ಅಂಪಾರು – ಕಂಡ್ಲೂರು ರಾಜ್ಯ ಹೆದ್ದಾರಿಗೆ ಮರು ಡಾಮರು
Team Udayavani, Feb 15, 2019, 12:30 AM IST
ಕುಂದಾಪುರ: ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಅಂಪಾರು, ಕಂಡ್ಲೂರು ರಸ್ತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೇಂದ್ರ ರಸ್ತೆ ನಿಧಿಯಡಿ ಮರು ಡಾಮರೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದೆ.
ಸಿದ್ದಾಪುರ – ಕುಂದಾಪುರ ರಾಜ್ಯ ಹೆದ್ದಾರಿಯ ಮೂಡುಬಗೆ, ಅಂಪಾರು, ಕಂಡ್ಲೂರು ಭಾಗದ ರಸ್ತೆಯಿಡೀ ಹೊಂಡ – ಗುಂಡಿಗಳಿಂದಾಗಿ ಈ ಮಾರ್ಗವಾಗಿ ಸಂಚಾರ ದುಸ್ತರವಾಗಿತ್ತು. ಈಗ ಈ ರಾಜ್ಯ ಹೆದ್ದಾರಿಯ ಅಲ್ಲಲ್ಲಿ ಹದಗೆಟ್ಟ ಸುಮಾರು 7 ಕಿ.ಮೀ. ರಸ್ತೆಗೆ ಮರು ಡಾಮರೀಕರಣ ಹಾಗೂ ಕಿರಿದಾದ ರಸ್ತೆ ಇರುವ ಕಡೆ ಅಗಲೀಕರಣ ಕಾಮಗಾರಿ ಆರಂಭಗೊಂಡಿದೆ.
ಈ ತೀರ್ಥಹಳ್ಳಿ – ಕುಂದಾಪುರ ರಜ್ಯ ಹೆದ್ದಾರಿಯನ್ನು ಮುಂದಿನ 10 ವರ್ಷಗಳ ಕಾಲ ಅಭಿವೃದ್ಧಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ. ಸುಮಾರು 7 ಕಿ.ಮೀ. ದೂರದ ಮರು ಡಾಮರೀಕರಣ ಹಾಗೂ ಅಗಲೀಕರಣಕ್ಕೆ ಹೆದ್ದಾರಿ ಪ್ರಾಧಿಕಾರವು ಕೇಂದ್ರ ರಸ್ತೆ ನಿಧಿಯಡಿ (ಸಿಆರ್ಎಫ್) 10 ಕೋ.ರೂ. ಅನುದಾನದಲ್ಲಿ ಕಾಮಗಾರಿಯನ್ನು ನಡೆಸುತ್ತಿದೆ.
ಸಿದ್ದಾಪುರ – ಕುಂದಾಪುರ ರಾಜ್ಯ ಹೆದ್ದಾರಿ ಹದಗೆಟ್ಟ ಬಗ್ಗೆ ಅದರಲ್ಲೂ ಅಂಪಾರುನಿಂದ ಕಂಡ್ಲೂರುವರೆಗಿನ ರಸ್ತೆಯ ದುಃಸ್ಥಿತಿ ಬಗ್ಗೆ ಪತ್ರಿಕೆ ಹಲವು ಬಾರಿ ವಿಶೇಷ ವರದಿ ಪ್ರಕಟಿಸಿ, ಸಂಬಂಧಪಟ್ಟವರ ಗಮನಸೆಳೆದಿತ್ತು.
ಮಾರ್ಚ್ಗೆ ಪೂರ್ಣ
ಈಗಾಗಲೇ ಮರು ಡಾಮರೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ. ಒಟ್ಟು ಅಲ್ಲಲ್ಲಿ 7 ಕಿ.ಮೀ. ಉದ್ದದ ರಸ್ತೆಗೆ ಡಾಮರೀಕರಣ ನಡೆಯುತ್ತಿದೆ.
– ನಾಗರಾಜ್
ಸಹಾಯಕ ಎಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…