ರಾ.ಹೆದ್ದಾರಿ ಶಾಲಾ ಪರಿಮಿತಿಯಲ್ಲಿ ಎಚ್ಚರಿಕೆಯ ಫಲಕ ಬೇಕು


Team Udayavani, Jan 22, 2019, 12:50 AM IST

rastreeya-heddari.jpg

ತೆಕ್ಕಟ್ಟೆ: ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ 2018-19ನೇ ಸಾಲಿನ ಮಕ್ಕಳ ಮತ್ತು ಮಹಿಳೆಯರ ವಿಶೇಷ ಗ್ರಾಮ ಸಭೆಯು ಜ.21 ಸೋಮವಾರದಂದು ತೆಕ್ಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಗ್ರಾ.ಪಂ.ಅಧ್ಯಕ್ಷ ಶೇಖರ್‌ ಕಾಂಚನ್‌ ಕೊಮೆ ಅಧ್ಯಕ್ಷತೆಯಲ್ಲಿ ನಡೆಯಿತು. 

ನಿಧಾನವಾಗಿ ಚಲಿಸಿ ಎನ್ನುವ ಸೂಚನಾ ಫಲಕ ಅಳವಡಿಸಿ  
ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಮಾತನಾಡಿ ತೆಕ್ಕಟ್ಟೆ ಹಾಲು ಡೈರಿಯ ಸಮೀಪದ ರಸ್ತೆಗಳಲ್ಲಿ ಗಿಡಗಂಟಿಗಳು ಆವರಿಸಿದ್ದು ನಿತ್ಯ ಶಾಲೆಗೆ ಬರುವಾಗ ಭಯವಾಗುತ್ತಿದೆ.ನಾವು ಶಾಲೆಯಲ್ಲಿ ಸಂಗ್ರಹಿಸಿದ ಪ್ಲಾಸ್ಟಿಕ್‌ ತ್ಯಾಜ್ಯವನ್ನು  ಸಮರ್ಪಕವಾಗಿ ವಿಲೇವಾರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ನಮ್ಮ ಶಾಲಾ ಸಮೀಪದಲ್ಲಿಯೇ ರಾ.ಹೆ.66ರ ಹಾದು ಹೋಗುವುದರಿಂದ  ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ದಾಟಲು ಕಷ್ಟ ಸಾಧ್ಯವಾಗುತ್ತಿದೆ. ವಾಹನಗಳ ವೇಗ ಮಿತಿಗೆ ಕಡಿವಾಣ ಹಾಕುವ ನಿಟ್ಟಿನಿಂದ ಶಾಲಾ ಪರಿಮಿತಿಯಲ್ಲಿ ನಿಧಾನವಾಗಿ ಚಲಿಸಿ ಎನ್ನುವ ಸೂಚನಾ ಫಲಕ ಅಳವಡಿಸಿ ಎಂದು ಆಗ್ರಹಿಸಿದರು. ಶಾಲಾ ಪರಿಸರದ ನೂರು ಮೀಟರ್‌ ಅಂತರದಲ್ಲಿ  ತಂಬಾಕು, ಬೀಡಿ, ಸಿಗರೇಟು ಮಾರಾಟ ನಿಷೇಧ ಎಂದು ಹೇಳುತ್ತಿದ್ದರೂ ಶಾಲಾ ವಠಾರದ ಸಮೀಪ ಕೆಲವು ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಇದನ್ನು ತತ್‌ಕ್ಷಣವೇ ನಿಲ್ಲಿಸಬೇಕು ಎಂದು ಹೇಳಿದರು. 

