“ಕುಡಿಯುವ ನೀರಿನ ಕಾಮಗಾರಿ ಸೆಪ್ಟಂಬರ್‌ನಲ್ಲಿ ಪೂರ್ಣ’


Team Udayavani, Feb 15, 2019, 12:30 AM IST

1402kdlm10ph.jpg

ಕುಂದಾಪುರ: ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮೂಲಕ ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ 24×7 ನಿರಂತರ ಕುಡಿಯುವ ನೀರಿನ ಕಾಮಗಾರಿ 23 ಕೋ.ರೂ. ವೆಚ್ಚದಲ್ಲಿ ನಡೆಯುತ್ತಿದ್ದು ಸೆಪ್ಟಂಬರ್‌ ವೇಳೆಗೆ ಪೂರ್ಣವಾಗಲಿದೆ ಎಂದು ಎಇಇ ರಾಮಕೃಷ್ಣ ಹೇಳಿದ್ದಾರೆ.

ಗುರುವಾರ ಇಲ್ಲಿನ ಅಂಬೇಡ್ಕರ್‌ ಭವನದಲ್ಲಿ ಪುರಸಭೆ ಮತ್ತು ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ಕ್ವಿಮಿಪ್‌ ಟ್ರಾಂಚ್‌ -2 ಅಡಿಯಲ್ಲಿ ಕುಂದಾಪುರ ಪಟ್ಟಣದಲ್ಲಿ ಕೈಗೊಳ್ಳುವ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ನಗರ ಮಟ್ಟದ ಸಾರ್ವಜನಿಕ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ, ಚುನಾಯಿತ ಪ್ರತಿನಿಧಿ ಗಳಿಗೆ ಮಾಹಿತಿ ಕೊಡುವ ಸಲುವಾಗಿ ಸಭೆ ಕರೆಯಲಾಗಿದೆ. ಕಾಮಗಾರಿಗೆ ಏಶಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ನವರು ಸಾಲ ರೂಪದಲ್ಲಿ ಹಣ ನೀಡಿದ್ದಾರೆ. ಪ್ರಸ್ತುತ ಜಪ್ತಿಯಿಂದ ಪುರಸಭೆ ವ್ಯಾಪ್ತಿಗೆ ನೀರು ಬರುತ್ತಿದ್ದು ಅದು ಕೋಡಿ ಪ್ರದೇಶಕ್ಕೆ ತಲುಪುತ್ತಿಲ್ಲ. ಆದ್ದರಿಂದ ಹೊಸ ಯೋಜನೆ ಮಾಡಲಾಗಿದೆ ಎಂದರು.

ಪುರಸಭೆ ಸದಸ್ಯರಾದ ಲಕ್ಷ್ಮೀ ಬಾಯಿ, ದೇವಕಿ ಸಣ್ಣಯ್ಯ, ಗಿರೀಶ್‌ ಕುಮಾರ್‌ ಎಚ್‌., ಮೋಹನದಾಸ ಶೆಣೈ, ರಾಘವೇಂದ್ರ ಖಾರ್ವಿ, ಸಂದೀಪ್‌ ಖಾರ್ವಿ, ಚಂದ್ರಶೇಖರ್‌ ಖಾರ್ವಿ, ಅಶ#ಕ್‌, ಅಬ್ಬು ಮಹಮ್ಮದ್‌, ಸಂತೋಷ್‌ ಶೆಟ್ಟಿ, ಮಾಜಿ ಉಪಾಧ್ಯಕ್ಷ ರಾಜೇಶ್‌ ಕಾವೇರಿ, ಮಾಜಿ ಸದಸ್ಯರಾದ ಪುಷ್ಪಾ ಆರ್‌. ಶೇಟ್‌, ಕಲಾವತಿ, ಕೋಡಿ ಪ್ರದೇಶದ ನಾಗರಿಕ ಆರಿಫ್, ಅಬ್ದುಲ್ಲ ಕಾಮಗಾರಿಯಿಂದಾಗುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದರು.

