ಪಶ್ಚಿಮಘಟ್ಟ: ಮಂಗಗಳ ಸಾವು ಹೆಚ್ಚಳ, ರೋಗ ಭೀತಿ


Team Udayavani, Jan 11, 2019, 8:25 PM IST

monkey-group-11-1.jpg

ಸಿದ್ದಾಪುರ: ಪಶ್ಚಿಮಘಟ್ಟದ ಪ್ರದೇಶಗಳಲ್ಲಿ ಮಂಗಗಳ ಸಾವು ಹೆಚ್ಚುತ್ತಿದೆ. ಇದರಿಂದ ನಾಗರಿಕರಲ್ಲಿ ಮಂಗನ ಕಾಯಿಲೆಯ ರೋಗದ ಭೀತಿ ಹೆಚ್ಚುತ್ತಿರುವುದರಿಂದ ಆತಂಕ ದೂರ ಮಾಡಲು ನಡೆಯಬೇಕಾಗಿದೆ ಜಾಗೃತಿ ಸಭೆಗಳು.

ಶಿವಮೊಗ್ಗ ಜಿಲ್ಲೆಯ ಸಾಗರ ಪರಿಸರದಲ್ಲಿ ಮತ್ತೆ ವ್ಯಾಪಿಸುತ್ತಿರುವ ಮಂಗನ ಕಾಯಿಲೆ ಇದೀಗ ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉಡುಪಿ ಜಿಲ್ಲೆಗೂ ವ್ಯಾಪಿಸುವ ಭೀತಿ ಎದುರಾಗಿದೆ. ಕುಂದಾಪುರ ತಾಲೂಕಿನ ಸಿದ್ಧಾಪುರದಲ್ಲಿ ಒಂದು, ಹೊಸಂಗಡಿಯಲ್ಲಿ ಮೂರು, ಬೈಂದೂರಿನ ಶಿರೂರಿನಲ್ಲಿ ಎರಡು, ಬೆಳ್ವೆಯ ಅಲ್ಪಾಡಿಯಲ್ಲಿ ಒಂದು, ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ಒಂದು, ಕಂಡ್ಲೂರಿನಲ್ಲಿ ಒಂದು ಹೀಗೆ ಒಟ್ಟು  9 ಮಂಗಗಳ  ಮೃತ ದೇಹ ಪತ್ತೆಯಾಗಿವೆ. ಇನ್ನೂ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಸಾರ್ವಜನಿಕರಲ್ಲಿ ಸ್ವಾಭಾವಿಕವಾಗಿ ಮಂಗನ ಕಾಯಿಲೆಯ ಭೀತಿ ಎದುರಾಗಿದೆ.

ಇಲಾಖೆಗಳ ಶ್ರಮ
ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಂಗಗಳ‌ ಸಾವು ಹೆಚ್ಚಾಗುತ್ತಿರುವುದರಿಂದ ಇಲಾಖೆಗಳು ಕೂಡ ಜಾಗೃತಗೊಂಡು ಶ್ರಮವಹಿಸಿ ಕೆಲಸ ಮಾಡುತ್ತಿವೆ. ಸ್ಥಳೀಯ ಪಂಚಾಯತ್‌ಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪಶು ಚಿಕಿತ್ಸಾಲಯಗಳು, ಅರಣ್ಯ ಇಲಾಖೆಗಳು ಜಂಟಿಯಾಗಿ ಕಾರ್ಯಚರಣೆ ನಡೆಸುತ್ತಿವೆ. ಮಂಗಗಳ ಮೃತ ದೇಹ ಪತ್ತೆಯ ಸುದ್ಧಿ ತಿಳಿಯುತ್ತಿದ್ದಂತೆ ಇಲಾಖೆಗಳು ಸ್ಥಳಕ್ಕೆ ಭೆೇಟಿ ನೀಡಿ, ಮೃತ ದೇಹದ ಸುತ್ತ ಯಾರೂ ಬರದ ಹಾಗೆ ಜಾಗೃತಿ ಮಾಡುತ್ತಿದ್ದಾರೆ.