ನಿರ್ವಹಣೆಗಳಿಲ್ಲದ ವಿದ್ಯಾರ್ಥಿಗಳ ಶೌಚಾಲಯ  
ಕೊಮೆ ಸರಕಾರಿ ಪ್ರಾಥಮಿಕ ಶಾಲೆಯ ಸುರಕ್ಷಾ ಮಾತನಾಡಿ, ಶಾಲಾ ನೀರಿನ ಟ್ಯಾಂಕ್‌ನಲ್ಲಿ ಮುಚ್ಚಳ ಒಡೆದು ಹೋಗಿರುವುದರಿಂದ  ನೀರು ಕಲುಷಿತಗೊಳ್ಳುತ್ತಿದೆ. ಈ ಕಲುಷಿತ ನೀರನ್ನೇ ನಿತ್ಯ ಬಳಕೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ, ತತ್‌ಕ್ಷಣವೇ ಟ್ಯಾಂಕ್‌ಗೆ ಮುಚ್ಚಳ ಅಳವಡಿಸಿ. ಶಾಲಾ ಆಟದ ಮೈದಾನವು ಕೆಂಪು ಮಣ್ಣಿನಿಂದ ಕೂಡಿದ್ದು ನೆಲ ಗಟ್ಟಿಯಾಗಿರುವ ಪರಿಣಾಮ ಆಟವಾಡಲು ಕಷ್ಟ ಸಾಧ್ಯವಾಗುತ್ತಿದೆ. 
ಆದ್ದರಿಂದ ಹೊಯಿಗೆ ಮಣ್ಣನ್ನು ಹಾಕಿ ಆಟವಾಡಲು ಅನುವು ಮಾಡಿಕೊಡಿ.

ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಶೌಚಾಲಯ ಗಳಿದ್ದು ನಿರ್ವಹಣೆಗಳಿಲ್ಲದೆ ಇರುವುದರಿಂದ ನಿತ್ಯ ಬಳಕೆ ಕಷ್ಟಸಾಧ್ಯವಾಗುತ್ತಿದೆ. ಈ ಬಗ್ಗೆ ಗ್ರಾ.ಪಂ. ಗಮನಹರಿಸಿ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದ ಘಟನೆ ಕೂಡಾ ನಡೆಯಿತು.

ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣ ಹಾಕಿ 
 ಮಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಾಸ್ತ ಮಾತನಾಡಿ, ನಮ್ಮ ಶಾಲೆಗೆ ಆವರಣದ ಗೋಡೆಗಳಿಲ್ಲದೆ ಇರುವುದರಿಂದ ಶಾಲಾ ರಜಾ ದಿನಗಳಲ್ಲಿ ಅನ್ಯ ಚಟುವಟಿಕೆಯ ತಾಣವಾಗುತ್ತಿದೆ. ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ರಂಗ ಮಂಟಪದ ಅನಿವಾರ್ಯತೆ ಇದೆ. 

ಶಾಲೆಗೆ ತೆರಳುವ ಮಾರ್ಗದ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್‌, ಕೋಳಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದ್ದು, ಪ್ರಸ್ತುತ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ ಈ ಬಗ್ಗೆ ಗ್ರಾ.ಪಂ.ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. 

ಸ.ಪ.ಪೂ.ಕಾಲೇಜಿನಲ್ಲಿ ಕುಡಿಯುವ ನೀರಿನ ಸಮಸ್ಯೆ
 ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರೀತಾ ಮಾತನಾಡಿ, ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆಗಳಿದ್ದು  ನೀರು ಶುದ್ಧೀಕರಣ ಯಂತ್ರವನ್ನು ಅಳವಡಿಸಬೇಕಾಗಿದೆ. ಶಾಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಸುಸಜ್ಜಿತವಾದ ಶೌಚಾಲಯದ ಆವಶ್ಯಕತೆಯಿದ್ದು ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ  ಮಾರ್ಗದರ್ಶಿ ಅಧಿಕಾರಿ ಎಚ್‌.ವಿ.ಇಬ್ರಾಹಿಂಪೂರ್‌, ಮಕ್ಕಳ ಸಂಘದ ಪ್ರತಿನಿಧಿಗಳಾದ ಧನ್ಯಾ ಪಟಗಾರ್‌, ಸಮರ್ಥ, ಸುಬ್ರಹ್ಮಣ್ಯ, ಶರ್ಮಿಳಾ, ಪ್ರಶಾಂತ್‌, ನಿಶಾ, ಪ್ರಶಾಂತ್‌, ಗ್ರಾ.ಪಂ.ಸದಸ್ಯರಾದ ಸಂಜೀವ ದೇವಾಡಿಗ, ಆನಂದ ಕಾಂಚನ್‌, ವಿನೋದ್‌ ದೇವಾಡಿಗ, ಆಶಾಲತಾ ಶೆಟ್ಟಿ, ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಶೋಭಾ, ಪೊಲೀಸ್‌ ಸಿಬಂದಿ, ಮಹಿಳಾ ಮಿತ್ರದ ಸುಮಿತ್ರಾ ಎಸ್‌.ಪ್ರಸಾದ್‌, ಮಕ್ಕಳ ಮಿತ್ರದ ಸುಹಾಸಿನಿ ಹಾಗೂ ವಿವಿಧ ಶಾಲಾ ಮುಖ್ಯ ಶಿಕ್ಷಕರು ಮತ್ತಿತರರಿದ್ದರು. 

