ಪಾಂಗಾಳ: ಸಂಪರ್ಕ ರಸ್ತೆಯ ಮರು ಡಾಮರೀಕರಣಕ್ಕೆ ಜನಾಗ್ರಹ


Team Udayavani, Jan 9, 2019, 8:45 PM IST

kaupu-road-9-1.jpg

ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗೆ ಬಲಿಯಾದ ಪಾಂಗಾಳ-ಆಲಡೆ ರಸ್ತೆ ದುರಸ್ತಿ ಕಾಣದೆ ಗ್ರಾಮಸ್ಥರು ಸಂಚಾರಕ್ಕೆ ಸಂಕಟ ಪಡುವುದರೊಂದಿಗೆ ಇಲಾಖಾಧಿಕಾರಿಗಳಿಗೆ ಹಿಡಿಶಾಪ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿ ನಿರ್ಮಾಣಗೊಂಡು ಕಳೆದ 5-6 ವರ್ಷಗಳಿಂದಲೂ ಸ್ಥಳೀಯರು, ಗ್ರಾಮಸ್ಥರು, ವಾಹನ ಸಂಚಾರಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮನವಿಗಳನ್ನು ನೀಡುತ್ತಲೇ ಇದ್ದರು. ಕಾಪುವಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲೂ ಗಮನ ಸೆಳೆದಿದ್ದರು. ಆದರೆ ಈವರೆಗೆ ಸಮಸ್ಯೆ ಬಗೆಹರಿದಿಲ್ಲ.

ಜಾತ್ರೆ ವೇಳೆ ಹೆಚ್ಚಿನ ದಟ್ಟನೆ
ಈ ರಸ್ತೆಯು ಈ ಭಾಗದ ಪ್ರಮುಖ ಇತಿಹಾಸ, ಕಾರಣಿಕ ಪ್ರಸಿದ್ಧ ಎರಡು ಆಲಡೆಗಳ ಸಹಿತ ಸುಮಾರು 80ರಷ್ಟು ಮನೆಗಳಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ನಿತ್ಯ ನೂರಾರು ಜನರು ಈ ರಸ್ತೆಯನ್ನೇ ಸಂಪರ್ಕಕ್ಕೆ ಆಶ್ರಯಿಸಿದ್ದಾರೆ. ವರ್ಷಕ್ಕೆ ಎರಡು ದಿನ ನಡೆಯುವ ಆಲಡೆಗಳ ಜಾತ್ರಾ ಸಂದರ್ಭ (ಸಿರಿ ಜಾತ್ರೆ) ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಈ ವೇಳೆ ವಾಹನ ಸಂಚಾರಕ್ಕೆ, ಪಾರ್ಕಿಂಗ್‌ಗೆ ಅಡೆತಡೆ ಉಂಟಾಗುತ್ತಿದ್ದು, ಜನರು ಬವಣೆ ಪಡುವಂತಾಗಿದೆ.

ವಾಹನ ಸಂಚರಿಸಲು ಹಿಂದೇಟು 
ಮಳೆಗಾಲದಲ್ಲಂತೂ ಇಲ್ಲಿನ ಈ ಮಣ್ಣಿನ ರಸ್ತೆಯ ಕೆಸರು ನೀರಿನ ಅಭಿಷೇಕ ತಪ್ಪಿದ್ದಲ್ಲ. ವಾಹನ ಸಂಚಾರವೂ ಕಷ್ಟಕರವಾಗಿದ್ದು, ಶಾಲಾ ವಾಹನಗಳೂ ಮಕ್ಕಳನ್ನು ಕರೆತರಲು ಈ ರಸ್ತೆಯಲ್ಲಿ ಸಂಚರಿಸಲು ಒಪ್ಪುತ್ತಿಲ್ಲ. ಈ ಬಗ್ಗೆ ಸ್ಥಳೀಯ ಇನ್ನಂಜೆ ಗ್ರಾ.ಪಂ. ಗಮನವನ್ನು ಗ್ರಾಮಸ್ಥರು ಸೆಳೆದಿದ್ದು ಪಂಚಾಯತ್‌ ಸಭೆಯಲ್ಲಿ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿ, ಹೆದ್ದಾರಿ ಇಲಾಖೆಗಳಿಗೆ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿ ಪತ್ರವನ್ನೂ ಬರೆಯಲಾಗಿದೆ. ಇಷ್ಟಾದರೂ ಹೆದ್ದಾರಿ ಗುತ್ತಿಗೆದಾರರ ದಿವ್ಯ ನಿರ್ಲಕ್ಷ್ಯ, ಇಲಾಖಾಧಿಕಾರಿಗಳ ಮೌನದ ಬಗ್ಗೆ ಜನರು ಸಹನೆ ಕಳೆದುಕೊಂಡಿದ್ದಾರೆ.

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಿ
ಪಾಂಗಾಳ-ಆಲಡೆ-ಮಂಡೇಡಿ ಸಂಪರ್ಕದ ಪ್ರಮುಖ ರಸ್ತೆ ಇದಾಗಿದೆ. ಹೆದ್ದಾರಿ ಕಾಮಗಾರಿಯಿಂದ ಇದ್ದ ಡಾಮರು ರಸ್ತೆಯನ್ನು ನಾವು ಕಳೆದುಕೊಳ್ಳುವಂತಾಗಿದೆ. ಮರು ಡಾಮರೀಕರಣ ಮಾಡಿಲ್ಲದಿರುವುದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಕೂಡಲೇ ಇಲಾಖೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು.
– ರಮಾನಂದ ಶೆಟ್ಟಿ, ಮುಕ್ಕಾಲಿ ಮನೆ

ಪ್ರತಿಫ‌ಲ ಶೂನ್ಯ 
ಈ ಸಮಸ್ಯೆಯನ್ನು ಜನಸ್ಪಂದನ ಸಭೆಯಲ್ಲಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದಿದ್ದು, ಇದುವರೆಗೂ ಪ್ರತಿಫಲ ಶೂನ್ಯವಾಗಿದೆ. ಪಂಚಾಯತ್‌ ಸಾಮಾನ್ಯ ಸಭೆಯಲ್ಲೂ ಈ ಬಗ್ಗೆ ನಿರ್ಣಯದ ಮೂಲಕ ಹೆದ್ದಾರಿ ಇಲಾಖೆಗೂ ನೊಟೀಸ್‌ ನೀಡಲಾಗಿದೆ. ಆದರೂ ಯಾವುದೇ ರೀತಿಯಾದ ಪ್ರತಿಕ್ರಿಯೆ ಇಲ್ಲ. 
– ನಾಗೇಶ್‌ ಭಂಡಾರಿ, ಇನ್ನಂಜೆ ಗ್ರಾ.ಪಂ. ಸದಸ್ಯ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.