ಕನ್ನಾಡಿಗೆ ಗೌರವ ತಂದ ತಳಿ ಸಂರಕ್ಷಕರು


Team Udayavani, May 25, 2017, 12:24 AM IST

Naadi-24-5.jpg

ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ಮುದ್ಲಿ ಗೆಡ್ಡೆಗೆ ರಾಷ್ಟ್ರ ಪ್ರಶಸ್ತಿ. ಜತೆಗೆ ಹತ್ತು ಲಕ್ಷ ರೂಪಾಯಿಯ ಬಹುಮಾನ. ಈ ಸುದ್ದಿ ಬಿತ್ತರವಾದಾಗ ಕುಣುಬಿ ಸಮುದಾಯಕ್ಕೆ ಖುಷ್‌. ಪಾರಂಪರಿಕವಾಗಿ ಸಂರಕ್ಷಿಸಿಕೊಂಡು ಬಂದ ಮುದ್ಲಿ ಗಡ್ಡೆಗೆ ಮಾನ-ಸಂಮಾನ. ರಾಷ್ಟ್ರ ಮಟ್ಟದ ಸುದ್ದಿ. ಊಹಿಸದ ವಿದ್ಯಮಾನ. ಪ್ರಶಸ್ತಿಯು ಕತ್ತಲೆಯ ಬದುಕಿಗೆ ಬೆಳಕಿನ ಕಿರಣ. ಬಿಹಾರದ ಚಂಪಾರಣ್ಯದ ಸಮಾರಂಭವೊಂದರಲ್ಲಿ ಪ್ರಶಸ್ತಿ ಪ್ರದಾನ. ಕುಣುಬಿ ಸಮುದಾಯದ ಮುಖಂಡರಿಂದ ಸ್ವೀಕಾರ. ‘ಹಿರಿಯರ ಕಾಲದಿಂದಲೇ ಬದುಕಿಗಾಗಿ ಬೆಳೆಯುತ್ತಿದ್ದ ಈ ಗಡ್ಡೆಗೆ ಪ್ರಶಸ್ತಿ ಬಂದಿರುವುದರಿಂದ ಮಾರುಕಟ್ಟೆ ಸುಲಭವಾಗಬಹುದು” ಎನ್ನುವ ಖುಷಿಯನ್ನು ಹಂಚಿಕೊಂಡರು ಜಯಾನಂದ ಡೇರೇಕರ್‌. ಇವರು ಕುಣುಬಿ ಸಮುದಾಯದ ಮುಖಂಡರು.

ಕೇಂದ್ರ ಕೃಷಿ ಸಚಿವಾಲಯದ ಸಸ್ಯ ತಳಿ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರವು ಪ್ರಶಸ್ತಿಯನ್ನು ಆಯೋಜಿಸಿತ್ತು. ಸಸ್ಯ ತಳಿಗಳ ರಕ್ಷಣೆಯನ್ನು 2001ರಲ್ಲಿ ಕಾನೂನಿನ ಚೌಕಟ್ಟಿಗೆ ಸರಕಾರವು ಅಳವಡಿಸಿತ್ತು. ಯಾರು ತಳಿಗಳ ಸಂರಕ್ಷಣೆ ಮಾಡುತ್ತಾರೋ ಅದರ ಹಕ್ಕನ್ನು ಅವರಿಗೇ ಪ್ರದಾನಿಸುವ ಅಪರೂಪದ ಮತ್ತು ಅಗತ್ಯದ ಕಾಯಿದೆಯಿದು. ಪ್ರಾಧಿಕಾರವು ರಾಷ್ಟ್ರಮಟ್ಟದಲ್ಲಿ ಇಂತಹ ಪ್ರಶಸ್ತಿಯನ್ನು ನೀಡುವುದರ ಮೂಲಕ ತಳಿ ಸಂರಕ್ಷಕರಿಗೆ ಉತ್ತೇಜನ ನೀಡುತ್ತಿದೆ. ಕನ್ನಾಡಿನ ಜೋಯಿಡಾದಲ್ಲಿ ಬಹುಪಾಲು ಕುಣುಬಿ ಸಮುದಾಯದವರೇ ವಾಸ. ಯಾವುದೇ ಮೂಲಸೌಕರ್ಯಗಳು, ಸಾರಿಗೆ ಅನುಕೂಲತೆಗಳಿಂದ ದೂರವಿರುವ ಕುಟುಂಬಗಳ ಮುಖ್ಯ ಕೃಷಿ ಗೆಡ್ಡೆಗೆಣಸು. ಇಲ್ಲಿನ ಮಣ್ಣು, ಹವಾಮಾನದಲ್ಲಿ ಹುಲುಸಾಗಿ ಬೆಳೆಯುವ ಗೆಡ್ಡೆಗಳೇ ಜೀವನಾಧಾರ. 2014ಲ್ಲಿ ಜರುಗಿದ ಗೆಡ್ಡೆ ಮೇಳವು ಕೃಷಿ ಬದುಕಿಗೆ ಹೊಸ ಹಾದಿ ತೋರಿತು. ಜೋಯಿಡಾಕ್ಕೆ ವಿಜ್ಞಾನಿಗಳು ಆಗಮಿಸಿದರು. ಕೃಷಿಕರ ಜತೆ ಸಂವಾದ ಮಾಡಿದರು. ಗೆಡ್ಡೆಗಳ ಇತಿಹಾಸವನ್ನು ದಾಖಲಿಸಿದರು. ಮಾರುಕಟ್ಟೆ ಒದಗಿಸುವತ್ತ ಚಿಂತನೆಗಳು ನಡೆದುವು. ಮೌಲ್ಯವರ್ಧನೆ ಮತ್ತು ಅವುಗಳ ಮಾರಾಟ ಅವಕಾಶಗಳ ರೂಪುರೇಷೆ ಮಾಡಲಾಗಿತ್ತು. ಇವೆಲ್ಲ ಅನುಷ್ಠಾನದತ್ತ ಮುಖ ಮಾಡುತ್ತಿರುವಾಗಲೇ – ಮೂರೇ ವರುಷದಲ್ಲಿ – ಜೋಯಿಡಾ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಯಿತು. 

ಮುದ್ಲಿ ಗೆಡ್ಡೆಗೆ ವಿಶೇಷ ಸ್ಥಾನ. ಉದ್ದವಾಗಿ ಬೆಳೆವ ಗಡ್ಡೆಗೆ ಒಂದು ವರುಷ ತಾಳಿಕೆ. ಅತ್ಯಧಿಕ ಪೌಷ್ಟಿಕಾಂಶ. ಇದಕ್ಕೆ ಮುಡ್ಲಿ, ಮುಡಿಯಾ, ದೊಡ್ಡಕೆಸು, (colocasia esculenta) ಎನ್ನುವ ಹೆಸರಿದೆ. ಏಳು ತರಹದ ಖಾದ್ಯಗಳನ್ನು ಇದರಿಂದ ಮಾಡಬಹುದಂತೆ. ಪನ, ಏಟ್‌, ಕೋಂಬ್‌, ಸಾಂಬಾರ್‌, ಚಟ್ನಿ, ಏಡಿಯ ಜತೆ ಕುಲ್ಯಾ ಕಡಿ, ಸಿಗಡಿ ಜತೆ ಸುಂಡಾ ಕಡಿ, ಕಾಪಾ (ಪತ್ರೊಡೆ). ಜತೆಗೆ ಕೋನಾ ಎಂದು ಕರೆಯುವ ಡಯೋಸ್ಕೋರಿಯ ಗಡ್ಡೆಯ ಪಾಯಸ ವಿಶೇಷ. ಮುದ್ಲಿ ಅಲ್ಲದೆ ಹದಿನೈದಕ್ಕೂ ವಿವಿಧ ವೈವಿಧ್ಯ ತಳಿಗಳಿಗಳನ್ನು ಬೆಳೆಸುತ್ತಾರೆ. ತಳಿಯೊಂದನ್ನು ರಕ್ಷಿಸಿಕೊಂಡು ಬಂದ ಕುಣುಬಿ ಸಮುದಾಯಕ್ಕೇ ಈ ಪ್ರಶಸ್ತಿ ಬಂದಂತಾಗಿದೆ.

