ಅನಧಿಕೃತ ಮರಳು ಸಾಗಾಟಕ್ಕೆ ತಾತ್ಕಾಲಿಕ ತಡೆ


Team Udayavani, Jan 24, 2019, 12:30 AM IST

sand.jpg

ಬೈಂದೂರು: ಅನಧಿಕೃತ ಮರಳು ಸಾಗಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಕಣ್ಣುಮುಚ್ಚಿ ಕುಳಿತಿವೆ ಎಂದು ಉದಯವಾಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ಪೊಲೀಸ್‌ ಮತ್ತು ಕಂದಾಯ ಅಧಿಕಾರಿಗಳು ಎಚ್ಚೆತ್ತಿದ್ದು, ಮೂರು ದಿನಗಳಿಂದ ಮರಳು ದಂಧೆಗೆ ತಾತ್ಕಾಲಿಕ ತಡೆ ಬಿದ್ದಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಿಂದ ಮರಳು ಸಮಸ್ಯೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ. ಕಳೆದ ಆರು ತಿಂಗಳಿಂದ ಮರಳು ಸಾಗಾಟಕ್ಕೆ ಪರವಾನಿಗೆ ದೊರೆಯುತ್ತದೆ ಎಂದು ಕಾದು ಕುಳಿತ ಜಿಲ್ಲೆಯ ಜನತೆಗೆ ಸೀಸನ್‌ ಮುಗಿಯುತ್ತ ಬಂದರು ಕೂಡ ಮರಳು ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದನ್ನೇ ಬಂಡವಾಳವನ್ನಾಗಿರಿಸಿಕೊಂಡ ಕೆಲವು ವ್ಯಕ್ತಿಗಳು ಬೈಂದೂರು, ಶಿರೂರು ಪರಿಸರದಲ್ಲಿ ಅನಧಿಕೃತ ಮರಳು ಸಾಗಾಟ ಮಾಡುವ ಮೂಲಕ ಹೊರ ಜಿಲ್ಲೆಗಳಿಗೂ ರವಾನಿಸುತ್ತಿದ್ದರು.

ವಿಶೇಷ ತಂಡ ರಚನೆ
ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಇಂತಹ ದಂಧೆಗೆ ಬ್ರೇಕ್‌ ಹಾಕುವುದಕ್ಕೆ ವಿಶೇಷ ತಂಡ ರಚಿಸಲಾಗಿದೆ. ಮಂಗಳೂರಿನಿಂದ ಮರಳು ತುಂಬಿಕೊಂಡು ಬೈಂದೂರು ಪರಿಸರದಲ್ಲಿ ಸಣ್ಣ ಟಿಪ್ಪರ್‌ಗಳಲ್ಲಿ ಸಾಗಿಸುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.ಪ್ರತಿ ಪೋಲಿಸ್‌ ಗೇಟ್‌ಗಳಲ್ಲೂ ಇನ್ನಷ್ಟು ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.ಉಡುಪಿ ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿ ವಾಹನಗಳ ಕುರಿತು ಮಾಹಿತಿ ಪಡೆಯಲಾಗುತ್ತದೆ. ಸಂಶಯಾಸ್ಪದ ಸ್ಥಳಗಳಿಗೆ ಆರಕ್ಷಕ ತಂಡ ಭೕಟಿ ನೀಡಿದೆ.ಟೋಲ್‌ಗೇಟ್‌ಗಳಲ್ಲಿ ಮರಳು ತುಂಬಿದ ಲಾರಿಗಳ ಕುರಿತು ತಕ್ಷಣ ಆರಕ್ಷಕರಿಗೆ ಮಾಹಿತಿ ರವಾನೆಯಾಗುತ್ತದೆ.ಇದರಿಂದಾಗಿ ಮಂಗಳೂರಿನಿಂದ ದೊಡ್ಡ ಲಾರಿಗಳಲ್ಲಿ ಮರಳು ತುಂಬಿಕೊಂಡ ಬಳಿಕ ಉತ್ತರ ಕನ್ನಡ ಜಿಲ್ಲೆಗೆ ಸಾಗಿಸುವ ವ್ಯವಹಾರಕ್ಕೆ ಒಂದಿಷ್ಡು ಕಡಿವಾಣ ಬಿದ್ದಂತಾಗಿದೆ ಹಾಗೂ ಸಾರ್ವಜನಿಕರೂ ಅನಧಿಕೃತ ಮರಳು ವ್ಯವಹಾರ ನಡೆಸುವ ವಾಹನಗಳ ಕುರಿತು ಮಾಹಿತಿ ಇದ್ದರೆ ಆರಕ್ಷಕ ಇಲಾಖೆಗೆ ತಿಳಿಸಬಹುದಾಗಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.