ಮಂಗನ ಕಾಯಿಲೆ ಮುಂಜಾಗ್ರತಾ ಕ್ರಮ ಅಗತ್ಯ: ಡಾ| ಪ್ರತಾಪ್ ಕುಮಾರ್
Team Udayavani, Jan 20, 2019, 1:00 AM IST
ತೆಕ್ಕಟ್ಟೆ: ಕುಂದಾಪುರ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ ಅವರ ಮಾರ್ಗದರ್ಶನದಂತೆ ಆರೋಗ್ಯ ಇಲಾಖೆ ಮತ್ತು ಗ್ರಾ.ಪಂ. ಕೊರ್ಗಿ ಅವರ ವತಿಯಿಂದ ಮಂಗನ ಕಾಯಿಲೆ ಹರಡದಂತೆ ಮಂಜಾಗ್ರತೆ ಮಾಹಿತಿ ಶಿಬಿರವು ಗ್ರಾ.ಪಂ. ಸಭಾಭವನದಲ್ಲಿ ಜ. 17ರಂದು ನಡೆಯಿತು.
ಈ ಸಂದರ್ಭ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕೆ. ಪ್ರತಾಪ್ ಕುಮಾರ್ ಮಾತನಾಡಿ, ಕೊರ್ಗಿ ಪರಿಸರದಲ್ಲಿ ಇದುವರೆಗೆ ಮಂಗನ ಕಾಯಿಲೆ ಪ್ರಕರಣಗಳು ಕಂಡು ಬಂದಿಲ್ಲ. ಆದರೂ ಕೊರ್ಗಿ ಸುತ್ತಮುತ್ತಲ ಗ್ರಾಮಗಳು ಅರಣ್ಯ ಪ್ರದೇಶಕ್ಕೆ ಹೊಂದಿ ಕೊಂಡಿರುವುದರಿಂದ ಮುಂಜಾಗ್ರತೆ ಮುಖ್ಯ ಎಂದು ಹೇಳಿದರು.
ಈ ಸಂದರ್ಭ ಕೊರ್ಗಿ ಗ್ರಾ.ಪಂ. ಅಧ್ಯಕ್ಷೆ ಗಂಗೆ ಕುಲಾಲ್ತಿ, ಉಪಾಧ್ಯಕ್ಷ ಗೌರೀಶ ಹೆಗ್ಡೆ , ತೋಟಗಾರಿಕಾ ಇಲಾಖೆಯ ಸಹಾಯಕ ಅಧಿಕಾರಿ ಮಧುಕರ್, ಗ್ರಾ.ಪಂ. ಸದಸ್ಯರು, ಪ್ರವೀಣ, ಮೋಹನ ಚಂದ್ರ, ಶಿಲ್ಪಾ ಉಪಸ್ಥಿತರಿದ್ದರು.
ಪಿಡಿಒ ಸುಧಾಕರ ಶೆಟ್ಟಿ ಗುಡ್ಡಮ್ಮಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾ.ಪಂ. ಸಿಬಂದಿ ವರ್ಗ ಸಹಕರಿಸಿದರು. ಕಾರ್ಯದರ್ಶಿ ದಿನೇಶ ಶೆಟ್ಟಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