ಮೈಸೂರಿನ ಡಾ| ಸಿ.ಎನ್‌.ಮೃತ್ಯುಂಜಯಪ್ಪ (68) ಅವರಿಗೆ ತಳಿ ಸಂರಕ್ಷಣೆಯ ಕಾಯಕಕ್ಕೆ ಪ್ರಶಸ್ತಿ. ಇವರು ವೃತ್ತಿಯಲ್ಲಿ ವೈದ್ಯರು. ಮೈಸೂರಿನ ಶ್ರೀರಾಂಪುರದಲ್ಲಿ ವಾಸ. ಅವರ ಮನೆ ಹಿತ್ತಿಲಿನಲ್ಲಿ ಎಪ್ಪತ್ತಕ್ಕೂ ಮಿಕ್ಕಿ ವಿವಿಧ ಜಾತಿಯ ತಳಿಗಳನ್ನು ಬೆಳೆಸಿ ದ್ದಾರೆ. ವಾಣಿಜ್ಯ ವ್ಯವಹಾರಕ್ಕಲ್ಲ, ತಳಿಸಂರಕ್ಷಣೆಯ ಉದ್ದೇಶ. ಡಾಕ್ಟರಿಗೆ ಪ್ರವಾಸ ಆಸಕ್ತಿ. ಹೋದೆಡೆ ವಿವಿಧ ನರ್ಸರಿಗಳನ್ನು ಭೇಟಿ ಮಾಡುತ್ತಾರೆ. ಅಪರೂಪದ್ದಾದವುಗಳನ್ನು ತಂದು, ಆರೈಕೆ ಮಾಡಿ ಬೆಳೆಸುತ್ತಾರೆ. ಗಿಡಗಳನ್ನು ತರಲು ಅಸಾಧ್ಯವಾದಾಗ ಕುಡಿಗಳನ್ನು ತಂದು ಕಸಿ ಕಟ್ಟಿ ಅಭಿವೃದ್ಧಿ ಪಡಿಸುತ್ತಾರೆ. ಇವರ ಮನೆಯ ಆವರಣದಲ್ಲಿರುವ ಒಂದೇ ಮಾವಿನ ಮರದಲ್ಲಿ ಹಲವು ಬಗೆಯ ತಳಿಗಳ ಮಾವು ಲಭ್ಯ! 

‘ನಗರದ ಹಿತ್ತಿಲಿನಲ್ಲಿ ಸ್ಥಳ ತುಂಬಾ ಕಡಿಮೆ. ಮಾವಿನ ಗಿಡ ನೆಡಬೇಕೆಂದರೆ, ಬೇಕಾದ ಜಾತಿಯ ಬಗ್ಗೆ ಮನೆಯಲ್ಲಿ ಒಮ್ಮತವಿಲ್ಲ. ಗಂಡನಿಗೆ ಅಲ್ಫಾನ್ಸೋ ಇಷ್ಟ. ಹೆಂಡತಿಗೆ ಮಲ್ಲಿಕಾ. ಮಗಳಿಗೆ ಕಾಳಪ್ಪಾಡಿ. ಇಂತಹ ಕುಟುಂಬಗಳು ಚಿಂತಿಸಬೇಕಾಗಿಲ್ಲ. ಎಲ್ಲರಿಗೂ ಸಮಾಧಾನ ಆಗುವ ಫಾರ್ಮುಲಾ ಅನುಸರಿಸಬಹುದು. ಅದಕ್ಕಿರುವ ಉಪಾಯವೇ ಟಾಪ್‌ವರ್ಕಿಂಗ್‌. ಒಂದೇ ದೇಹಕ್ಕೆ ಹಲವು ತಲೆ. ಒಂದರಲ್ಲಿ ನೂರು! ಒಂದೇ ಮರದಲ್ಲಿ ಅವರವರಿಗೆ ಅಚ್ಚುಮೆಚ್ಚಿನ ಜಾತಿಯ ಹಣ್ಣು” ಡಾ| ಮೃತ್ಯುಂಜಯಪ್ಪ ಸ್ವಾರಸ್ಯವಾಗಿ ಹೇಳುತ್ತಾರೆ.

