ದ.ಕ. ಕ್ಷೇತ್ರಕ್ಕಿದು ಮೂರನೇ ಚುನಾವಣೆ!


Team Udayavani, Mar 20, 2019, 1:00 AM IST

dhakshinakannada.jpg

ಮಂಗಳೂರು: ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆಯ ಬಳಿಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಇದೀಗ 3ನೇ ಚುನಾವಣೆ ಎದುರಿಸುತ್ತಿದೆ. ಒಟ್ಟಾರೆಯಾಗಿ ಮಂಗಳೂರು ಪ್ರದೇಶಕ್ಕೆ ಇದು 17ನೇ ಮಹಾಚುನಾವಣೆಯಾಗಿದೆ.
1951ರಲ್ಲಿ ಲೋಕಸಭೆಗೆ ಪ್ರಥಮ ಚುನಾವಣೆ ನಡೆದಿದ್ದು ಇದರ ಮತ ಎಣಿಕೆ 1952ರಲ್ಲಿ ನಡೆದಿತ್ತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಇನ್ನೊಂದು ವಿಶೇಷ ಎಂದರೆ ಇತರ ಜಿಲ್ಲೆಗಳ ಪ್ರದೇಶಗಳನ್ನು ಒಳಗೊಳ್ಳದೆ ಇಡೀ ಜಿಲ್ಲೆ 
ಒಂದು ಲೋಕಸಭೆ ಕ್ಷೇತ್ರವಾಗಿರುವುದು. ಇದು ಕ್ಷೇತ್ರದಲ್ಲಿ ಚುನಾವಣ ಪ್ರಕ್ರಿಯೆಗಳಿಗೂ ಅನುಕೂಲವಾಗಿದೆ.

1951ರಲ್ಲಿ ಈಗಿನ ದಕ್ಷಿಣ ಕನ್ನಡ ಜಿಲ್ಲೆಯ ಬಹುಭಾಗ ಸೇರಿ ಮಂಗಳೂರು ಪ್ರದೇಶ ಮದ್ರಾಸ್‌ ಪ್ರಾಂತ್ರÂದಲ್ಲಿ ಸೇರ್ಪಡೆಯಾಗಿ ಸೌತ್‌ ಕೆನರಾ ಲೋಕಸಭಾ ಕ್ಷೇತ್ರವಾಗಿತ್ತು. ಭಾಷವಾರು ಪ್ರಾಂತ್ಯ ರಚನೆಯ ಬಳಿಕ 1957ರಲ್ಲಿ ಕೊಡಗು ಜಿಲ್ಲೆ ಒಳಗೊಂಡು ಮಂಗಳೂರು ಲೋಕಸಭಾ ಕ್ಷೇತ್ರ ರಚನೆಯಾಯಿತು. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೇರಿದಂತೆ ಕೆಲವು ಪ್ರದೇಶಗಳು ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನ ಕೆಲವು ಭಾಗಗಳು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸೇರ್ಪಡೆಯಾಗಿದ್ದು ಆಗ ಇಡೀ ಜಿಲ್ಲೆಯನ್ನು ಪರಿಗಣಿಸಿದರೆ ಮೂರು ಸಂಸದರು ಇದ್ದರು. 2009ರ ವರೆಗೆ ಮಂಗಳೂರು ಲೋಕಸಭಾ ಕ್ಷೇತ್ರ ಹೆಸರಿನಲ್ಲಿ ಮುಂದುವರಿಯಿತು. 

2009ರಲ್ಲಿ ಕ್ಷೇತ್ರ ಪುನರ್‌ವಿಂಗಡನೆ ವೇಳೆ ಕೊಡಗು ಜಿಲ್ಲೆಯನ್ನು ಬಿಟ್ಟು ಇಡೀ ದಕ್ಷಿಣ ಕನ್ನಡ ಜಿಲ್ಲೆ ಒಳಗೊಂಡು ಮಂಗಳೂರು ಬದಲಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವಾಗಿ ರೂಪುಗೊಂಡಿತು.

ಸೌತ್‌ ಕೆನರಾದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದವರೆಗೆ ನಡೆದ 16 ಲೋಕಸಭಾ ಚುನಾವಣೆಗಳಲ್ಲಿ 9 ಬಾರಿ ಕಾಂಗ್ರೆಸ್‌ ಹಾಗೂ 7 ಬಾರಿ ಬಿಜೆಪಿ ಜಯಗಳಿಸಿದೆ. 1951ರಿಂದ 1989ರ ವರೆಗೆ ನಿರಂತರವಾಗಿ ಕಾಂಗ್ರೆಸ್‌ ಹಾಗೂ 1991ರಿಂದ 2014ರ ವರೆಗೆ ನಿರಂತರವಾಗಿ ಬಿಜೆಪಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದೆ.