ವೈದ್ಯರ ತುರ್ತು ಸಭೆ
ಪರಿಸರದಲ್ಲಿ ಕರಪತ್ರಗಳನ್ನು ಹಂಚಲಾಗುತ್ತಿದೆ. ಕುಂದಾಪುರ, ಬೈಂದೂರು ಹಾಗೂ ಕಾರ್ಕಳಗಳ ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರ ತುರ್ತು ಸಭೆಯನ್ನು ಕರೆದು, ಅವರಿಗೆ ತೆಗೆದುಕೊಳ್ಳಬೇಕಾದ ಎಲ್ಲ ಕ್ರಮಗಳನ್ನು ವಿವರಿಸಲಾಗುವುದು. ಜ್ವರ ಬಂದರೆ ಕಡೆಗಣಿಸದೇ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರೋಹಿಣಿ ಅವರು ತಿಳಿಸಿದ್ದಾರೆ.

ಅಧಿಕೃತವಾಗಿ ದೃಢಪಟ್ಟಿಲ್ಲ
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಇದೆ. ಉಡುಪಿ ಜಿಲ್ಲೆಯಲ್ಲಿ ಈ ಕಾಯಿಲೆಯ ಬಗ್ಗೆ ಅಧಿಕೃತವಾಗಿ ದೃಢಪಟ್ಟಿಲ್ಲ. ಪಶ್ಚಿಮ ಘಟ್ಟ ಪ್ರದೇಶ ಶಿವಮೊಗ್ಗ ಗಡಿಗೆ ತಾಗಿಕೊಂಡಿರುವುದರಿಂದ ಸತ್ತ ಮಂಗನ ಮರಣೋತ್ತರ ಪರೀಕ್ಷೆ ನಡೆಸುವ ಮೂಲಕ ಸ್ಯಾಂಪಲ್‌ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕಾಯಿಲೆಯ ಬಗ್ಗೆ ದೃಢೀಕರಿಸಿಕೊಳ್ಳುತ್ತೇವೆ. ಮಂಗನ ಕಾಯಿಲೆ ಉಣ್ಣೆಯಿಂದ ಹರಡುವ ಕಾಯಿಲೆಯಾಗಿದೆ. ಆದರಿಂದ ಭಯಪಡುವ ಅಗತ್ಯತೆ ಇಲ್ಲ. ಜಾಗೃತೆ ವಹಿಸಿದರೆ ಸಾಕಾಗುತ್ತದೆ. ಕಾಡಿಗೆ ಹೋಗುವಾಗ ಡಿಎಂಪಿ ತೈಲ ಮೈಗೆ ಸವರಿಕೊಂಡು ಹೋದರೆ ಸಾಕಾಗುತ್ತದೆ. ಗಡಿ ಭಾಗಗಳ ಗ್ರಾ. ಪಂ.ಗಳು ವಿಶೇಷ ಗ್ರಾಮ ಸಭೆ ಕರೆಯುವಂತೆ ಸೂಚಿಸಿದ್ದೇವೆ. ಇಲಾಖೆ ಬಂದು ಮಾಹಿತಿ ನೀಡುತ್ತದೆ ಎಂದು ಉಡುಪಿ ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ ಭಟ್‌ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಜನರಲ್ಲಿ  ಹೀಗೊಂದು ಭಯ…
ಶಿವಮೊಗ್ಗ ಜಿಲ್ಲೆಯ ಗಡಿ ಭಾಗಗಳಲ್ಲಿ ವ್ಯಾಪಕವಾದ ಮಂಗನ ಕಾಯಿಲೆ ಹರಡುತ್ತಿದೆ. ಗಡಿ ಭಾಗಗಳ ಮಂಗಗಳು ಉಡುಪಿ ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಲಗ್ಗೆ ಇಡುತ್ತಿವೆ. ಈಗಾಗಲೇ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಂಗಗಳ ಹಾವಳಿ ಅತೀ ಹೆಚ್ಚಾಗಿವೆ. ಕೃಷಿ ತೋಟಗಳಿಗೆ ಸೇರದಂತೆ ಆಗಾಗ ಮನೆಗಳಿಗೂ ದಾಳಿ ಇಡುತ್ತಿವೆ. ಕಾಯಿಲೆ ಇರುವ ಮಂಗಗಳು ಕೂಡ ಇರುವುದರಿಂದ ಅವುಗಳನ್ನು ಗುರುತಿಸುವುದು ಮತ್ತು ನಿಯಂತ್ರಣ ಹೇಗೆ? ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಎಲ್ಲರೂ ಕೃಷಿ ಕುಟುಂಬಗಳೇ ಇರುವುದರಿಂದ ಕೃಷಿ ಚಟುವಟುಕೆಗಾಗಿ ಕಾಡಿಗೆ ಹೋಗಬೇಕಾದ ಪರಿಸ್ಥಿತಿ. ಇಂತಹ ಸಂದರ್ಭದಲ್ಲಿ ಕಾಯಿಲೆಗಳು ಆವರಿಸಿಕೊಂಡಲ್ಲಿ ಎನ್ನು ಮಾಡುವುದು? ಚಿಕಿತ್ಸೆಗೆ ಮೊದಲು ಎಲ್ಲಿಗೆ ಹೋಗಬೇಕು? ಮಂಗನ ಕಾಯಿಲೆಯ ಲಕ್ಷಣಗಳು ಏನು? ಕೃಷಿ ಚಟುವಟಿಕೆ ನಡೆಸುವವರಿಗೆ ಆಗಾಗ ಸಣ್ಣಪುಟ್ಟ ಜ್ವರಗಳು ಬರುತ್ತಿರುತ್ತವೆ. ಹಾಗಿರುವಾಗ ಮೊದಲು ಏನು ಮಾಡಬೇಕು ಎನ್ನುವ ಹಲವಾರು ಪ್ರಶ್ನೆಗಳು ಇಂದು ಗ್ರಾಮೀಣ ಜನರು ಕೇಳುತ್ತಿದ್ದಾರೆ. ಮಂಗನ ಕಾಯಿಲೆಯ ಭೀತಿಯಿಂದ ಕೆಲವು ಕಡೆಗಳಲ್ಲಿ ಕಾಡಿನ ಕಡೆಗೆ ಹೋಗುವವರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನುವ ಮಾತು ಕೂಡ ಕೇಳಿ ಬರುತ್ತಿದೆ.

