈನ್‌ ರಚನೆ ಕಾರ್ಯ ತರಾತುರಿಯಲ್ಲಿ ನಡೆಯುತ್ತಿದೆ. ಜನರ ಉಪಯೋಗಕ್ಕಾಗಿ ಕುಡಿಯುವ ನೀರಿನ ಬೃಹತ್‌ ಯೋಜನೆಯಾದ ಕಾರಣ ಒಂದಷ್ಟು ಗೊಂದಲ ಸಹಜ.
– ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ, ಪುರಸಭೆ

— ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.