ಬಜೆಟ್‌ನಲ್ಲಿ ಶಂಕರನಾರಾಯಣ ತಾಲೂಕು ರಚನೆಯ ಕನಸು!


Team Udayavani, Feb 7, 2019, 12:55 AM IST

shankaranarayana.jpg

ಕುಂದಾಪುರ: ಬಜೆಟ್‌ ಬಂದಾಗಲೆಲ್ಲ ಶಂಕರನಾರಾಯಣ ಭಾಗದ ಜನತೆ ಈ ಬಾರಿಯಾದರೂ ಶಂಕರನಾರಾಯಣ ತಾಲೂಕು ಹೊಸದಾಗಿ ರಚನೆಯಾದೀತೇ ಎಂದು ಕನಸು ಕಟ್ಟುತ್ತಾರೆ. ಈ ಬಾರಿಯೂ ಕನಸು ಮೊಳಕೆಯೊಡೆದಿದೆ. ಬ್ರಿಟಿಷರ ಕಾಲದಿಂದಲೂ ಎಲ್ಲ ಸರಕಾರಿ ಕಚೇರಿ ಹೊಂದಿರುವ ಈ ಭಾಗದಲ್ಲಿ  ಉಪ ನೋಂದಣಿ ಕಚೇರಿ ವ್ಯಾಪ್ತಿಯ 42 ಗ್ರಾಮಗಳನ್ನು ಸೇರಿಸಿ ಶಂಕರನಾರಾಯಣವನ್ನು ತಾಲೂಕಾಗಿ ಘೋಷಿಸಬೇಕೆಂದು ಹೋರಾಟ ನಡೆಯುತ್ತಿದೆ. 

ಆಚಾರ್ಯರ ಪ್ರಯತ್ನ
ಅಂದಿನ ಗೃಹ ಸಚಿವ ಡಾ| ವಿ.ಎಸ್‌.ಆಚಾರ್ಯರು ಹೋರಾಟ ತಿಳಿದು ಕುಂದಾಪುರ ನಿರೀಕ್ಷಣಾ ಬಂಗಲೆಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ,ಡಿಸಿ, ಸಿ.ಇ.ಒ. ಸಮ್ಮುಖ ಮಾಹಿತಿ ಕಲೆ ಹಾಕಿ ಎಲ್ಲ ಗ್ರಾ.ಪಂ.ಗಳು ನಿರ್ಣಯಿಸಿದರೆ ಕೂಡಲೇ ವಿಶೇಷ ತಹಶೀಲ್ದಾರ್‌ ನೇಮಿಸುವ ಭರವಸೆ ನೀಡಿದ್ದರು. ಸಮಿತಿಯು ಎಲ್ಲ ಗ್ರಾಮಗಳ ಪಂಚಾಯತ್‌ ನಿರ್ಣಯ ತಯಾರು ಮಾಡುವಾಗಲೇ ಡಾ| ವಿ.ಎಸ್‌. ಆಚಾರ್ಯರು ಅಕಾಲಿಕ ನಿಧನ ಹೊಂದಿದ್ದು ತಾಲೂಕು ರಚನೆಗೆ ಹಿನ್ನಡೆಯಾಯಿತು. 

ಶೆಟ್ಟರ ಪ್ರಯತ್ನ
ವಿಧಾನ ಪರಿಷತ್‌ ಸದಸ್ಯಕೆ. ಪ್ರತಾಪ್‌ಚಂದ್ರ ಶೆಟ್ಟಿ ಅವರು ಅರ್ಜಿ ಸಮಿತಿಯಲ್ಲಿ ತಾಲೂಕು ರಚನೆ ಕುರಿತು ಅಹವಾಲು ಮಂಡಿಸಿ ಆಗ ಪ್ರಶ್ನೆ ಕೇಳುತ್ತಾ ಹೊಸ ತಾಲೂಕಿನ ಕನಸನ್ನು ಊರ್ಜಿತದಲ್ಲಿಟ್ಟಿದ್ದಾರೆ ಉಡುಪಿ ಜಿಲ್ಲಾಡಳಿತ ಸಮಗ್ರ ವರದಿ ತಯಾರಿಸಿ 2014, ಡಿ 22 ಎಡಿಎಂಸಿಆರ್‌: 74/ 2014 -15 ರಂದು  ಶಂಕರನಾರಾಯಣಕ್ಕೆ ತಾಲೂಕಿನ ಅಗತ್ಯದ ಕುರಿತು ವರದಿಯನ್ನು ಸರಕಾರಕ್ಕೆ ಕಳುಹಿಸಿದೆ. ವರದಿ ಕಂದಾಯ ಇಲಾಖಾ ಪ್ರಧಾನ ಕಾರ್ಯದರ್ಶಿ ಕೊಠಡಿಯಲ್ಲಿ ಬಾಕಿಯಾಗಿದೆ.

ಕಾರ್ಡ್‌ ಚಳವಳಿ
ಎರಡು ವರ್ಷಗಳ ಹಿಂದೆ 5,000 ಅಂಚೆಕಾರ್ಡ್‌ಗಳನ್ನು ವಿವಿಧ ಗ್ರಾಮಗಳಿಂದ ಜನರಿಂದ ಬರೆಸಿ ಅಂಚೆ ಕಾರ್ಡ್‌ ಚಳವಳಿ ಮಾಡಿ ಸರಕಾರಕ್ಕೆ ಕಳುಹಿಸುವಲ್ಲಿ ಸಮಿತಿ ಶ್ರಮಿಸಿತ್ತು. ಜಿಲ್ಲಾಡಳಿತದ ವರದಿಯೊಳಗೆ ಇರುವ ಮಡಾಮಕ್ಕಿ, ಶೇಡಿಮನೆ, ಬೆಳ್ವೆ, ಅಲಾºಡಿ ಗ್ರಾಮಗಳು ನೂತನ ಹೆಬ್ರಿ ತಾಲೂಕಿಗೆ ಹೋಗಿ, ಹಳ್ಳಿಹೊಳೆ ಬೈಂದೂರು ತಾಲೂಕಿಗೆ ಸೇರಿತು.
ಹೊಸ ತಾಲೂಕಿಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕಂದಾಯ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮಿತಿ ಮನವಿ ಸಲ್ಲಿಸಿದೆ. ಈ ಸಾಲಿನ ಬಜೆಟ್‌ಗಾಗಿ ಕಾದು ನೋಡ ಬೇಕೆಂದು ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಹೇಳಿದ್ದಾರೆ. 

ನಿರೀಕ್ಷೆಯಿದೆ
ಶಂಕರನಾರಾಯಣವು 1972ರವರೆಗೆ ಬೈಂದೂರು ಕ್ಷೇತ್ರ, 1973ರಿಂದ 2008ರ ವರೆಗೆ ಕುಂದಾಪುರ ಕ್ಷೇತ್ರ, 2008 ರಿಂದ ಪುನಃ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿದೆ. ಹೀಗಾಗಿ ಜನಪ್ರತಿನಿಧಿಗಳೂ ಬದಲಾಗುತ್ತಿದ್ದು ಈ ಬಾರಿಯಾದರೂ ಹೊಸ ತಾಲೂಕು ಘೋಷಣೆಯಾಗುವುದೇ ಎಂಬ ನಿರೀಕ್ಷೆಯಲ್ಲಿದ್ದೇವೆ.
– ನ್ಯಾಯವಾದಿ ಎ. ರತ್ನಾಕರ ಶೆಟ್ಟಿ ಹೋರಾಟ ಸಮಿತಿ ಅಧ್ಯಕ್ಷರು

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.