ಲೋಕಸಭಾ ಚುನಾವಣೆಗೆ ಇನ್ನು 7 ವಾರ ಕೂಡ ಉಳಿದಿಲ್ಲ:ಬಿಎಸ್ವೈ
Team Udayavani, Mar 1, 2019, 1:37 AM IST
ರಾಯಚೂರು: “ಲೋಕಸಭಾ ಚುನಾವಣೆಗೆ ಇನ್ನು 7 ವಾರ ಕೂಡ ಉಳಿದಿಲ್ಲ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ ಎಂದು ನಾನು ಈಗಾಗಲೇ ನಿರ್ಧರಿಸಿದ್ದೇನೆ. ನೀವು ಕೂಡ ಪಕ್ಷದ ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ “ಮೋದಿ ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಅವರು ಮಾತನಾಡಿದರು. “ಪ್ರಧಾನಿ ನರೇಂದ್ರ ಮೋದಿಯವರು ಕಳೆದ 5 ವರ್ಷದಿಂದ ರಜೆ ಇಲ್ಲದೆ ಶ್ರಮಿಸುತ್ತಿದ್ದಾರೆ. ನಾವು ಕನಿಷ್ಟ ಪಕ್ಷ ಚುನಾವಣಾ ವೇಳೆಯಲ್ಲಾದರೂ ಪಕ್ಷಕ್ಕಾಗಿ ಶ್ರಮಿಸಬೇಕು. ನಾನು ಈಗಾಗಲೇ 10-12 ದಿನಗಳಿಂದ ಪ್ರವಾಸ ಆರಂಭಿಸಿದ್ದೇನೆ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ. ನೀವು ಕೂಡ ಬಿಜೆಪಿ ಗೆಲುವಿಗಾಗಿ, ಪಕ್ಷ ಸಂಘಟನೆಗಾಗಿ ಮನೆ ತೊರೆಯಿರಿ’ ಎಂದರು.
ಮೋದಿಯವರ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸವಾಗಬೇಕು. ಪ್ರತಿ ಕಾರ್ಯಕರ್ತರೂ ತಮ್ಮ ಮನೆ ಮೇಲೆ ಪಕ್ಷದ ಧ್ವಜ ಹಾರಿಸಬೇಕು. ಮಾ.2ರಂದು ಒಂದು ಸಾವಿರ ಬೈಕ್ಗಳ ಮೂಲಕ ರ್ಯಾಲಿ ನಡೆಸಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇನ್ನೂ ಸ್ವಲ್ಪ ಪ್ರಯತ್ನ ಪಟ್ಟಿದ್ದರೆ ನಾವು ಅ ಧಿಕಾರದ ಚುಕ್ಕಾಣಿ ಹಿಡಿಯಬಹುದಿತ್ತು. ಸಾಕಷ್ಟು ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಸೋಲನ್ನು ಅನುಭವಿಸಿದ್ದೇವೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನುಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು