ಉಡುಪಿ ಜಿಲ್ಲೆ: 6 ಮಂಗಗಳ ಶವ ಪತ್ತೆ 


Team Udayavani, Jan 20, 2019, 4:11 AM IST

kyas.jpg

ಉಡುಪಿ/ಕುಂದಾಪುರ/ಸಿದ್ದಾಪುರ: ಜಿಲ್ಲೆಯಲ್ಲಿ ಶನಿವಾರ ಒಟ್ಟು ಆರು ಮಂಗಗಳ ಮೃತ ದೇಹ ಪತ್ತೆಯಾಗಿದೆ.
ಕುಂದಾಪುರ ತಾಲೂಕಿನ ಬೆಳ್ವೆ, ಮಡಾಮಕ್ಕಿ, ವಂಡ್ಸೆ, ನಾಡ, ಸಿದ್ದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕೆಂಜೂರು, ಕಾರ್ಕಳ ತಾಲೂಕಿನ ಕಡ್ತಲ ದೊಡೇರಂಗಡಿಯಲ್ಲಿ ಮಂಗಗಳ ಮೃತ ದೇಹಗಳು ಪತ್ತೆಯಾದವು. ಇದರಲ್ಲಿ ಮಡಾಮಕ್ಕಿ ಮತ್ತು ಕಡ್ತಲದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಎರಡು ಕೊಳೆತ ಸ್ಥಿತಿಯಲ್ಲಿತ್ತು. ಸಿದ್ದಾಪುರ, ವಂಡ್ಸೆ ಪ್ರದೇಶದಲ್ಲಿ ಈಗಾಗಲೇ ಸಿಕ್ಕಿದ ಮಂಗಗಳಿಗೆ ಕಾಯಿಲೆ ಇರುವುದು ದೃಢಪಟ್ಟ ಕಾರಣ ಮತ್ತೆ ಪರೀಕ್ಷೆಗೆ ಕಳುಹಿಸಿಲ್ಲ. 

ಜ್ವರ ಬಂದ ಮೂವರ ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇವರಾರಿಗೂ ಮಂಗನ ಕಾಯಿಲೆ ಇಲ್ಲ ಎಂದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಕಮಲಶಿಲೆ ದೇವಸ್ಥಾನದಿಂದ 25,000 ರೂ. ಮೌಲ್ಯದ ಡಿಎಂಪಿ ತೈಲಕ್ಕೆ ಬೇಡಿಕೆ ಬಂದಿದೆ.

ಕೆಎಂಸಿ: ಮತ್ತೆ ಮೂವರು ದಾಖಲು
ಉಡುಪಿ: ಶಂಕಿತ ಮಂಗನಕಾಯಿಲೆ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ ಮೂವರು ಶನಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ ಕೆಎಂಸಿಯಲ್ಲಿ 101 ಮಂದಿ ಶಂಕಿತ ಮಂಗನ ಕಾಯಿಲೆ ಚಿಕಿತ್ಸೆಗೆ ದಾಖಲಾಗಿ 65 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.

ಕಡಬ: ಮತ್ತೆ 3 ಶವ ಪತ್ತೆ
ಕಡಬ ಕುಟ್ರಾಪ್ಪಾಡಿ ಗ್ರಾಮದಲ್ಲಿ ಇನ್ನೂ 3 ಮಂಗಗಳ ಶವಗಳು ಪತ್ತೆಯಾಗಿವೆ. ಈ ವರೆಗೆ ತಾಲೂಕಿನಲ್ಲಿ ಒಟ್ಟು 5 ಶವಗಳು ಪತ್ತೆಯಾಗುವುದರೊಂದಿಗೆ ಜನರಲ್ಲಿ ಮಂಗನಕಾಯಿಲೆಯ ಭೀತಿ ಮನೆಮಾಡಿದೆ.ರಾಮಕುಂಜ ಗ್ರಾ.ಪಂ. ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ ಆದಂ ಅವರಿಗೆ ಸೇರಿದ ತೋಟದಲ್ಲಿ ಜ. 16ರಂದು 1 ಮಂಗನ ಶವ ಪತ್ತೆಯಾಗಿತ್ತು. ಅದಕ್ಕೂ ಮೊದಲು ಕುಟ್ರಾಪ್ಪಾಡಿ ಗ್ರಾಮದ ಉಳಿಪ್ಪು ಅರಣ್ಯ ಪ್ರದೇಶದಲ್ಲಿ ಸಂಪೂರ್ಣ ಕೊಳೆತುಹೋಗಿದ್ದ ಶವ ಪತ್ತೆಯಾಗಿತ್ತು. ಆದ್ದರಿಂದ  ಶವದ ಭಾಗಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲು ಸಾಧ್ಯವಾಗಿರಲಿಲ್ಲ.  ಈ ಮಧ್ಯೆ ವಾರದ ಹಿಂದೆ ಕುಟ್ರಾಪ್ಪಾಡಿ ಗ್ರಾಮದ ಕುಂಟೋಡಿ ಜಯಚಂದ್ರ ರೈ ಅವರಿಗೆ ಸೇರಿದ ತೋಟದಲ್ಲಿ ಪತ್ತೆಯಾಗಿದ್ದ ಮಂಗನ ಶವವನ್ನು ಸ್ಥಳೀಯರು ಮಣ್ಣಿನಲ್ಲಿ ಹೂತು ಬಳಿಕ ಕಡಬ ಸರಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿಯ ಕ್ಯಾಸನೂರು ಕಾಡಿನ ಕಾಯಿಲೆ (ಕೆಎಫ್‌ಡಿ) ಘಟಕದ ವೈದ್ಯಾಧಿಕಾರಿಗಳು ಪರಿಸರದಲ್ಲಿ ಕಂಡುಬಂದ ಉಣುಗುಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.ಕುಟ್ರಾಪ್ಪಾಡಿ ಗ್ರಾಮದ ಉರುಂಬಿಯ ಶೇಖರ ಗೌಡ ಅವರ ತೋಟದಲ್ಲಿ ಮತ್ತು ಮೀನಾಡಿಯಲ್ಲಿ  ಹಲವು ದಿನಗಳ ಹಿಂದೆ ಮಂಗ ಸತ್ತಿರುವ ವಿಚಾರ ಶನಿವಾರ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.