21 ಕೋ.ರೂ. ವೆಚ್ಚದ ಭೋಜನ ಶಾಲೆ ಉದ್ಘಾಟನೆಗೆ ಸಜ್ಜು


Team Udayavani, Feb 17, 2019, 12:40 AM IST

1402klre3.jpg

ಕೊಲ್ಲೂರು : ಇಲ್ಲಿನ ಶ್ರೀಮೂಕಾಂಬಿಕಾ ದೇಗುಲದಲ್ಲಿ ಬಹು ನಿರೀಕ್ಷೆಯ ಸುವ್ಯವಸ್ಥಿತ ಬೃಹತ್‌ ಭೋಜನ ಶಾಲೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮಾರ್ಚ್‌-ಎಪ್ರಿಲ್‌ ತಿಂಗಳಿನಲ್ಲಿ ಭಕ್ತರ ಉಪಯೋಗಕ್ಕೆ ಸಮರ್ಪಣೆಗೊಳ್ಳಲಿದೆ.

21 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಶಾಲೆಯ ತಳ ಅಂತಸ್ತಿನಲ್ಲಿ ದೇಗುಲದ ನೌಕರರ ವಾಹನ ನಿಲುಗಡೆಗೆ ವ್ಯವಸ್ಥೆಗೊಳಿಸಲಾಗಿದೆ. ಪ್ರಥಮ ಅಂತಸ್ತಿನಲ್ಲಿ ಅಡುಗೆ ಕೋಣೆ ಹಾಗೂ ಊಟದ ಭವನ ನಿರ್ಮಾಣವಾಗಿದೆ. ಎರಡನೇ ಅಂತಸ್ತಿನಲ್ಲಿ ಲಡ್ಡು ಪ್ರಸಾದ ತಯಾರಿಕಾ ಕೊಠಡಿ ಹಾಗೂ ಸ್ವಸಹಾಯ ಪದ್ಧತಿ  ಊಟಕ್ಕೆ ವ್ಯವಸ್ಥೆ ಇದೆ. ಏಕ ಕಾಲದಲ್ಲಿ 1 ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ 75 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿರುವ ಬೃಹತ್‌ ಕಟ್ಟಡದಲ್ಲಿ ಏಕ ಕಾಲದಲ್ಲಿ 1ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರೊಂದಿಗೆ 1 ಸಾವಿರ ಸಂಖ್ಯೆಯ ಭಕ್ತರು  ಹೊರ ಆವರಣದಲ್ಲಿ ಊಟಕ್ಕಾಗಿ ಕಾದಿರಲು ವಿಶಾಲ ಕೋಣೆಯನ್ನು ನಿರ್ಮಿಸಲಾಗಿದೆ.
  
ಟೇಬಲ್‌ ವ್ಯವಸ್ಥೆ 
ಈ ವರೆಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಅನ್ನ ಪ್ರಸಾದ ಸ್ವೀಕಾರಕ್ಕೆ ನೆಲದಲ್ಲಿ ಕೂರಬೇಕಿತ್ತು. ಈಗ ಎಲ್ಲರಿಗೂ ಟೇಬಲ್‌, ಫೈಬರ್‌ ಚೆಯರ್‌ ವ್ಯವಸ್ಥೆ  ಮಾಡಲಾಗುತ್ತಿದೆ.  

ದೇಗುಲದಿಂದಲೇ ವೆಚ್ಚ 
ಒಳ ಚರಂಡಿ, ಕುಡಿಯುವ ನೀರಿನ ಸರಬರಾಜು ಸಹಿತ ಭೋಜನ ಶಾಲೆ ನಿರ್ಮಾಣಕ್ಕೆ ತಗಲುವ ಸುಮಾರು ಒಟ್ಟು  66 ಕೋಟಿ ರೂ. ವೆಚ್ಚವನ್ನು ಕೊಲ್ಲೂರು ದೇಗುಲ ಭರಿಸುತ್ತಿದೆ. ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ ತ್ವರಿತಗತಿ ಕಾಮಗಾರಿಗೆ ಮುಂದಾಗಿದ್ದಾರೆ. ಭೋಜನ ಶಾಲೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಅತೀ ಶೀಘ್ರ ಭಕ್ತರ ಉಪಯೋಗಕ್ಕೆ ಲಭ್ಯವಾಗಲಿದೆ. 
– ಹರೀಶ ಕುಮಾರ್‌ ಶೆಟ್ಟಿ,ಅಧ್ಯಕ್ಷರು ಕೊಲ್ಲೂರು ದೇಗುಲ ವ್ಯವಸ್ಥಾಪನಾ ಸಮಿತಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.