ಗಂಗೊಳ್ಳಿ: ಸುತ್ತಲೂ 3 ನದಿಗಳಿದ್ದರೂ ಬೇಸಗೆಯಲ್ಲಿ ನೀರಿಗೆ ಬರ


Team Udayavani, Feb 18, 2019, 1:00 AM IST

gangolli.jpg

ಗಂಗೊಳ್ಳಿ: ಕುಂದಾಪುರ ತಾಲೂಕಿನ ದೊಡ್ಡ ಗ್ರಾ.ಪಂ.ಗಳಲ್ಲಿ ಒಂದಾದ ಗಂಗೊಳ್ಳಿಯ ಸುತ್ತಲೂ 3 ನದಿಗಳು ಹರಿಯುತ್ತಿದ್ದರೂ ಬೇಸಗೆಯಲ್ಲಿ  ನೀರಿಗೆ ಪರದಾಡಬೇಕಾಗಿದೆ.   

ಮೂರು ನದಿಗಳು ಸೌಪರ್ಣಿಕಾ, ಹಾಲಾಡಿ ಹಾಗೂ ಚಕ್ರಾ ನದಿಗಳು ಹರಿಯುವುದು ಮಾತ್ರವಲ್ಲದೆ ಪಂಚ ನದಿಗಳು ಸಂಗಮವಾಗಿ ಅರಬಿ ಸಮುದ್ರ ಸೇರುವ ಪ್ರದೇಶವಾದ (ಪಂಚ ಗಂಗಾವಳಿ) ಗಂಗೊಳ್ಳಿಯಲ್ಲಿ ಸದ್ಯಕ್ಕೆ ನೀರಿನ ಸಮಸ್ಯೆಯೇನು ಇಲ್ಲದಿದ್ದರೂ, ಮಾರ್ಚ್‌ನಿಂದ ಆರಂಭವಾಗಿ ಎಪ್ರಿಲ್‌, ಮೇ ವರೆಗೆ ಅಂದರೆ ಮಳೆಗಾಲ ಆರಂಭವಾಗುವವರೆಗೆ ಕೆಲವೆಡೆಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಂಭವವಿದೆ.  

ಎಲ್ಲೆಲ್ಲಿ ನೀರಿನ ಸಮಸ್ಯೆ?
13,014 ಜನ ಸಂಖ್ಯೆಯಿರುವ ಗಂಗೊಳ್ಳಿ ಗ್ರಾಮದ ಬಂದರು ಪ್ರದೇಶ, ಮಲ್ಯರಮಠ, ದಾಕುಹಿತ್ಲು, ಲೈಟ್‌ಹೌಸ್‌, ಮ್ಯಾಂಗನೀಸ್‌ ವಾರ್ಫ್‌, ಖಾರ್ವಿಕೇರಿ, ಕಲೈಕಾರ್‌ ಪ್ರದೇಶಗಳು ಕೆಳಗಿನ ಭಾಗ ಆಗಿರುವುದರಿಂದ ಟ್ಯಾಂಕ್‌ನ ನೀರು ಪೂರೈಕೆ ಆಗುತ್ತಿದೆ. ಆದರೆ ಎತ್ತರದ ಪ್ರದೇಶವಾದ ಮೇಲ್‌ ಗಂಗೊಳ್ಳಿ, ಅಂಬೇಡ್ಕರ್‌ ಕಾಲನಿ, ಬಾವಿಕಟ್ಟೆ ಭಾಗಗಳಲ್ಲಿ ಮಾತ್ರ ಮಾರ್ಚ್‌ನಿಂದ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳು ತ್ತಿದೆ. ಕಳೆದ ಬಾರಿಯೂ ಇದು ಪುನರಾವರ್ತನೆ ಯಾಗಿದೆ. 

ಬಾವಿಗೂ ಉಪ್ಪು ನೀರು ಪ್ರಭಾವ
ಗಂಗೊಳ್ಳಿಯ ಅನೇಕ ಮನೆಗಳಲ್ಲಿ ಸ್ವಂತದ ಬಳಕೆಗೆ ತೆರೆದ ಬಾವಿಯಿದ್ದರೂ ಅಲ್ಲಿ ನೀರಿನ ಮಟ್ಟ ಕೆಳಕ್ಕೆ ಹೋದಂತೆ ಉಪ್ಪು ನೀರಿನ ಸಮಸ್ಯೆ ಕಾಡುತ್ತಿದೆ. ಬೇಸಗೆಯಲ್ಲಂತೂ ಈ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುತ್ತಿದೆ. 
ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಇತ್ತೀಚೆಗಷ್ಟೇ ಚುನಾವಣೆ ನಡೆದಿದೆ. ಹೊಸ ಆಡಳಿತಕ್ಕೆ ಇಲ್ಲಿನ ನೀರಿನ ಸಮಸ್ಯೆಯೇ ದೊಡ್ಡ ಸವಾಲಾಗಿದೆ. ಕಳೆದ ಅವಧಿಯಲ್ಲಿ ಮೀಸಲಾತಿ   ಸಮಸ್ಯೆಯಿಂದಾಗಿ ಎರಡೂವರೆ ವರ್ಷಗಳಿಂದ ಆಡಳಿತವೇ ಇದ್ದಿರಲಿಲ್ಲ. ಈಗ ಹೊಸ ಆಡಳಿತ ರಚನೆ ಯಾಗಿರುವುದರಿಂದ ಇಲ್ಲಿನ ಜನರು ನೀರಿನ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆಯಲ್ಲಿದ್ದಾರೆ. 

ಅನುದಾನ ಮೀಸಲು
ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಮೇಲ್‌ ಗಂಗೊಳ್ಳಿ ಭಾಗದಲ್ಲಿ 2 ಹೊಸ ಬೋರ್‌ವೆಲ್‌ಗ‌ಳನ್ನು  ಕೊರೆಸಲಾಗುವುದು. ಹೊಸ ಪೈಪ್‌ಲೈನ್‌ಗೆ ಅನುದಾನ ಮೀಸಲಿರಿಸಲಾಗಿದೆ. 
– ಮಾಧವ ಬಿ., ಕಾರ್ಯದರ್ಶಿ, ಗ್ರಾ.ಪಂ. ಗಂಗೊಳ್ಳಿ

ಪೂರೈಕೆಯೇ ಆದ್ಯತೆ
ಸಮುದ್ರಕ್ಕೆ ಹೊಂದಿಕೊಂಡೇ ಇರುವ ಗ್ರಾಮವಾಗಿರುವು ದರಿಂದ ಕುಡಿಯುವ ನೀರಿನ ಸಮಸ್ಯೆಯಿದೆ. ಎಲ್ಲ ಕಡೆಗೆ ಕುಡಿಯುವ ನೀರು ಪೂರೈಸುವುದೇ ಪ್ರಮುಖ ಆದ್ಯತೆಯಾಗಿದೆ. ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಕಳುಹಿಸಿ, ನೀರಿನ ಸಮಸ್ಯೆ ಕಾಡದಂತೆ ಎಚ್ಚರಿಕೆ ಕೈಗೊಳ್ಳಲಾಗುವುದು. 
– ಶ್ರೀನಿವಾಸ ಖಾರ್ವಿ, ಅಧ್ಯಕ್ಷರು, ಗಂಗೊಳ್ಳಿ ಗ್ರಾ.ಪಂ.

–  ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.