ಕುಂದಾಪುರ: ವಿಶೇಷ ಚೇತನ ಭವನ ಅರ್ಧಕ್ಕೆ ಬಾಕಿ


Team Udayavani, Jan 28, 2019, 7:17 PM IST

vishesha-chetana.jpg

ಕುಂದಾಪುರ: ಇಲ್ಲಿನ ತಾ.ಪಂ. ಸಮೀಪ ಅರೆಬರೆ ಕಾಮಗಾರಿಯ ಸ್ಥಿತಿಯಲ್ಲಿ ಇರುವ ವಿಶೇಷಚೇತನ ಭವನ ಯಾವಾಗ ಪೂರ್ಣವಾಗಲಿದೆ ಎಂಬುದು ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ. 

ಕಚೇರಿಯಿಲ್ಲ
ಗ್ರಾ.ಪಂ. ಮಟ್ಟದ ಕಾರ್ಯಕರ್ತರ ಜತೆ ಸಮಾಲೋಚನೆ, ಸಭೆ ನಡೆಸಲು, ಮಾಹಿತಿ ನೀಡಲು, ಕಾರ್ಯಾಗಾರ ಏರ್ಪಡಿಸಲು ಅಗತ್ಯವಿರುವ ಭವನವೇ ವಿಶೇಷಚೇತನ ಭವನ. ಇಲ್ಲಿ ವಿಶೇಷಚೇತನ ಮಕ್ಕಳ ಶೈಕ್ಷಣಿಕ ತರಬೇತಿಗೂ ವ್ಯವಸ್ಥೆ ಮಾಡಬಹುದಾಗಿದೆ. ಉಡುಪಿ ಹಾಗೂ ಕಾರ್ಕಳದಲ್ಲಿ  ಇಂತಹ ಭವನಗಳಿದ್ದು ಕುಂದಾಪುರದಲ್ಲಿ ಅರೆ ನಿರ್ಮಾಣ ಸ್ಥಿತಿಯಲ್ಲಿದೆ. ಸದ್ಯ ಕುಂದಾಪುರದಲ್ಲಿ ತಾಲೂಕು ಮಟ್ಟದ ಸಿಬಂದಿಗೆ ತಾ.ಪಂ. ನಲ್ಲಿಯೇ ಕುರ್ಚಿ, ಟೇಬಲ್‌ ನೀಡಲಾಗಿದ್ದು ಹಿಂದಿನ ಉಪಾಧ್ಯಕ್ಷರು ತಮ್ಮ ಕೊಠಡಿಯಲ್ಲಿಯೇ ಮಾಸಿಕ ಸಭೆ ನಡೆಸಲು ಅನುವು ಮಾಡಿಕೊಟ್ಟಿದ್ದರು. ತಾಲೂಕು ಪಂಚಾಯತ್‌ನ ತಳ ಅಂತಸ್ತಿನಲ್ಲಿ ಇವರಿಗೆ ಸಭೆ ನಡೆಸಲು ಅನುವು ಮಾಡಿ ಕೊಡಬೇಕೆಂಬ ನಿಯಮವೇ ಇದೆ. 

ಭವನ ನಿರ್ಮಾಣ
ಕಾರ್ಯಕರ್ತರಿಗೆ ಮಾಸಿಕ ಗೌರವಧನ ಸೇರಿದಂತೆ ವಿಶೇಷಚೇತನರಿಗೆ ಸವಲತ್ತು ಇತ್ಯಾದಿ ನೀಡಲು ಎಂದೇ ತಾ.ಪಂ., ಗ್ರಾ.ಪಂ. ಹಾಗೂ ಇತರ ಇಲಾಖೆಗಳು ತಮ್ಮ ಅನುದಾನದಲ್ಲಿ ಶೇ.3ನ್ನು ತೆಗೆದಿರಿಸಬೇಕೆಂಬ ಕಟ್ಟು ಕಟ್ಟಳೆ ಇದೆ. ಹೀಗೆ ಪ್ರತಿ ವರ್ಷ ಲಕ್ಷಾಂತರ ರೂ. ತೆಗೆದಿಡಲಾಗುತ್ತದೆ. ಆದರೆ 8 ಲಕ್ಷ ರೂ. ವೆಚ್ಚದ ಭವನ ವೊಂದನ್ನು  ಪೂರ್ಣ ನಿರ್ಮಾಣ ಮಾಡಲು ಇನ್ನೂ ಸಾಧ್ಯವಾಗಿಲ್ಲ. ತಾ.ಪಂ.ಗೆ ಬಂದ 1 ಕೋ.ರೂ. ಅನುದಾನದ ಮೀಸಲು ನಿಧಿ 5 ಲಕ್ಷ ರೂ.ಗಳಲ್ಲಿ ಒಂದು ಹಂತದ ಕಾಮಗಾರಿಯಾಗಿದೆ. ಉಳಿಕೆ 3 ಲಕ್ಷ ರೂ. ತೆಗೆದಿರಿಸಲಾಗಿದೆ. ತಾಂತ್ರಿಕ ಕಾರಣದಿಂದ ಕಾಮಗಾರಿ ನಡೆಯುತ್ತಿಲ್ಲ. ಅನುದಾನ ಇದ್ದರೂ ಕ್ರಿಯಾಯೋಜನೆ, ಟೆಂಡರ್‌ಕಾರ್ಯ ನಡೆಸದೇ ತಿಂಗಳುಗಳಾದ ಕಾರಣ ಕಾಮಗಾರಿ ನಿರುಪಯುಕ್ತವಾಗುತ್ತಿದೆ. 

