ಭತ್ತದ ಬೆಳೆಗೆ ಕಳೆ ಬಾಧೆ
Team Udayavani, Mar 16, 2019, 12:30 AM IST
ಕುಂದಾಪುರ: ಭತ್ತ ಬಿತ್ತಿ ರಾಗಿ ತೆಗೆದರು ಎಂಬುದು ಇಲ್ಲಿನ ಹೊಸ ಗಾದೆಯಾಗುತ್ತಿದೆ!. ಕಾರಣ, ತಾಲೂಕಿನ ವಿವಿಧೆಡೆ ಸುಗ್ಗಿ ಭತ್ತದ ಬೆಳೆ ಗದ್ದೆಯಲ್ಲಿ ಕಟಾವಿನ ವೇಳೆ ರಾಗಿ ಚೆಂಡಿನಂತಹ ಕೋಳಿ ಆಹಾರದ ಮಾದರಿಯ ವಿಚಿತ್ರ ಕಳೆಗಿಡ ಕಾಣಿಸಿಕೊಂಡಿದ್ದು ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂದು ರೈತರು ಪರಿತಪಿಸುತ್ತಿದ್ದಾರೆ. ನೂರಾರು ಎಕರೆ ಗದ್ದೆಯಲ್ಲಿ ಒಂದೇ ನಮೂನೆಯ ಕಳೆಗಿಡ ಇದ್ದು ಯಾವುದೇ ಇಲಾಖೆಗಳಿಂದ ಇದಕ್ಕೆ ಇನ್ನೂ ಪರಿಹಾರ ದೊರೆತಿಲ್ಲ. ಭತ್ತದ ಗದ್ದೆಯೋ ರಾಗಿ ಗದ್ದೆಯೋ ಎಂದು ಅನುಮಾನ ಬರುವಂತೆ ಕಳೆಗಿಡ ತುಂಬಿದ ದೃಶ್ಯ ಕಾಣುವಾಗ ರೈತನ ಶ್ರಮದ ದುಡಿಮೆ ವ್ಯರ್ಥವಾದುದಕ್ಕಾಗಿ ಕರುಳು ಚುರುಕ್ ಎನ್ನುತ್ತದೆ.
ಎರಡು ವರ್ಷಗಳಿಂದ…
ಎರಡು ವರ್ಷಗಳ ಹಿಂದೆ ಈ ಭಾಗದಲ್ಲೆಲ್ಲಾ ಆಫ್ರಿಕಾದ ಬಸವನಹುಳದ ಬಾಧೆ ಕಾಣಿಸಿತ್ತು. ಅದನ್ನು ಹೇಗೋ ಏನೋ ಎಂದು ಸುಧಾರಿಸಿ ಏಗುವಷ್ಟರಲ್ಲಿ ಕಳೆ ಸಮಸ್ಯೆ ಕಾಣಿಸಿದೆ. ಕಳೆ ಗಿಡ ರಾಗಿ ಗಿಡದ ಮಾದರಿಯಲ್ಲಿ ತೆನೆಹೊತ್ತಂತೆ ಇದೆ. ಕಳೆದ ವರ್ಷವೂ ಸಮಸ್ಯೆಯಾಗಿತ್ತು, ಪರಿಹಾರ ದೊರೆತಿರಲಿಲ್ಲ. ಈ ವರ್ಷ ಪ್ರಮಾಣ ಹೆಚ್ಚಾಗಿದೆ. ಭತ್ತದ ಗದ್ದೆಯಲ್ಲಿ ಭತ್ತಕ್ಕಿಂತ ಹೆಚ್ಚು ಈ ಕಳೆಯ ದರ್ಬಾರೇ ಆಗಿದೆ. ಇದರಿಂದಾಗಿ ಸುಗ್ಗಿ ಬೆಳೆಯ ಮೇಲೆ ಪರಿಣಾಮ ಆಗಿದ್ದು ಕಟಾವಿಗೂ ಸಮಸ್ಯೆಯಾಗಿದೆ. ಖಾತಿ ಬೆಳೆಗೂ ತೊಂದರೆ ಮುಂದುವರಿಯಲಿದೆ.
ಕ್ಷೀಣ
ಸ್ಥಳೀಯವಾಗಿ ಹೆಚ್ಚು ಬಳಸುವ ಎಂಒ4 ಬಿತ್ತನೆ ಬೀಜದ ಸ್ವಲ್ಪ ಪ್ರಮಾಣದ ಕೊರತೆಯ ಹೊರತಾಗಿ ಇಲಾಖೆಯ ಎಲ್ಲ ಪ್ರೋತ್ಸಾಹಗಳ ಮಧ್ಯೆಯೂ ಭತ್ತ ಬೆಳೆಯುವವರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಈ ಮಧ್ಯೆಯೂ ಬೆಳೆಸಿದ್ದು ಪಾಲಿಗೆ ದೊರೆಯದಂತಹ ವಾತಾವರಣ ನಿರ್ಮಾಣವಾದರೆ ಕಷ್ಟ ಎಂದು ರೈತರು ಬೇಸರಿಂದ ನುಡಿಯುತ್ತಿದ್ದಾರೆ.
