ಕೈಹಿಡಿದ ಮಾಜಿ ಶಾಸಕ ತಿಪೇಸ್ಪಾಮಿ
Team Udayavani, Mar 2, 2019, 2:51 AM IST
ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ, ತಿಪ್ಪೇಸ್ವಾಮಿ ಅವರು ಶುಕ್ರವಾರ ತಮ್ಮ ಬೆಂಬಲಿಗರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ಗೆಸೇರ್ಪಡೆಯಾದರು. ಚಿತ್ರದುರ್ಗ ಸಂಸದ ಎನ್.ಚಂದ್ರಪ್ಪ, ಮಾಜಿ ಸಚಿವ ಎಚ್.ಆಂಜನೇಯ ಪಕ್ಷಕ್ಕೆಸ್ವಾಗತಿಸಿದರು. 2018ರ ವಿಧಾನಸಭಾಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿ, ಶ್ರೀರಾಮುಲು ವಿರುದ್ಧ ಅವರು ಸೋಲು ಕಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ತಿಪ್ಪೇಸ್ವಾಮಿ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಶ್ರೀರಾಮುಲು ಆಣೆ ಮಾಡಿ ಸುಳ್ಳು ಹೇಳಿ ಸ್ಪರ್ಧೆ ಮಾಡಿದ್ದರು. ಚಿತ್ರದುರ್ಗ ಹಾಗೂ ಬಳ್ಳಾರಿಯಲ್ಲಿ ಕಾಂಗ್ರೆಸ್ಗೆ ಬರಲು ಬಿಜೆಪಿಯ ಅನೇಕ ನಾಯಕರು ಸಿದ್ದರಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಹಾಗೂ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದೇ ನಮ್ಮ ಗುರಿ ಎಂದರು.
ತಿಪ್ಪೇಸ್ವಾಮಿ ಭಾಷಣಕ್ಕೆ ತಡೆ:ಮಾಜಿ ಶಾಸಕ ತಿಪ್ಪೇಸ್ವಾಮಿಯವರು ಸಭೆಯಲ್ಲಿ ಮಾತನಾಡುತ್ತಿರುವಾಗ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು. ಈ ವೇಳೆ, ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯವಿದೆ ಎಂದು ಹೇಳಿದರು. ಅವರು ಈ ವಿಷಯ ಪ್ರಸ್ತಾಪಿಸಲು ಆರಂಭಿಸಿದ ತಕ್ಷಣ ಪಕ್ಕದಲ್ಲಿಯೇ ಕುಳಿತಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸನ್ನೆ ಮಾಡಿ,ಆ ವಿಷಯ ಮಾತನಾಡದಂತೆ ತಡೆದರು. ನಂತರ,ತಿಪ್ಪೇಸ್ವಾಮಿ ತಮ್ಮ ಮಾತು ಬದಲಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