ಡಾಕ್ಟರರ ಹಿತ್ತಿಲಿನ ಮಾವಿನ ಮರದಲ್ಲಿ ನೂರು ತಳಿಗಳ ಶಿರಗಳಿವೆ! ಇದರಲ್ಲಿ ಐವತ್ತು ಬಗೆಯವು ಅಧಿಕೃತ ಹೆಸರಿರುವಂತಹುಗಳು. ಎಲ್ಲಿಂದ ತಳಿಗಳನ್ನು ಸಂಗ್ರಹಿಸಿದ್ದಾರೋ ಆ ಊರಿನ ಹೆಸರನ್ನು ಕೆಲವು ತಳಿಯದ್ದಕ್ಕೆ ನಾಮಕರಣ ಮಾಡಿದ್ದಾರೆ. ಒಂದರಲ್ಲಿ ನೂರು ಮಾವು – ಈ ಮರದಿಂದ ತಿನ್ನಲು ಕಾಯುತ್ತಿರುವ ತಳಿಗಳು ಹಲವು. ವಿಭೂತಿ ಉಂಡೆ, ಹಣ್ಣನ್ನು ತೂತು ಮಾಡಿ ಕುಡಿಯುವಂಥದ್ದು, ಸೇಬು ಮಾವು, ಅರುಣಾಚಲದ ತಳಿ… ಇತ್ಯಾದಿ. ದಾಸವಾಳ, ಸೇಬು, ಸೀತಾಫ‌ಲ, ನಿಂಬೆ ಗಿಡಗಳಿಗೆ ಡಾಕ್ಟರರ ಕಸಿ ಪ್ರಯೋಗ ಯಶಸ್ವಿ. ಅಡಿ ಗಿಡವೊಂದರಲ್ಲಿ ವಿವಿಧ ತಳಿಗಳ ಫ‌ಲಗಳನ್ನು ಪಡೆಯುವ ಯತ್ನ. ಅಳಿವಿನಂಚಿನಲ್ಲಿರುವ ಸಸ್ಯ ಪ್ರಬೇಧಗಳ ಸಂರಕ್ಷಣೆ ವಿಶೇಷಾಸಕ್ತಿ. ವಿದೇಶಿ ಸಸ್ಯ ಸಂಸಾರಗಳೂ ಇವೆ. ಕೃಷಿ -ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳಿಗೆ ಇವರ ತೋಟ ಕಲಿಕಾ ಪಠ್ಯ. ಮಡದಿ ಸುಧಾ ಹೆಗಲೆಣೆ.

ಎರಡೂ ಪ್ರಶಸ್ತಿಗಳು ತಳಿಸಂರಕ್ಷಣೆಗಾಗಿ ಪ್ರಾಪ್ತವಾದವುಗಳು. ಇಂದು ನಮ್ಮ ಅನೇಕ ಕೃಷಿ ಸಂಶೋಧನಾಲಯಗಳಲ್ಲಿ ತಳಿಗಳು ಸಂಶೋಧನೆಗಳಾಗುತ್ತಿವೆ. ಆ ಸಂಶೋಧನೆಗಳಿಗೆ ಸಿದ್ಧ ವೈಜ್ಞಾನಿಕ ಮಾನದಂಡಗಳಿವೆ. ಆದರೆ ಕೃಷಿಕರೇ ಇಂದು ಸಂಶೋಧಕ ರಾಗುತ್ತಿದ್ದಾರೆ. ಯಾವುದೇ ಪ್ರಶಸ್ತಿಗಳ ಆಸೆಯಿಂದ ಕುಣುಬಿ ಸಮುದಾಯದವರಾಗಲೀ, ಡಾ| ಮೃತ್ಯುಂಜಯಪ್ಪನವರಾಗಲಿ ತಳಿ ಸಂರಕ್ಷಣೆ ಮಾಡಿದ್ದಲ್ಲ. ಸ್ವಯಂ ಆಸಕ್ತಿಯಿಂದ ಮಾಡಿದ ಸಾಧನೆಗೆ ಪ್ರಶಸ್ತಿ ಅರಸಿ ಬಂದಿರುವುದು ಖುಷಿಯ ಸಂಗತಿ. ಇತರರಿಗೂ ಪ್ರೇರಣೆ. ಹಸಿರಿಗೆ ಸಂದ ಗೌರವ. ತಳಿ ಸಂರಕ್ಷಣೆಯಂತಹ ಕೆಲಸದಲ್ಲಿ ಬಂಟ್ವಾಳ ತಾಲೂಕಿನ ‘ಕೇಪು-ಉಬರು ಹಲಸು ಸ್ನೇಹಿಕೂಟ’ವು ಐದಾರು ವರುಷದಿಂದ ತೊಡಗಿಸಿಕೊಂಡಿದೆ. ಎಲ್ಲವೂ ಸ್ವಯಂ ಆಸಕ್ತಿಯಿಂದ ಮಾಡಿದವುಗಳು. ಹಲಸು, ಮಾವು ಮೇಳಗಳನ್ನು ಸಂಘಟಿ ಸುತ್ತಾ, ಲಭ್ಯವಾದ ಹಿಮ್ಮಾಹಿತಿಯ ಜಾಡನ್ನು ಅನುಸರಿಸಿ ಹಲವು ತಳಿಗಳ ಪತ್ತೆ ಮತ್ತು ಸಂರಕ್ಷಣೆಯ ಕೆಲಸಗಳು ಸದ್ದಿಲ್ಲದೆ ನಡೆದಿವೆ. 

ಸುಮಾರು ಇಪ್ಪತ್ತು ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಏನಿಲ್ಲವೆಂದರೂ ಮೂವತ್ತಕ್ಕೂ ಮಿಕ್ಕಿ ಹಲಸು, ಮಾವಿನ ತಳಿಗಳು ಅಭಿವೃದ್ಧಿಯಾಗಿವೆ. ಅಪರೂಪದ ತಳಿಗಳನ್ನು ಉಳಿಸುವ, ಸಂರಕ್ಷಿಸುವ ನೆಲೆಯಲ್ಲಿ ‘ಹಲಸು ಸ್ನೇಹಿ ಕೂಟ’ವು ‘ರುಚಿ ನೋಡಿ-ತಳಿ ಆಯ್ಕೆ’ ಎನ್ನುವ ಹೊಸ ಪ್ರಕ್ರಿಯೆಗೆ ಶ್ರೀಕಾರ ಬರೆದಿತ್ತು. ಸಮಾರಂಭದಲ್ಲಿ ಹತ್ತಾರು ತಳಿಯ ಹಲಸಿನ ಹಣ್ಣುಗಳನ್ನು ಕೃಷಿಕರೇ ರುಚಿ ನೋಡುವುದರ ಮೂಲಕ ತಳಿ ಆಯ್ಕೆಯನ್ನು ಮಾಡಲಾಗಿದೆ. ರುಚಿ, ಬಣ್ಣ, ತಾಳಿಕೆ, ಫಿಲ್ಲಿಂಗ್‌, ಫ‌ಲ ಬಿಡುವ ಸಮಯ… ಮೊದಲಾದ ಮಾನದಂಡಗಳನ್ನಿಟ್ಟು ತಳಿ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ವೈಜ್ಞಾನಿಕ – ಸಂಶೋಧನಾತ್ಮಕವಾದ ಮಾನದಂಡಗಳಿಲ್ಲದೇ ಇರಬಹುದು. ಆದರೆ ಆ ಊರಿನ ಅಪರೂಪದ್ದಾದ, ಹೆಚ್ಚಾಗಿ ಬೆಳಕಿಗೆ ಬಾರದಿರುವ ಉತ್ಕೃಷ್ಟ ತಳಿಗಳು ಅಭಿವೃದ್ಧಿಯಾಗಿವೆ.  

