ಮೋದಿ,ರಾಹುಲ್ ಕ್ಷೇತ್ರಗಳಿಗಿಂತಲೂ ಮಂಡ್ಯ ಹೆಚ್ಚು ಸುದ್ದಿಯಾಗಿದೆ:ಸಿಎಂ
Team Udayavani, Mar 20, 2019, 2:36 PM IST
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸುತ್ತಿರುವ ಕ್ಷೇತ್ರಗಳಿಂದಲೂ ಹೆಚ್ಚು ಪ್ರಧಾನ್ಯತೆ ಪಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿತ ಅವರು, ನಾವು ಮಂಡ್ಯದಲ್ಲಿ ಯಾರ ಬಗ್ಗೆಯೂ ಹೆದರುವುದಿಲ್ಲ. ನನಗೆ ನಮ್ಮ ಕಾರ್ಯಕರ್ತರು, ನಮ್ಮ ಜನರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಅವರೇ ನನ್ನ ಮಗನನ್ನು ಗೆಲ್ಲಿಸುತ್ತಾರೆ ಎಂದರು.
ನಾನು ನಾಯಕರಿಗೆ ಯಾರ ಬಗ್ಗೆಯೂ ಲಘುವಾಗಿ ಮಾತನಾಡದಂತೆ ಸೂಚಿಸಿದ್ದೇನೆ ಎಂದರು.
ಇದೇ ವೇಳೆ ನಾನು ಯಾರ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ . ನಟರಾದರೇನು ಎಂದು ಪರೋಕ್ಷವಾಗಿ ದರ್ಶನ್ ಮತ್ತು ಯಶ್ ಅವರಿಗೆ ಟಾಂಗ್ ನೀಡಿದರು.
ನಾಳೆ ನಿಖಿಲ್ ಜೆಡಿಎಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದು, ಮಾರ್ಚ್ 25 ರಂದು ಜನರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