ಶಿಲಾಯುಗ ಕಾಲದ ಆದಿಮ ಚಿತ್ರಗಳು ಪತ್ತೆ


Team Udayavani, Mar 18, 2019, 12:30 AM IST

s-14.jpg

ಶಿರ್ವ: ಭಾರತದ ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾದ ಕೊಲ್ಲೂರಿನ ಸಮೀಪ, ಅವಲಕ್ಕಿ ಪಾರೆ ಎಂಬ ವನ್ಯಜೀವಿ ಸಂರಕ್ಷಿತಾರಣ್ಯದ ಸ್ಥಳದಲ್ಲಿ ಸೂಕ್ಷ್ಮಶಿಲಾಯುಗ ಕಾಲದ ಮಾನವ ಬೇಟೆಯ ಚಿತ್ರಗಳು ಪತ್ತೆಯಾಗಿವೆ. ಹಂದಿ ಬೇಟೆ, ಹಕ್ಕಿ ಬೇಟೆ, ಕಾಡುಗೂಳಿಗಳ ಬೇಟೆ, ಜಿಂಕೆ ಬೇಟೆಯ ವಿವಿಧ ಆದಿಮ ಚಿತ್ರಗಳು ಕಂಡು ಬಂದಿವೆ. ಬೇಟೆಯ ವಿವಿಧ ಭಾವ-ಭಂಗಿಗಳಲ್ಲಿ ನಿಂತ ಮಾನವರ ಹಾಗೂ ಪ್ರಾಣಿಗಳ ಚಿತ್ರಗಳು ತಮ್ಮ ನೈಜತೆಯಿಂದ ಆಕರ್ಷಕವಾಗಿವೆ. ಈ ಚಿತ್ರಗಳಲ್ಲಿ ಪ್ರಧಾನವಾದ ಚಿತ್ರ ಓರ್ವ ಮಹಿಳೆಯದ್ದೆಂದು ಗುರುತಿಸಲಾಗಿದ್ದು, ಆಕೆಯ ಚಿತ್ರವನ್ನು ಆದಿಮ ಕಾಲದ ಜನರು ಆರಾಧಿಸುತ್ತಿದ್ದರೆಂದು ನಂಬಲಾಗಿದೆ. ವಿವಿಧ ರೀತಿಯ ಒಟ್ಟು 20 ಚಿತ್ರಗಳು ಪ್ರಸ್ತುತ ಪತ್ತೆಯಾಗಿದ್ದು, ಅನಂತರದ ದಿನಗಳಲ್ಲಿ ಶೋಧ  ಮುಂದುವರಿಸಲಾಗುವುದು ಎಂದು ಶಿರ್ವ ಎಂ.ಎಸ್‌.ಆರ್‌.ಎಸ್‌. ಕಾಲೇಜಿನ ಪುರಾತತ್ವ ವಿಭಾಗದ ಮುಖ್ಯಸ್ಥ ಪ್ರೊ|ಟಿ. ಮುರುಗೇಶಿ ತಿಳಿಸಿದ್ದಾರೆ. 

ಈ ಚಿತ್ರಗಳ ಶೋಧದ ಮೊದಲು ಕರ್ನಾಟಕದ ಕರಾವಳಿಯಲ್ಲಿ ಡಾ| ಕೆ.ಬಿ. ಶಿವತಾರಕ್‌, ಪಿ. ರಾಜೇಂದ್ರನ್‌ ಹಾಗೂ ಎಲ್‌.ಎಸ್‌. ರಾವ್‌ ಅವರು ಸೂಕ್ಷ್ಮಶಿಲಾಯುಗದ ನೆಲೆಗಳನ್ನು, ಉಪ್ಪಿನಂಗಡಿ, ಮಾಣಿ, ಕಾರ್ಕಳ, ಮಸಿಕೆರೆ ಮುಂತಾದ ಸ್ಥಳಗಳಲ್ಲಿ ಶೋಧಿಸಿದ್ದರು. ಆದರೆ ಇದೇ ಪ್ರಥಮ ಬಾರಿ ಆ ಸಂಸ್ಕೃತಿಗೆ ಸಂಬಂಧಿಸಿದ ಆದಿಮ ಚಿತ್ರಗಳು ಕಪ್ಪು ಪಾದೆ ಕಲ್ಲಿನ ಮೇಲೆ ಕುಟ್ಟಿ-ಉಜ್ಜಿ ಮಾಡಿರುವುದು ಕಂಡು ಬಂದಿದೆ. ಸರಿ ಸುಮಾರು, ಕ್ರಿ.ಪೂ. 10.000ದಿಂದ 3000 ವರ್ಷಗಳ ಕಾಲಾವಧಿಯನ್ನು ಸೂಕ್ಷ್ಮಶಿಲಾಯುಗ ಕಾಲವೆಂದು ಡಾ| ಅ. ಸುಂದರ ಅವರು ತರ್ಕಿಸಿದ್ದು, ಸರಿಸುಮಾರು ಅದೇ ಕಾಲದ ಚಿತ್ರಗಳೆಂದು ಅವಲಕ್ಕಿ ಪಾರೆಯ ಚಿತ್ರಗಳ ಕಾಲವನ್ನು  ತಾತ್ಕಾಲಿಕವಾಗಿ ಭಾವಿಸಲಾಗಿದೆ . 

ಈ ಅಧ್ಯಯನದಲ್ಲಿ ಕೊಲ್ಲೂರು ವನ್ಯಜೀವಿ ಅರಣ್ಯ ವಿಭಾಗದ ಆರ್‌ಎಫ್‌ಒ ನರೇಶ್‌, ಅರಣ್ಯ ಸಿಬಂದಿ, ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ಮ  ಶ್ಯಾಮಿಲಿ, ನಾಗರಾಜ ಮತ್ತು ಕೊಲ್ಲೂರಿನ ಮುರಳೀಧರ ಹೆಗಡೆ ಅಧ್ಯಯನದಲ್ಲಿ ಸಹಕರಿಸಿದ್ದಾರೆ ಎಂದು ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.