ಕೇಶವ ಸಹಿತ ಇಬ್ಬರಿಗೆ ನ್ಯಾಯಾಂಗ ಬಂಧನ


Team Udayavani, Mar 16, 2019, 12:30 AM IST

z-32.jpg

ಕೋಟ: ತೆಕ್ಕಟ್ಟೆ- ಕೆದೂರಿನ ಸ್ಫೂರ್ತಿಧಾಮ ಸಂಸ್ಥೆಯಲ್ಲಿದ್ದ ಅನಾಥ ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಸ್ಥಳೀಯ ನೂಜಿಯ ನಿವಾಸಿ ಹನುಮಂತ ಹಾಗೂ ಸಂಸ್ಥೆಯ ಮುಖ್ಯಸ್ಥ ಕೇಶವ ಕೋಟೇಶ್ವರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಗೆ ಪೋಕ್ಸೋ ಕಾಯಿದೆಯಡಿ ಮಾ. 27ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಧಾಮದಿಂದ ತಪ್ಪಿಸಿಕೊಂಡ ಬಾಲಕಿಯೋರ್ವಳು ಮಾ. 13ರಂದು ಸಾಸ್ತಾನದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿ ಕೋಟ ಪೊಲೀಸರಿಗೆ ಹಸ್ತಾಂತರಿಸಲ್ಪಟ್ಟಿದ್ದಳು. ಅನಾಥೆಯಾಗಿದ್ದ ಆಕೆ ಹಲವು ವರ್ಷಗಳಿಂದ ಸ್ಫೂ³ರ್ತಿಯಲ್ಲಿ ವಾಸವಿದ್ದು, ಇತ್ತೀಚೆಗೆ ಮಂಗಳೂರಿನ ಕುಟುಂಬ ವೊಂದು ದತ್ತು ಪಡೆದಿತ್ತು. ಆರೋಗ್ಯದ ಸಮಸ್ಯೆಯಿಂದ ಆಕೆ ಮತ್ತೆ ಸ್ಫೂರ್ತಿಗೆ ವಾಪಸಾಗಿದ್ದಳು. ಇಲ್ಲಿ ಸ್ಥಳೀಯ ವ್ಯಕ್ತಿ ಹನುಮಂತ ಎಂಬಾತ ಮೊದಲಿನಿಂದ ಲೈಂಗಿಕ ದೌರ್ಜನ್ಯ ನೀಡುತ್ತಿದ್ದು ಅದನ್ನು ಮುಂದುವರಿಸಿದ್ದ. ಇದರಿಂದ ಬೆದರಿದ ಆಕೆ ದತ್ತು ಪಡೆದವರ ಬಳಿಗೆ ತೆರಳಲು ನಿಶ್ಚಯಿಸಿ ಅಲ್ಲಿಂದ ತಪ್ಪಿಸಿಕೊಂಡಿದ್ದಳು ಎಂಬ ವಿಚಾರ ತಿಳಿದುಬಂತು.

ಕೋಟ ಪೊಲೀಸರು ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ಹಸ್ತಾಂ ತರಿಸಿದ್ದಾರೆ. ಹನುಮಂತನನ್ನು ವಶಕ್ಕೆ ಪಡೆದ ಪೊಲೀಸರು ಸ್ಫೂರ್ತಿಧಾಮಕ್ಕೆ ಭೇಟಿ ನೀಡಿ ಆರೇಳು ಬಾಲಕಿಯರನ್ನು ವಿಚಾರಿಸಿದರು. ಅವರ ಮೇಲೂ ದೌರ್ಜನ್ಯ ದೃಢವಾಯಿತು. ಒಬ್ಟಾಕೆ ಕೇಶವ ಕೋಟೇಶ್ವರ ಕೂಡ ದೌರ್ಜನ್ಯ ಎಸಗಿದ್ದಾನೆ ಎಂದ ಕಾರಣ ತಡರಾತ್ರಿ ಆತನನ್ನೂ ಬಂಧಿಸಲಾಯಿತು.

ಪುಸಲಾಯಿಸಿ ಕೃತ್ಯ
ಸಂಬಂಧಿಯೋರ್ವರು ಇಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿ ಹನುಮಂತ ಆಗಾಗ ಇಲ್ಲಿಗೆ ಬಂದು ಹೋಗುತ್ತಿದ್ದ ಹಾಗೂ ಮಕ್ಕಳಿಗೆ ಚಾಕಲೇಟ್‌, ತಿಂಡಿ ನೀಡಿ ಪರಿಚಯ ಮಾಡಿಕೊಂಡಿದ್ದ. ರಾತ್ರಿ ವೇಳೆ ಕದ್ದು-ಮುಚ್ಚಿ ಕಿಟಕಿಯ ಮೂಲಕ ಒಳಪ್ರವೇಶಿಸಿ ದೌರ್ಜನ್ಯ ಎಸಗುತ್ತಿದ್ದ. ಸಂಸ್ಥೆಯವರಿಗೆ ಈ ವಿಚಾರ ತಿಳಿದಾಗ ಆತನನ್ನು ತರಾಟೆಗೆ ತೆಗೆದುಕೊಂಡು ರಾಜಿ ಮೂಲಕ ಪ್ರಕರಣ ಇತ್ಯರ್ಥಕ್ಕೆ ಪ್ರಯತ್ನಿಸಿದ್ದರು ಎನ್ನಲಾಗಿದೆ. ತನಿಖೆ ವೇಳೆ ಇನ್ನಷ್ಟು ವಿಚಾರಗಳು ಹೊರಬರುವ ಸಾಧ್ಯತೆ ಇದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

22 ಮಕ್ಕಳ ಸ್ಥಳಾಂತರ
ತೆಕ್ಕಟ್ಟೆ: ಸ್ಫೂರ್ತಿಧಾಮದಲ್ಲಿರುವ 22 ಮಕ್ಕಳನ್ನು (16 ಬಾಲಕರು, 6 ಬಾಲಕಿಯರು) ಜಿಲ್ಲಾಡಳಿತದ ನಿರ್ದೇಶನದಂತೆ ಉಡುಪಿ ನಿಟ್ಟೂರಿನ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ರಕ್ಷಣೆ ನೀಡಲಾಗಿದೆ. ದತ್ತು ಮಕ್ಕಳನ್ನು ಸಂತೆಕಟ್ಟೆಯಲ್ಲಿನ ದತ್ತು ಕೇಂದ್ರಗಳಿಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.