ಗ್ರಾ.ಪಂ.ಅಧ್ಯಕ್ಷ ಶೇಖರ್‌ ಕಾಂಚನ್‌ ಅವರು ಪ್ರತಿಕ್ರಿಯಿಸಿ, ಮಕ್ಕಳ ಅನಿಸಿಕೆ ಹಾಗೂ ಬೇಡಿಕೆಗಳಿಗೆ ಸಮರ್ಪಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು ವಿವಿಧ ಘೋಷಣೆಯ ನಾಮಫಲಕ ಹಿಡಿದು ಜಾಥಾ ನಡೆಸಿದರು ಪಿಡಿಒ ತೇಜಪ್ಪ ಕುಲಾಲ್‌ ಸ್ವಾಗತಿಸಿ, ವಿದ್ಯಾರ್ಥಿನಿ ರಕ್ಷಿತಾ , ಸುರಕ್ಷಾ ನಿರೂಪಿಸಿ, ನಮ್ಮ ಭೂಮಿಯ ಪಂ.ಮಟ್ಟದ ಸಂಯೋಜಕಿ ಉಷಾ ಶೆಟ್ಟಿ  ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾ.ಪಂ.ಸಿಬಂದಿ ಸಂಜೀವ ತೆಕ್ಕಟ್ಟೆ , ಶ್ರೀನಿವಾಸ ಪೂಜಾರಿ ಸಹಕರಿಸಿ, ಕಾರ್ಯದರ್ಶಿ ಚಂದ್ರ ವಂದಿಸಿದರು. 

 ಮದ್ಯದಂಗಡಿಗೆ ಅವಕಾಶ ನೀಡಬೇಡಿ
ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪವನ್‌ ದೇವಾಡಿಗ ಪ್ರತಿಕ್ರಿಯಿಸಿ ರಾ.ಹೆ.66ರಿಂದ ಸ್ಥಳಾಂತರಗೊಂಡ ಮದ್ಯದಂಗಡಿಗಳು ಪುನಃ ತೆಕ್ಕಟ್ಟೆಯ ರಾಮ ಮಂದಿರ ರಸ್ತೆಯ ಸಮೀಪದ ಹಳೆಯ ಕಟ್ಟಡಗಳಿಗೆ ತರುವ ಹುನ್ನಾರುಗಳು ನಡೆಯುತ್ತಿರುವ ಬಗ್ಗೆ  ಸ್ಥಳೀಯರ ಗಮನಕ್ಕೆ ಬಂದಿದೆ. ಈ ಪರಿಸರದಲ್ಲಿ ಶಿಕ್ಷಣ ಸಂಸ್ಥೆ, ಜನ ವಸತಿ ಹಾಗೂ ನೂರಾರು ಗ್ರಾಮಸ್ಥರು ಸಂಚರಿಸುವ ಮಾರ್ಗವಾದ್ದರಿಂದ ಈ ಪ್ರದೇಶದಲ್ಲಿ ಮದ್ಯದಂಗಡಿಗಳಿಗೆ ಮತ್ತೆ ಪರವಾನಿಗೆ ನೀಡಿದಲ್ಲಿ ಉಗ್ರವಾಗಿ ಪ್ರತಿಭಟಿಸುವ ಎಚ್ಚರಿಕೆ ನೀಡಿದ ಘಟನೆ ಕೂಡಾ ನಡೆಯಿತು. 

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.