ಇಂದಿನಿಂದ “ಕುಡುಬಿ’ ಹೋಳಿ ಹಬ್ಬ


Team Udayavani, Mar 17, 2019, 4:01 AM IST

kudubi.png

ಕುಂದಾಪುರ: ಫಾಲ್ಗುಣ ಮಾಸದ ಏಕಾದಶಿಯಿಂದ ಆರಂಭವಾಗಿ ಹುಣ್ಣಿಮೆಯವರೆಗೆ ವಿವಿಧ ಸಮುದಾ ಯದವರು ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ.  ಕುಡುಬಿ, ಖಾರ್ವಿ, ಮರಾಠಿ ಸಮಾಜದವರೆಲ್ಲರೂ ವಿಶಿಷ್ಟ ರೀತಿಯಲ್ಲಿ ಹೋಳಿ ಆಚರಿಸುತ್ತಾರೆ. ಅದರಲ್ಲೂ ಜಿಲ್ಲೆಯ ಕುಡುಬಿ ಜನಾಂಗದವರು 5 ದಿನಗಳ ಕಾಲ ತನ್ನದೇ ಆದ ರೀತಿಯಲ್ಲಿ ವೈಶಿಷ್ಟ ಪೂರ್ಣವಾಗಿ ಹಬ್ಬ ಆಚರಿಸುತ್ತಾರೆ.

ಹೋಳಿ ಹಬ್ಬದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ. ಫಾಲ್ಗುಣ ಮಾಸದ ಏಕಾದಶಿಯಿಂದ ಹುಣ್ಣಿಮೆ ಯವರೆಗೆ (ಅಂದರೆ ಈ ವರ್ಷ ಮಾ. 17 ರಿಂದ ಮಾ. 22ರವರೆಗೆ) ಕುಡುಬಿ ಜನಾಂಗದವರು ಹೋಳಿ ಹಬ್ಬವನ್ನು ಆಚರಿಸುತ್ತಾರೆ. 

ಹಬ್ಬದ ಆಚರಣೆ ಹೇಗೆ?
ಮುನ್ನ ದಿನವೇ ಹಬ್ಬದ ಸಿದ್ಧತೆಗಳು ಆರಂಭಗೊಂಡಿದ್ದು, ಏಕಾದಶಿಯ ದಿನ ಬೆಳಗಿನ ಜಾವಕ್ಕೂ ಮುನ್ನವೇ ಎಲ್ಲ ಕೂಡು ಕಟ್ಟುಗಳ ಸದಸ್ಯರೆಲ್ಲ ಆಯಾಯ ಭಾಗದ ಗುರಿಕಾರರ ಮನೆಗೆ ಬಂದು ಸೇರಬೇಕು. ಅಲ್ಲಿ ದೇವರ ಪ್ರತಿಷ್ಠಾಪನೆ, ಹಾಡುಗಳ ಮೂಲಕವೇ ವಿಧಿ- ವಿಧಾನ ಪೂರೈಸಿ, ಕೋಲಾಟ, ಗುಮ್ಮಟೆ ನೃತ್ಯ ಮಾಡಿ, ಬಳಿಕ ಗ್ರಾಮ ದೇವಸ್ಥಾನದಲ್ಲಿ ಕೋಲಾಟ, ಗುಮ್ಮಟೆ ನೃತ್ಯ ಮಾಡಲಾಗುತ್ತದೆ. ಬಳಿಕ ಮೊದಲೆರಡು ದಿನಗಳ ಕಾಲ ಹೊರ ಗ್ರಾಮಗಳ ಕುಡುಬಿ ಸಮುದಾಯದವರ ಮನೆಗೆ ಹೋಗಿ, 3 ನೇ ದಿನ ಅವರದೇ ಗ್ರಾಮಕ್ಕೆ ಬಂದು ಅಲ್ಲಿನ ಎಲ್ಲರ ಮನೆಗೂ ಹೋಗುತ್ತಾರೆ. 5 ನೇ ದಿನ ಮತ್ತೆ ಗುರಿಕಾರರ ಮನೆಯಲ್ಲಿ ಸೇರುತ್ತಾರೆ. 