ಶೌಚಾಲಯ
ಎಲ್ಲಕ್ಕಿಂತ ಮೊದಲು ವಿಶೇಷಚೇತನರಿಗಾಗಿ ಭವನದ ಸಮೀಪ ಶೌಚಾಲಯ ನಿರ್ಮಿಸಲಾಗಿದೆ. ಇದಕ್ಕಾಗಿ ಸುಮಾರು 1.25 ಲಕ್ಷ ರೂ. ವ್ಯಯಿಸಲಾಗಿದೆ. ವಿಶೇಷ ಚೇತನರಿಗೆ ಬೇಕಾಗುವ ಮಾದರಿಯಲ್ಲಿ ಇದನ್ನು ಪೂರ್ಣ ಗೊಳಿಸಲಾಗಿದೆ. 

ಆದರೆ ಹತ್ತಿರತ್ತಿರ ವರ್ಷದಿಂದ ಇದು ಲೋಕಾರ್ಪಣೆ ಯಾಗದ ಕಾರಣ ಉಪಯೋಗವಾಗದೆ ಸುತ್ತೆಲ್ಲ ಕಳೆಗಿಡ ತುಂಬಿ ಹೊಸ ಕಟ್ಟಡವೋ ಎಂಬ ಅನುಮಾನ ಮೂಡು ವಂತೆ ಮಾಡುತ್ತಿದೆ.  

ಸರಕಾರಿ ಸವಲತ್ತು
ವಿಶೇಷಚೇತನರಿಗೆ ಸರಕಾರದಿಂದ ದೊರೆಯುವ ಸವಲತ್ತುಗಳ ಕುರಿತು ಮಾಹಿತಿ ನೀಡಲು, ಅವರ ಸಮಸ್ಯೆಗಳಿಗೆ ಸ್ಪಂದಿಸಲು, ಅವರಿಗೆ ಸೂಕ್ತ ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ, ಸರಕಾರಿ ನೆರವು ನೀಡಲು 1995ರ ಕಾಯ್ದೆಯಂತೆ ಪ್ರತಿ ಗ್ರಾಮ ಪಂಚಾಯತ್‌ಗೆ ಓರ್ವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ (ವಿಆರ್‌ಡಬ್ಲ್ಯು) ಪ್ರತಿನಿಧಿಯನ್ನು ನೇಮಿಸಲಾಗಿದೆ. ಇವರಿಗೆ ಮಾಸಿಕ 3 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಇವರ ಮೇಲ್ವಿಚಾರಣೆಗೆ ತಾಲೂಕು ಮಟ್ಟದಲ್ಲಿ  ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂಆರ್‌ಡಬ್ಲ್ಯು) ಅವರನ್ನು ನೇಮಿಸಲಾಗಿದೆ. ಅವಿಭಜಿತ ಕುಂದಾಪುರ ತಾಲೂಕಿನಲ್ಲಿ  65 ಗ್ರಾ.ಪಂ.ಗಳಿದ್ದರೂ 38 ಪಂ.ಗಳಲ್ಲಿ ಮಾತ್ರ ಪ್ರತಿನಿಧಿಗಳಿದ್ದಾರೆ. ಎಸೆಸೆಲ್ಸಿ  ತೇರ್ಗಡೆ ಅಥವಾ ಅನುತ್ತೀರ್ಣರಾದ ವಿಶೇಷಚೇತನರು ಈ ಹುದ್ದೆಗೆ ಅರ್ಹರು. ಹಾಗಿದ್ದರೂ ಬಾಕಿ ಉಳಿದೆಡೆ ನೇಮಕಾತಿ ಪ್ರಕ್ರಿಯೆ ಇನ್ನೂ ನಡೆದಿಲ್ಲ.

6,800 ಮಂದಿ
ಅವಿಭಜಿತ ಕುಂದಾಪುರ ತಾಲೂಕಿನಲ್ಲಿ  6,800 ಮಂದಿ ವಿಶೇಷಚೇತನರಿದ್ದಾರೆ. ಇವರಲ್ಲಿ ವಿವಿಧ ವರ್ಗಗಳ  ವೈಕಲ್ಯ ಹೊಂದಿದವರಿದ್ದು ಇವರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸುವ ಕಾರ್ಯ ಚಾಲನೆಯಲ್ಲಿದೆ. ಕೆಲವರ ಹೆಸರು ದ್ವಿಪ್ರತಿಯಲ್ಲಿ ದಾಖಲಾಗಿದ್ದು ಸ್ಮಾರ್ಟ್‌ ಕಾರ್ಡ್‌ ವಿತರಣೆ ಬಳಿಕ ಈ ಗೊಂದಲ ನಿವಾರಣೆಯಾಗಲಿದೆ. 
– ಮಂಜುನಾಥ ಹೆಬ್ಟಾರ್‌, ಎಂಆರ್‌ಡಬ್ಲ್ಯು

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.