ಕ್ಷೇತ್ರ ಮಹಾತೆ¾
ಈ ಲೋಕ ಸಭಾ ಕ್ಷೇತ್ರ ದಿಂದ ಸ್ಪರ್ಧಿಸಿದ ಅಭ್ಯರ್ಥಿಗಳ ಪೈಕಿ ಡಾ| ವೀರಪ್ಪ ಮೊಲಿ ಹಾಗೂ ಡಿ.ವಿ. ಸದಾನಂದ ಗೌಡ ಅವರು ಕರ್ನಾಟಕದ ಮುಖ್ಯಮಂತ್ರಿ ಪದವಿಗೇರಿದವರು. ಡಾ| ಎಂ. ವೀರಪ್ಪ ಮೊಲಿ ಮಾಜಿ ಮುಖ್ಯಮಂತ್ರಿಯಾಗಿ ಕ್ಷೇತ್ರದಿಂದ ಸ್ಪರ್ಧಿಸಿದ್ದರೆ ಡಿ.ವಿ. ಸದಾನಂದ ಗೌಡ  ಸಂಸತ್ಸದಸ್ಯನಾದ ಬಳಿಕ ಮುಖ್ಯಮಂತ್ರಿಯಾಗಿದ್ದರು. ಜನಾರ್ದನ ಪೂಜಾರಿ ಹಾಗೂ ಬಿ. ಧನಂಜಯ ಕುಮಾರ್‌ ಕೇಂದ್ರ ಸಚಿವರಾಗಿದ್ದರು.

ಪೂಜಾರಿ ಸ್ಪರ್ಧಾ ದಾಖಲೆ
ಸೌತ್‌ಕೆನರಾದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದವರೆಗೆ ನಡೆದಿರುವ ಒಟ್ಟು 16 ಚುನಾವಣೆಗಳಲ್ಲಿ ಗರಿಷ್ಠ ಸ್ಪರ್ಧೆಯ ದಾಖಲೆಯನ್ನು ಬಿ. ಜನಾರ್ದನ ಪೂಜಾರಿ ಅವರು ಹೊಂದಿದ್ದಾರೆ. ಪೂಜಾರಿಯವರು ಒಟ್ಟು 9 ಬಾರಿ ಸ್ಪರ್ಧಿಸಿದ್ದು 4 ಬಾರಿ ಜಯಗಳಿಸಿದ್ದಾರೆ. ಧನಂಜಯ ಕುಮಾರ್‌ ಅವರು 5 ಬಾರಿ ಸ್ಪರ್ಧಿಸಿ 4 ಬಾರಿ ವಿಜಯಿಯಾಗಿದ್ದಾರೆ. ಡಾ| ಎಂ. ವೀರಪ್ಪ ಮೊಲಿ ಎರಡು ಬಾರಿ ಸ್ಪರ್ಧಿಸಿದ್ದಾರೆ. ನಳಿನ್‌ ಕುಮಾರ್‌ ಕಟೀಲು ಎರಡು ಬಾರಿ ಸ್ಪರ್ಧಿಸಿ ಸತತ ಜಯ ಗಳಿಸಿದ್ದಾರೆ.

ಕ್ಷೇತ್ರವನ್ನು ಪ್ರತಿನಿಧಿಸಿದವರು
1951ರಲ್ಲಿ ನಡೆದ ಪ್ರಥಮ ಲೋಕಸಭಾ ಚುನಾವಣೆಯಲ್ಲಿ ಸೌತ್‌ ಕೆನರಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಬೆನಗಲ್‌ ಶಿವರಾವ್‌ (ಕಾಂಗ್ರೆಸ್‌) ಅವರು ಸಂಸತ್ಸದಸ್ಯನಾಗಿ ಆಯ್ಕೆಯಾಗಿದ್ದರು. ಮಂಗಳೂರು ಕ್ಷೇತ್ರದಿಂದ 1957ರಲ್ಲಿ ಕೆ.ಆರ್‌. ಆಚಾರ್‌ (ಕಾಂಗ್ರೆಸ್‌), 1962 ಎ. ಶಂಕರ್‌ ಆಳ್ವ (ಕಾಂಗ್ರೆಸ್‌), 1967 ಸಿ.ಎಂ. ಪೂಣಚ್ಚ (ಕಾಂಗ್ರೆಸ್‌), 1971 ಕೆ.ಕೆ. ಶೆಟ್ಟಿ (ಕಾಂಗ್ರೆಸ್‌), 1977 ಬಿ. ಜನಾರ್ದನ ಪೂಜಾರಿ (ಕಾಂಗ್ರೆಸ್‌), 1980 ಬಿ.ಜನಾರ್ದನ ಪೂಜಾರಿ (ಕಾಂಗ್ರೆಸ್‌) , 1984 ಬಿ. ಜನಾರ್ದನ ಪೂಜಾರಿ(ಕಾಂಗ್ರೆಸ್‌), 1989 ಬಿ. ಜನಾರ್ದನ ಪೂಜಾರಿ (ಕಾಂಗ್ರೆಸ್‌), 1991 ಬಿ.ಧನಂಜಯ ಕುಮಾರ್‌ (ಬಿಜೆಪಿ), 1996 ಬಿ. ಧನಂಜಯ ಕುಮಾರ್‌ (ಬಿಜೆಪಿ), 1998 ಬಿ. ಧನಂಜಯ ಕುಮಾರ್‌, (ಬಿಜೆಪಿ), 2004 ಡಿ.ವಿ. ಸದಾನಂದ ಗೌಡ (ಬಿಜೆಪಿ)  ಆಯ್ಕೆಯಾಗಿದ್ದರು. 2009ರಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವಾಗಿ ಪುನರ್‌ವಿಂಗಡನೆಯಾದ ಬಳಿಕ 2009 ಹಾಗೂ 2014ರಲ್ಲಿ ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಅವರು ಈ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸಿಕೊಂಡು ಬರುತ್ತಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.