ಒಂದಷ್ಟು ಕಾಮಗಾರಿ ಆದಮೇಲೆ ಮಾಹಿತಿ ನೀಡಲು ಕರೆಯಲಾಗುತ್ತಿದೆ. ಸಭೆ ನಡೆಯುವ ಹಿಂದಿನ ಸಂಜೆಯಷ್ಟೇ ಸದಸ್ಯರನ್ನು ಆಹ್ವಾನಿಸಲಾಗಿದೆ. ಸಾರ್ವ ಜನಿಕರ ಗಮನಕ್ಕೆ ತರದೇ  ಸಭೆ ನಡೆಸ ಲಾಗಿದೆ. ಮಾಧ್ಯಮದವರಿಗೂ ಮಾಹಿತಿ ನೀಡಿಲ್ಲ. ಈಗಾಗಲೇ ಮಾಡಿದ ಕಾಮಗಾರಿ ಅಸಮರ್ಪಕವಾಗಿದೆ. ಅಗೆದು ಹಾಕಿದಲ್ಲಿ ಸರಿಯಾಗಿ ದುರಸ್ತಿ ಮಾಡಿಲ್ಲ. ಇಂಟರ್‌ಲಾಕ್‌ ತೆಗೆದಲ್ಲಿ ಸರಿಯಾದ ರೀತಿ ಅಳವಡಿಸದೇ ಕುಸಿಯುತ್ತಿದೆ. ಸುಂದರ ಕುಂದಾಪುರ ಬದಲು ವಿರೂಪದ ಕುಂದಾಪುರ ಆಗುತ್ತಿದೆ. ಪುರಸಭೆ ಹೊಸದಾಗಿ ಹಾಕಿದ ಇಂಟರ್‌ಲಾಕ್‌ಗಳನ್ನು ಕೀಳಲಾಗಿದೆ. ಕಿತ್ತು ಹಾಕಿದ ಇಂಟರ್‌ಲಾಕ್‌ಗಳನ್ನು ಎಲ್ಲಿ ಸಾಗಿಸಲಾಗಿದೆ. ಗುತ್ತಿಗೆದಾರರು ಜನಪ್ರತಿನಿಧಿಗಳ ದೂರಿಗೂ ಸ್ಪಂದಿಸುವುದಿಲ್ಲ ಯಾಕೆ. ಸಮಸ್ಯೆಗಳ ಕುರಿತು ಹೇಳಿದರೂ ಹಾರಿಕೆ ಉತ್ತರ ನೀಡಲಾಗುತ್ತಿದೆ. ಅಳವಡಿಸುತ್ತಿರುವ ಪೈಪ್‌ಲೈನ್‌ ಗಾತ್ರ ಸಣ್ಣದಾದ ಕಾರಣ ಅವಶ್ಯವುಳ್ಳಷ್ಟು ನೀರು ಪೂರೈಸಬಹುದೆ? ಎಂಬ ಪ್ರಶ್ನೆಗಳನ್ನು ಕೇಳಿದರು.

ಮರಳು ಸಮಸ್ಯೆಯಿಂದ ಕಾಮಗಾರಿ ನಿಧಾನವಾಗಿದೆ. ಸಮಸ್ಯೆಗಳಿಗೆ  ಸ್ಪಂದಿ ಸುತ್ತೇವೆ. ದುರಸ್ತಿ ಕಾಮಗಾರಿ ಸರಿಯಾಗಿ ಮಾಡುತ್ತೇವೆ ಎಂದು ರಾಮಕೃಷ್ಣ ಉತ್ತರಿಸಿದರು. ಪುರಸಭೆ ಮಾಜಿ ಅಧ್ಯಕ್ಷೆ ವಸಂತಿ ಸಾರಂಗ, ಸದಸ್ಯರಾದ ರೋಹಿಣಿ ಉದಯ್‌, ಪ್ರಭಾಕರ ಕೆ., ಸಹಾಯಕ ಎಂಜಿನಿಯರ್‌ ಹರೀಶ್‌ ಬಿ., ಕಾಮಗಾರಿ ನಿರ್ವಹಿಸುವ ಸಂಸ್ಥೆಯ ಪ್ರಾಜೆಕ್ಟ್ ಮೆನೇಜರ್‌ ವರ್ಧಮಾನ್‌ ಉಪಸ್ಥಿತರಿದ್ದರು. ರತ್ನಾಕರ್‌ ನಿರ್ವಹಿಸಿದರು.

ಸಾರ್ವಜನಿಕರಿಲ್ಲ
ಸಭೆಯ ಕುರಿತು ಮಾಹಿತಿ ಕೊರತೆ ಯಿಂದಾಗಿ ಸಾರ್ವಜನಿಕರ ಸಂಖ್ಯೆ ಬೆರಳೆಣಿಕೆ ಯಲ್ಲಿತ್ತು. ಮಾತಿನ ಭರಾಟೆ ಸದಸ್ಯರು ಹಾಗೂ ಅಧಿಕಾರಿ ಮಧ್ಯೆ ತೀವ್ರವಾಗಿ ನಡೆಯಿತು. 

ಯೋಜನೆಯ ಅನುದಾನ
ಹಳೆಕೋಟೆಯಲ್ಲಿ 5 ಲಕ್ಷ ಲೀ. ಸಾಮರ್ಥ್ಯ, ಕೋಡಿಯಲ್ಲಿ 4 ಲಕ್ಷ ಲೀ. ಸಾಮರ್ಥ್ಯದ ಟ್ಯಾಂಕಿ ರಚನೆಯಾಗುತ್ತಿದೆ. ಪೈಪ್‌ಲೈನ್‌ ಅಳವಡಿಕೆ ಸಂದರ್ಭ ಹಾಳಾಗುವ ಕಾಮಗಾರಿಯ ದುರಸ್ತಿಯನ್ನು ಮಾಡಿಕೊಡಲಾಗುವುದು. ಡಾಮರು, ಇಂಟರ್‌ಲಾಕ್‌, ಕಾಂಕ್ರೀಟ್‌ ರಸ್ತೆ ಅಗೆದರೆ ಅದನ್ನು ನವೀಕರಣ ಮಾಡಿ ಕೊಡಲಾಗುವುದು. ಇಂತಹ ದುರಸ್ತಿ ಕಾಮಗಾರಿಗೆ ಪುರಸಭೆಯ ಅನುದಾನ ಬಳಸುವುದಿಲ್ಲ. ಎಲ್ಲದಕ್ಕೂ ಯೋಜನೆಯ ಅನುದಾನ ಬಳಸಲಾಗುವುದು ಎಂದು ರಾಮಕೃಷ್ಣ ಹೇಳಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.