ಈಚೆಗೆ ಹಲಸು ಸ್ನೇಹಿ ಕೂಟವು ‘ಪುನರ್ಪುಳಿ ಪ್ರಪಂಚದೊಳಕ್ಕೆ’ ಎನ್ನುವ ಅಪರೂಪದ, ಖಾಸಗಿ ಸಹಭಾಗಿತ್ವದ ಕಲಾಪವನ್ನು ಹಮ್ಮಿಕೊಂಡಿತ್ತು. ಹದಿನೈದು ವಿವಿಧ ಪುನರ್ಪುಳಿ (ಕೋಕಂ) ತಳಿಗಳನ್ನು ತಳಿ ಆಯ್ಕೆ ಪ್ರಕ್ರಿಯೆಗೆ ಒಡ್ಡಲಾಗಿತ್ತು. ಡಾ| ಕತ್ರಿಬೈಲು ಶ್ರೀಕುಮಾರ್‌ ಮತ್ತು ಪೇರಡ್ಕ ಜಗನ್ನಾಥ ಶೆಟ್ಟರ ಹಿತ್ತಿಲಿನ ಎರಡು ತಳಿಗಳು ಉತ್ಕೃಷ್ಟವೆಂದು ಆಯ್ಕೆಯಾಗಿವೆ. ವಿಶ್ವವಿದ್ಯಾಲಯ, ಸಂಶೋಧನಾ ಕೇಂದ್ರಗಳು ಅಭಿವೃದ್ಧಿ ಪಡಿಸಿದ ತಳಿಗಳಷ್ಟೇ ಉತ್ಕೃಷ್ಟ‌ ತಳಿಗಳು ನಮ್ಮ ತೋಟದಲ್ಲೋ, ಕಾಡಿನಲ್ಲೋ ಇರಬಹುದು. ಅವುಗಳನ್ನು ಹುಡುಕಿ ಅಭಿವೃದ್ಧಿಪಡಿಸಬೇಕಾಗಿದೆ. ಪುನರ್ಪುಳಿ ಕಾರ್ಯಾಗಾರದಲ್ಲಿ ಕಸಿ ತಜ್ಞ ಆತ್ರಾಡಿಯ ಗುರುರಾಜ ಬಾಳ್ತಿಲ್ಲಾಯರು ನಾಲ್ಕು ಪುನರ್ಪುಳಿ ತಳಿಗಳನ್ನು ಕಸಿ ಕಟ್ಟಿ ಅಭಿವೃದ್ಧಿ ಪಡಿಸಿದ್ದರು. ಕಲಾಪದಲ್ಲಿ ಅವೆಲ್ಲ ಖಾಲಿ! ಕೃಷಿಕರ ಒಲವು ಉತ್ತೇಜಕರ. ತಳಿ ಸಂರಕ್ಷಣೆ ಮತ್ತು ಅಭಿವೃದ್ಧಿ ಜತೆಜತೆಗೆ ಆಗುವ ಕೆಲಸಗಳು. ಮನಸ್ಸಿನಿಂದ ಹುಟ್ಟುವ ತಳಿ ಪ್ರೀತಿಯ ಹತ್ತಾರು ತಳಿ ಸಂರಕ್ಷಕರಿಂದ ಇಂದು ಅಪರೂಪದ ತಳಿಗಳು ಉಳಿದುಕೊಂಡಿವೆ. ತಳಿ ಸಂರಕ್ಷಣೆಗಾಗಿ ಸರಕಾರವು ಸಸ್ಯ ತಳಿ ರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯಿದೆಯನ್ನು ರೂಪುಗೊಳಿಸಿದೆ. ಇದರ ಕಾರ್ಯವ್ಯಾಪ್ತಿಯಲ್ಲಿ ಕನ್ನಾಡಿನ ಇಬ್ಬರು ಪ್ರಶಸ್ತಿಗೆ ಭಾಜನರಾಗಿರುವುದು ಕನ್ನಾಡಿಗೆ ಗೌರವ.

– ನಾ. ಕಾರಂತ ಪೆರಾಜೆ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

e-10.jpg

ಆರಾಧನೆಗೆ ಥಳಕು ಹಾಕಿದ ಹಲಸು

z-20.jpg

ಮೇಳಗಳ ಮಾಲೆಗೆ ಈಗ ಕಾಡು ಹಣ್ಣು

b-11.jpg

ಜಾಲತಾಣ ಗುಂಪುಗಳ ಅಗೋಚರ ಕ್ಷಮತೆ

ankana-1.jpg

ತಳಿ ತಿಜೋರಿ ತುಂಬಲು ಇ-ಸ್ನೇಹಿತರ ಸಾಥ್‌

1.jpg

ಊಟದ ಬಟ್ಟಲಿಗೆ ತಟ್ಟಲಿರುವ ಅನ್ನದ ಬರದ ಬಿಸಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.