ನಾಳೆ ಬಿಎಸ್ವೈ ದಿಲ್ಲಿ ಭೇಟಿ
Team Udayavani, Mar 7, 2019, 1:22 AM IST
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಗೆ ತೆರಳಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತಂತೆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಸದ್ಯ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರಿದ್ದಾರೆ (ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ಅವರ ಅಕಾಲಿಕ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ತೆರವಾಗಿದೆ). ಹಾಲಿ ಬಿಜೆಪಿ ಸಂಸದರಿರುವ ಕ್ಷೇತ್ರಗಳ ಪೈಕಿ ಕೆಲ ಕ್ಷೇತ್ರಗಳಲ್ಲಿ ಬದಲಾವಣೆ ಬಗ್ಗೆ ಪಕ್ಷದ ನಾಯಕರು ಈ ಹಿಂದೆ ಸುಳಿವು ನೀಡಿದ್ದರು. ಹಾಗಾಗಿ, ಹಾಲಿ ಸಂಸದರಿರುವ ಕ್ಷೇತ್ರ ಹಾಗೂ ಬಿಜೆಪಿ ಸಂಸದರಿಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ನ ಒಮ್ಮತದ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅವರು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ. ಈಗಾಗಲೇ ವಿಭಾಗ, ಜಿಲ್ಲಾಮಟ್ಟದ ಪದಾಧಿಕಾರಿಗಳು, ಲೋಕಸಭಾ ಕ್ಷೇತ್ರವಾರು ಪ್ರಭಾರಿಗಳು ಪ್ರತ್ಯೇಕವಾಗಿ ಸಂಭಾವ್ಯ ಅಭ್ಯರ್ಥಿಗಳ ವಿವರ ಸಲ್ಲಿಸಿದ್ದಾರೆ.
ಈ ನಡುವೆ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಸಿ, ಪಕ್ಷದ ಹಾಲಿ ಸಂಸದರ ಬಗೆಗಿನ ಅಭಿಪ್ರಾಯ ಹಾಗೂ ಇತರ ಪಕ್ಷಗಳ ಸಂಸದರಿರುವ ಕ್ಷೇತ್ರದಲ್ಲಿನ ಸಮರ್ಥ ಅಭ್ಯರ್ಥಿಗಳು, ಆಕಾಂಕ್ಷಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಅದರ ಆಧಾರದ ಮೇಲೆ ಸಂಭಾವ್ಯ ಅಭ್ಯರ್ಥಿಗಳ ವಿವರದೊಂದಿಗೆ ದೆಹಲಿಗೆ ತೆರಳಿ, ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲಿದ್ದಾರೆಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