ಮುಂಜಾಗ್ರತೆ ವಹಿಸಿ
ಮಂಗಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪರಿಸರದ ಜನರು ಕಾಡುಗಳಿಗೆ ತೆರಳುವುದನ್ನು ನಿಯಂತ್ರಿಸಬೇಕು. ಅನಗತ್ಯವಾಗಿ ಯಾರೂ ಕಾಡು ಪ್ರದೇಶಗಳಿಗೆ ಹೋಗಬೇಡಿ. ಅನಿವಾರ್ಯವಾದರೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಹೋಗಿ. ಸಾಕು ಪ್ರಾಣಿಗಳನ್ನು ಕಾಡಿನತ್ತ ಬಿಡಬೇಡಿ. ಕಾಡಿಗೆ ಹೋಗಬೇಕಾದ ಸಂದರ್ಭದಲ್ಲಿ ಡಿಎಂಪಿ ತೈಲವನ್ನು ಮೈಗೆ ಸವರಿಕೊಂಡು ಹೋಗಬಹುದ್ದಾಗಿದೆ. ಪಶ್ವಿ‌ಮಘಟ್ಟ ತಪ್ಪಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಎಂಪಿ ತೈಲ ಲಭ್ಯ ಇದೆ. 
– ಡಾ| ನಾಗಭೂಷಣ ಉಡುಪ, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.