ಸ್ಪಂದನ ಇಲ್ಲ
ಸಮಸ್ಯೆ ಕುರಿತು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದವರ ಗಮನಕ್ಕೆ ತಂದರೂ ಯಾವುದೇ ಪರಿಹಾರ ದೊರಕಿಲ್ಲ. ಅವರು ಕನಿಷ್ಠ ಬಂದು ಕೂಡ ನೋಡಿಲ್ಲ ಎನ್ನುತ್ತಾರೆ ಸಂತ್ರಸ್ತ ರೈತರು. ಕೃಷಿ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಅವರ ಆಗಮನಕ್ಕಾಗಿ ಕಾಯುತ್ತಿದ್ದಾರೆ.
ಎಲ್ಲೆಲ್ಲಿ
ಹಾಲಾಡಿ, ಶಂಕರ ನಾರಾಯಣ, ವಂಡ್ಸೆ ಪರಿಸರದ ಇಪ್ಪತ್ತಕ್ಕೂ ಅಧಿಕ ಮಂದಿ ರೈತರ ನೂರಾರು ಎಕರೆ ಗದ್ದೆಯಲ್ಲಿ ಈ ಸಮಸ್ಯೆ ಕಾಣಿಸಿ ಕೊಂಡಿದೆ.
ಭತ್ತದ ಇಳುವರಿ
ಕೃಷಿ ಇಲಾಖೆ ಮಾಹಿತಿ ಪ್ರಕಾರ, ಮುಂಗಾರಿನಲ್ಲಿ ಉಡುಪಿಯಲ್ಲಿ 15,412, ಕುಂದಾಪುರದಲ್ಲಿ 13,728, ಕಾರ್ಕಳದಲ್ಲಿ 6,347 ಎಂದು ಒಟ್ಟು 35,487ಹೆಕ್ಟೇರ್ನಲ್ಲಿ ಭತ್ತ ಬೆಳೆಯಲಾಗಿದೆ. 44,000 ಹೆಕ್ಟೇರ್ನಲ್ಲಿ ಬೆಳೆಯುವ ಗುರಿ ಹೊಂದಲಾಗಿತ್ತು. ಹಿಂಗಾರಿನಲ್ಲಿ ಉಡುಪಿಯಲ್ಲಿ 663, ಕುಂದಾಪುರದಲ್ಲಿ 1,296, ಕಾರ್ಕಳದಲ್ಲಿ 1,746 ಎಂದು ಒಟ್ಟು 3,705 ಹೆಕ್ಟೇರ್ನಲ್ಲಿ ಬೆಳೆಯಲಾಗಿದೆ. 6 ಸಾವಿರ ಹೆಕ್ಟೇರ್ನಲ್ಲಿ ಬೆಳೆಯುವ ಗುರಿಯನ್ನು ಕೃಷಿ ಇಲಾಖೆ ಹಾಕಿಕೊಂಡಿತ್ತು.
ಗಮನಕ್ಕೆ ಬಂದಿದೆ
ಕುಂದಾಪುರ ತಾಲೂಕಿನ ವಿವಿಧೆಡೆ ಭತ್ತದ ಗದ್ದೆಗಳಲ್ಲಿ ರಾಗಿಗಿಡದ ಮಾದರಿಯ ಕಳೆ ಇರುವುದು ಗಮನಕ್ಕೆ ಬಂದಿದೆ. ಇಲ್ಲಿಗೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಕಳುಹಿಸಿ ಸಮಸ್ಯೆಯ ಕುರಿತು ವರದಿ ಕಳುಹಿಸಲು ಸೂಚಿಸಿದ್ದೇನೆ. ಒಂದೆರಡು ದಿನಗಳಲ್ಲಿ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಲಿದ್ದಾರೆ. ಮೊದಲ ಬೆಳೆ ಮುಂಗಾರು ಅನಂತರ ಗದ್ದೆಯಲ್ಲಿ ತೇವಾಂಶ ಇರುವ ಕಾರಣ ಕಳೆ ಗಿಡ ಬರುವುದು ಸಹಜ. ಆದರೆ ಇಲ್ಲಿ ಸುಗ್ಗಿ, ಖಾತಿ ಬೆಳೆಗೆ ತೊಂದರೆಯಾಗುವಷ್ಟು ಹೊಸ ವಿಧದ ಕಳೆ ಬಂದಿದ್ದು ಸಮಸ್ಯೆ ನಿವಾರಣೆಗೆ ಸ್ಪಂದಿಸುತ್ತೇವೆ.
– ಕೆಂಪೇಗೌಡ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಉಡುಪಿ ಜಿಲ್ಲೆ
ಕೆವಿಕೆ ಸ್ಪಂದನೆ ಇಲ್ಲ
ಕಳೆದ ವರ್ಷದಿಂದ ಬ್ರಹ್ಮಾವರದ ಕೆವಿಕೆಗೆ ಹೇಳುತ್ತಿದ್ದೇವೆ. ಯಾವುದೇ ಸ್ಪಂದನೆ ದೊರೆತಿಲ್ಲ. ಗ್ರಾಮಸಭೆಯಲ್ಲೂ ಮಾಹಿತಿ ನೀಡಿಲ್ಲ. ಕೃಷಿ ಇಲಾಖೆ ಸ್ಪಂದಿಸಿದೆ. ಆದರೆ ಸಮಸ್ಯೆ ಪರಿಹಾರವಾಗಿಲ್ಲ.
– ರಾಘವೇಂದ್ರ ಹಾಲಾಡಿ,
ಪ್ರಗತಿಪರ ಕೃಷಿಕ
– ಲಕ್ಷ್ಮೀ ಮಚ್ಚಿನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