ಆಜ್ರಿ – ಬಡಬಾಳು ರಸ್ತೆಗೆ ಇನ್ನೂ ದಕ್ಕದ ಡಾಮರು ಭಾಗ್ಯ
Team Udayavani, Feb 17, 2019, 12:30 AM IST
ವಿಶೇಷ ವರದಿ- ಆಜ್ರಿ: ಬಡಬಾಳುನಿಂದ ಆಜ್ರಿಗೆ ಸಂಪರ್ಕ ಕಲ್ಪಿಸುವ 8 ಕಿ.ಮೀ. ದೂರದ ಮಣ್ಣಿನ ರಸ್ತೆಗೆ 2 ದಶಕಕ್ಕೂ ಹೆಚ್ಚು ಕಾಲದಿಂದ ಬೇಡಿಕೆಯಿದ್ದರೂ, ಇನ್ನೂ ಡಾಮರೀಕರಣ ಆಗಿಲ್ಲ. ರಸ್ತೆಯನ್ನೇ ಅವಲಂಬಿಸಿಕೊಂಡಿರುವ ಈ ಭಾಗದ ಜನ ಧೂಳಿನಿಂದಾಗಿ ಹೈರಾಣಾಗಿದ್ದಾರೆ.
ಆಜ್ರಿಯಿಂದ ಜಡ್ಡಿನಮೂಲೆ, ಯಡೂರು, ಯಡ್ನಾಡಿಯಾಗಿ ಬಡಬಾಳುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಮಳೆಗಾಲದಲ್ಲಿ ಕೆಸರುಮಯ ರಸ್ತೆಯಾದರೆ, ಬೇಸಿಗೆಯಲ್ಲಿ ಧೂಳುಮಯ ರಸ್ತೆಯಿಂದಾಗಿ ಇಲ್ಲಿನ ಜನ ವರ್ಷವಿಡೀ ಸಂಕಷ್ಟಪಡುತ್ತಿದ್ದಾರೆ.
ಹತ್ತಿರದ ಮಾರ್ಗ
ಈ ಮಾರ್ಗವಾಗಿ ಆಜ್ರಿಯಿಂದ ಬಡಬಾಳು ಮೂಲಕವಾಗಿ ಜನ್ಸಾಲೆ, ಅಂಪಾರು, ಕುಂದಾಪುರಕ್ಕೂ ಸಂಚರಿಸಲು ಹತ್ತಿರದ ಮಾರ್ಗ ಇದಾಗಿದೆ. ಡಾಮರೀಕರಣವಾದರೆ ಸಾವಿರಾರು ಮಂದಿಗೆ ಪ್ರಯೋಜನ ವಾಗಲಿದೆ. ಈ ಮಾರ್ಗದಲ್ಲಿ 3-4 ಶಾಲಾ ಬಸ್ಗಳು, ನೂರಾರು ಬೇರೆ ಬೇರೆ ವಾಹನಗಳು ಸಂಚರಿಸುತ್ತವೆ. ಸುಮಾರು 3 ರಿಂದ 4 ಸಾವಿರ ಜನ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ.
2 ದಶಕದ ಬೇಡಿಕೆ
ಈ ಮಣ್ಣಿನ ರಸ್ತೆಗೆ ಡಾಮರು ಆಗಬೇಕು ಎನ್ನುವ ಬೇಡಿಕೆ ಇಂದು ನಿನ್ನೆಯದಲ್ಲ. ಬರೋಬ್ಬರಿ 20 ವರ್ಷಗಳಿಗೂ ಹಿಂದಿನಿಂದಲೂ ಈ ರಸ್ತೆಗೆ ಡಾಮರೀಕರಣ ಆಗಬೇಕು ಎನ್ನುವುದು ಇಲ್ಲಿನ ಜನರ ಬೇಡಿಕೆಯಾಗಿದೆ.
200 ಮೀಟರ್ ಡಾಮರು
ಆಜ್ರಿಯಿಂದ ಆರಂಭಗೊಳ್ಳುವ ಈ ರಸ್ತೆಯ ಸುಮಾರು 200 ಮೀಟರ್ ಮಾತ್ರ ಡಾಮರೀಕರಣ ಆಗಿದೆ. ಬಾಕಿ ಉಳಿದ ಸುಮಾರು 8 ಕಿ.ಮೀ. ದೂರದ ರಸ್ತೆಗೆ ಇನ್ನೂ ಡಾಮರು ಆಗಿಲ್ಲ.
ಚುನಾವಣೆಗೆ ಬಂದಾಗ ನೆನಪು
ಈ ರಸ್ತೆ ಡಾಮರೀಕರಣ ಆಗಬೇಕು ಎನ್ನುವುದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಎಲ್ಲ ಜನಪ್ರತಿನಿಧಿಗಳಿಗೂ ಬೇಡಿಕೆ ಸಲ್ಲಿಸಿದ್ದೇವೆ. ಆದರೆ ಅವರಿಗೆ ಚುನಾವಣೆ ಬಂದಾಗ ಒಮ್ಮೆ ಮಾತ್ರ ನೆನಪು ಆಗುತ್ತದೆ. ಈ ಬಾರಿಯಾದರೂ ಡಾಮರೀಕರಣ ಆಗಲಿ ಎನ್ನುವುದು ಇಲ್ಲಿನ ಗ್ರಾಮಸ್ಥರ ಆಗ್ರಹವಾಗಿದೆ.
ಮನವಿ ಸಲ್ಲಿಸಲಾಗಿದೆ
ಸುಮಾರು 8 ಕಿ.ಮೀ. ದೂರದ ರಸ್ತೆಗೆ ಡಾಮರೀಕರಣ ಬೇಡಿಕೆಯಿದ್ದು, ಇದಕ್ಕೆ ಹೆಚ್ಚಿನ ಅನುದಾನ ಬೇಕಾಗಿರುವುದರಿಂದ ಅಷ್ಟೊಂದು ಅನುದಾನ ಪಂಚಾಯತ್ನಲ್ಲಿ ಇಲ್ಲದಿರುವುದರಿಂದ ಈ ಬಗ್ಗೆ ಈಗಿನ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ.
– ವಿನೋದ,ಅಧ್ಯಕ್ಷರು,ಆಜ್ರಿ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