46 ಕೂಡು ಕಟ್ಟುಗಳು
ಉಡುಪಿ ಜಿಲ್ಲೆಯಲ್ಲಿ ಒಟ್ಟು 46 ಕೂಡು ಕಟ್ಟುಗಳಿವೆ. ಮಂದಾರ್ತಿ, ಕೊಕ್ಕರ್ಣೆ, ಹಾಲಾಡಿ, ಬೆಳ್ವೆ, ಬಾಕೂìರು, ಮುದ್ದೂರು, ಯಳಂತೂರು, ಶೇಡಿಮನೆ, ಹಿಲಿಯಾಣ, ಕಕ್ಕುಂಜೆ ಕಡೆಗಳೆಲ್ಲ ಕುಡುಬಿ ಮನೆತನಗಳಿವೆ. ಕುಡುಬಿಯವರ ಪ್ರಕಾರ ಕೂಡು ಕಟ್ಟು ಅಂದರೆ 1 ಗ್ರಾಮ ಅಂತ ಅರ್ಥ. ಗ್ರಾಮಕ್ಕೊಬ್ಬರು ಗುರಿಕಾರರಿರುತ್ತಾರೆ. 46 ಕೂಡು ಕಟ್ಟುಗಳು ಸಂಖ್ಯೆಗೆ ಅನುಗುಣವಾಗಿ 2 ಅಥವಾ ಅದಕ್ಕಿಂತ ಹೆಚ್ಚು ಪಂಗಡಗಳಾಗಿ ವಿಂಗಡಿಸಿ ಮನೆ – ಮನೆಗೆ ತೆರಳಿ ಗುಮ್ಮಟೆ ಹಾಗೂ ಕೋಲಾಟ ನೃತ್ಯ ಪ್ರದರ್ಶಿಸುತ್ತಾರೆ.
 
ಹಬ್ಬದ ಮುಕ್ತಾಯ

5ನೇ ದಿನ ಎಲ್ಲರೂ ಗುರಿಕಾರರ ಮನೆಯಲ್ಲಿ ಸೇರಿ ಅಲ್ಲಿಗೆ ಹಬ್ಬ ಮುಕ್ತಾಯ. ಗೆಜ್ಜೆ, ವೇಷ ಭೂಷಣ ಕಳಚಿ, ಎಲ್ಲರೂ ಸಾಮೂಹಿಕವಾಗಿ ಸ್ನಾನ ಮಾಡುತ್ತಾರೆ. ಆ ಬಳಿಕ ಪರಿಕರಗಳಿಗೆಲ್ಲ ಗುರಿಕಾರರು ಪೂಜೆ ಮಾಡಿದ ಅನಂತರ ಬೆಂಕಿ (ಕಾಮದಹನ ಮಾಡುವುದು) ಹಾಯುತ್ತಾರೆ. ಬಳಿಕ ಸಾಮೂಹಿಕವಾಗಿ ಊಟ ಮಾಡಿದ ಬಳಿಕ ಯುವಕರು, ಮಕ್ಕಳೆಲ್ಲ ಸೇರಿ ಗ್ರಾಮದಲ್ಲಿರುವ ಮನೆ- ಮನೆಗೆ ಹೋಗಿ ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬ ಮುಗಿಯಿತು ಎನ್ನುವ ಸಂದೇಶ ರವಾನಿಸುತ್ತಾರೆ. 

ಆಚರಣೆಯ ಉದ್ದೇಶ
ವ್ರತಾಚರಣೆಯಲ್ಲಿರುವ ಶಿವನು ಮನ್ಮಥನಿಂದಾಗಿ ವ್ರತಭಂಗವಾಗಿ ಕೋಪಗೊಂಡಿರುತ್ತಾನೆ. ಅವನ ಕೋಪ ತಣಿಸುವ ಕಾರಣಕ್ಕಾಗಿ ಬುಡಕಟ್ಟು ಸಮುದಾಯದ ಕುಡುಬಿ ಜನರೆಲ್ಲ ಸೇರಿ ಹೋಳಿ ಹಬ್ಬವನ್ನು ಆಚರಿಸುತ್ತಾರೆ ಎನ್ನುವ ಹಿನ್ನೆಲೆಯಿದೆ. ಇದರಿಂದ ಶಿವನ ಕೋಪವು ಶಾಂತವಾಗಿ ಒಳಿತಾಗುತ್ತದೆ ಎನ್ನುವ ಪ್ರತೀತಿಯಿದೆ. 

ವ್ರತಾಚರಣೆ ಮಹತ್ವ
ಹೋಳಿ ಹಬ್ಬಕ್ಕೆ ನಮ್ಮಲ್ಲಿ ವಿಶೇಷ ಅರ್ಥವಿದೆ. ಹಬ್ಬಕ್ಕೆ 5 ಅಥವಾ 3 ದಿನಕ್ಕೆ ಮುಂಚೆ ಕೋಲು ಹಿಡಿಯುವುದು ಅಂದರೆ ವ್ರತಾಚರಣೆ ಆರಂಭಗೊಳ್ಳುತ್ತದೆ. ಕೋಲು ಹಿಡಿದವರು ಚಪ್ಪಲಿ ಹಾಕಬಾರದು, ಭಾರ ಹೊರಬಾರದು, ಬೇರೆಯವರ ಮನೆಯಲ್ಲಿ ಊಟ ಮಾಡಬಾರದು, ಮದಿರೆ – ಮಾನಿನಿ – ಮಾಂಸ ಸೇವನೆ ಮಾಡಬಾರದು. 
ನಾರಾಯಣ ನಾಯ್ಕ,  ಗೋಳಿಯಂಗಡಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.