ಇಂದಿನಿಂದ ನಾಮಪತ್ರ ಸಲ್ಲಿಕೆ: ಕಾವೇರಲಿದೆ ಚುನಾವಣಾ ಕಣ


Team Udayavani, Mar 19, 2019, 1:00 AM IST

nomination.jpg

ಮಂಗಳೂರು/ಉಡುಪಿ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಪ್ರಾರಂಭಗೊಳ್ಳಲಿದ್ದು, ಇದರೊಂದಿಗೆ ಚುನಾವಣಾ ಕಣ ಕಾವೇರಲಿದೆ. ಆದರೆ ಕರಾವಳಿಯಲ್ಲಿ ಪ್ರಮುಖ ಪಕ್ಷಗಳಾಗಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ. ಅವೆರಡರ ಅಭ್ಯರ್ಥಿಗಳ ಹೆಸರು ಪ್ರಕಟವಾಗುವುದರೊಂದಿಗೆ ಈ ಬಾರಿಯ ಲೋಕಸಭೆ ಚುನಾವಣಾ ಕಣ ರಂಗೇರಲಿದೆ.

ನಾಮಪತ್ರ ಸಲ್ಲಿಕೆಗೆ ಮಾ. 26 ಕೊನೆಯ ದಿನಾಂಕವಾಗಿದ್ದು ಮಾ. 27ರಂದು  ಪರಿಶೀಲನೆ ನಡೆಯಲಿದೆ. ಮಾ. 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ.  ಎ. 18ರಂದು ಚುನಾವಣೆ, ಮೇ 23ರಂದು ಮತಎಣಿಕೆ ನಡೆಯಲಿದೆ. 

ನೀತಿ ಸಂಹಿತೆ ಬಿಸಿ
ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದರೂ ಮಂಗಳವಾರದಿಂದ ಹೆಚ್ಚಿನ ತೀವ್ರತೆ ದೊರಕಲಿದೆ. ಸಮರ್ಪಕ ದಾಖಲೆಗಳಿಲ್ಲದೆ 50,000 ರೂ.ಗಿಂತ ಹೆಚ್ಚಿನ ನಗದು ಕೊಂಡೊಯ್ಯುವಂತಿಲ್ಲ. 10 ಲ.ರೂ.ಗಿಂತ ಹೆಚ್ಚಿನ ಮೊತ್ತ ಸಾಗಿಸಿದರೆ ಅದನ್ನು ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಜಾತ್ರೆ, ಯಕ್ಷಗಾನಕ್ಕೂ ನಿಯಮದ ಬಿಸಿ
ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಬೇಕು. ಧ್ವನಿವರ್ಧಕದ ಅನುಮತಿ
ಯನ್ನು ಪೊಲೀಸ್‌ ಇಲಾಖೆಯಿಂದ ಪಡೆಯಬೇಕು. ಧ್ವನಿವರ್ಧಕವನ್ನು ಬೆಳಗ್ಗೆ 6ರಿಂದ ರಾತ್ರಿ 10ರ ವರೆಗೆ ಮಾತ್ರ ಉಪಯೋಗಿಸಲು ಅವಕಾಶವಿದೆ. ಇದು ಯಕ್ಷಗಾನಕ್ಕೂ ಅನ್ವಯವಾಗುತ್ತದೆ. ಜಾತ್ರೆಗೆ ಚುನಾವಣಾಧಿಕಾರಿಗಳ ಅನುಮತಿ ಅಗತ್ಯವಾಗಿದೆ.

ಮಂಗಳೂರಿಗೆ ಸಿಎಪಿಎಫ್‌ ಪಡೆ
ಚುನಾವಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸ್‌ ಕಮಿಷನರೆಟ್‌ಗೆ ಕೇಂದ್ರೀಯ
ಸಶಸ್ತ್ರ ಪೊಲೀಸ್‌ ಪಡೆಯ (ಸಿಎಪಿಎಫ್‌) 91 ಮಂದಿ ಮಹಿಳಾ ಜವಾನರು ಆಗಮಿಸಿದ್ದು, ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಮಹಿಳಾ ಜವಾನರು ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ವಿವಿಧ ಭಾಗಗಳಲ್ಲಿ ಪಥಸಂಚಲನ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆ ಮಾ. 19ರಂದು ಆರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾನರು ಮತ್ತು ಪೊಲೀಸರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಐದು ಮಂದಿಗೆ ಮಾತ್ರ ಅವಕಾಶ
ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಅಥವಾ ಸೂಚಕರು ಸೇರಿ ಒಟ್ಟು ಐವರು  ಉಪಸ್ಥಿತರಿರಬಹುದು. ಮಾಧ್ಯಮ ಪ್ರತಿನಿಧಿಗಳಿಗಳಿಗೆ ನಾಮಪತ್ರ ಸಲ್ಲಿಕೆಯ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಜಿಲ್ಲಾ ಚುನಾವಣಾ ಶಾಖೆಯಿಂದಲೇ ಒದಗಿಸಿಕೊಡಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.