ಶಾನಾಡಿಯಲ್ಲಿ ಬೆಂಕಿ ದುರಂತ: ಅಪಾರ ಹಾನಿ
Team Udayavani, Feb 23, 2019, 12:30 AM IST
ತೆಕ್ಕಟ್ಟೆ: ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾನಾಡಿ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದಾಗಿ ನೂರಾರು ಎಕರೆ ಪ್ರದೇಶ ಕರಟಿ ಹೋದ ಘಟನೆ ಫೆ.22ರಂದು ಮಧ್ಯಾಹ್ನ ಸಂಭವಿಸಿದೆ.
ಕೆದೂರಿನ ತೋಟಗಾರಿಕಾ ಇಲಾಖೆ ಎದುರಿನ ಸುಮಾರು 30 ಎಕರೆ ಪ್ರದೇಶದಲ್ಲಿ ಬೆಂಕಿ ಕಾಣಿಸಿ ಕೊಂಡಿತ್ತು. ಗಾಳಿಯ ತೀವ್ರತೆ ಹೆಚ್ಚುತ್ತಿದ್ದಂತೆ ಬೆಂಕಿಯು ಸಮೀ ಪದ ಹಿರಿಯ ಸಾವಯವ ಕೃಷಿಕ ಶಾನಾಡಿ ರಾಮಚಂದ್ರ ಭಟ್ ಅವರ ತೋಟಕ್ಕೆ ವ್ಯಾಪಿಸಿತು. ಸುಮಾರು 2.5 ಎಕರೆ ವಿಸ್ತೀರ್ಣದ ತೋಟದಲ್ಲಿ ಬೆಳೆದು ನಿಂತಿದ್ದ 150ಕ್ಕೂ ಅಧಿಕ ಅಡಿಕೆ ಮರಗಳು, 40 ಅಗರ್ ವುಡ್ ಗಿಡಗಳು, 45 ಸಾಗುವಾನಿ ಗಿಡ, 55 ಗೇರು ಗಿಡಗಳು, 10 ಹಲಸು, 5 ಶ್ರೀಗಂಧ, ಜೇನು ಪೆಟ್ಟಿಗೆ, ನೂರಕ್ಕೂ ಅಧಿಕ ಬಾಳೆಗಿಡಗಳು, ಅಪರೂಪದ ಔಷಧೀಯ ಸಸ್ಯಗಳು ಸಹಿತ ಪಂಪ್ ಶೆಡ್ ಹಾಗೂ ಹನಿ ನೀರಾವರಿ ವ್ಯವಸ್ಥೆ ಸುಟ್ಟು ಹೋ ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಪ್ರತಾಪ್ ನಗರದ ಪ್ರಕಾಶ್ ಅವರ ಸುಮಾರು 5 ಎಕರೆ ವಿಸ್ತೀರ್ಣದಲ್ಲಿದ್ದ ಅಡಿಕೆ ಹಾಗೂ ಬಾಳೆ ಗಿಡಗಳು, ದನದ ಕೊಟ್ಟಿಗೆ ಮುಂತಾದವು ಭಸ್ಮವಾಗಿವೆ. ಶಾನಾಡಿ ಪ್ರಶಾಂತ್ ಶೆಟ್ಟಿಯವರ ಸುಮಾರು 2 ಎಕರೆ ವಿಸ್ತೀರ್ಣದ ರಬ್ಬರ್ ತೋಟ,ಗಣೇಶ್ ಪುತ್ರನ್,ಕೆದೂರು ಪ್ರತಾಪ್ ನಗರ ಗುಣಶೀಲ, ಮನೋಹರ್, ಪದ್ದು,ಉದಯ ಅವರ ತೋಟಗಳಿಗೂ ಹಾನಿಯಾಗಿದೆ.
ಸ್ಥಳೀಯರು ಹಾಗೂ ಕುಂದಾಪುರ ಅಗ್ನಿಶಾಮಕ ಸಿಬಂದಿ ಬೆಂಕಿ ನಂದಿಸಿದರು.ಕೆದೂರು ಗ್ರಾ.ಪಂ.ಅಧ್ಯಕ್ಷ ಭುಜಂಗ ಶೆಟ್ಟಿ, ಗ್ರಾ.ಪಂ.ಸದಸ್ಯರು ಹಾಗೂ ಪ್ರಭಾರ ಪಿಡಿಒ ಹೆರಿಯಣ್ಣ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