ಕಾಂಗ್ರೆಸ್‌ ಶಾಸಕ; ಸಂಸತ್ತಿಗೆ ಬಿಜೆಪಿಗೇ ಲೀಡ್‌!


Team Udayavani, Mar 21, 2019, 1:00 AM IST

parliment.jpg

ಬಂಟ್ವಾಳ: ಬಂಟ್ವಾಳದಲ್ಲೂ ನಿಧಾನಗತಿಯಲ್ಲಿ ಚುನಾವಣೆಯ ಬಿಸಿ ಏರುತ್ತಿದೆ. ಬಂಟ್ವಾಳದಲ್ಲಿ ವಿಶೇಷವೆಂದರೆ ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾಗಲೂ ಎಂಪಿ ಚುನಾವಣೆಯಲ್ಲಿ ಬಿಜೆಪಿಯೇ ಲೀಡ್‌ ಪಡೆದುಕೊಂಡಿದೆ.

2009 ಹಾಗೂ 2014ರ ಎರಡೂ ಲೋಕ ಸಭಾ ಚುನಾವಣೆಗಳಲ್ಲೂ ಬಂಟ್ವಾಳದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾಗಲೂ ಈ ಕ್ಷೇತ್ರದಲ್ಲಿ ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಅವರು ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಎದುರು ಮುನ್ನಡೆ ಸಾಧಿಸಿದ್ದರು. 2004ರ ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತಾದರೂ ಆಗ ಶಾಸಕರಾಗಿ ಬಿಜೆಪಿಯ ಬಿ. ನಾಗರಾಜ ಶೆಟ್ಟಿ ಗೆದ್ದಿದ್ದರು. 

ಬಂಟ್ವಾಳ ಕ್ಷೇತ್ರದಲ್ಲೆಷ್ಟು ಲೀಡ್‌?
2008 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಮಾನಾಥ ರೈ (61,560 ಮತಗಳು) ಅವರು ಬಿಜೆಪಿಯ ಬಿ. ನಾಗರಾಜ ಶೆಟ್ಟಿ (60,309 ಮತಗಳು) ವಿರುದ್ಧ 1,251 ಮತಗಳಿಂದ ಗೆದ್ದಿದ್ದರು. ಆದರೆ 2009ರ ಲೋಕಸಭಾ ಚುನಾವಣೆಯಲ್ಲಿ ನಳಿನ್‌ಕುಮಾರ್‌ ಕಟೀಲು ಪ್ರಥಮ ಬಾರಿಗೆ ಚುನಾವಣೆಗೆ ನಿಂತಾಗ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯು (69,560 ಮತಗಳು), ಕಾಂಗ್ರೆಸ್‌ (62,513) ವಿರುದ್ಧ 6,851 ಮತಗಳಿಂದ ಮುನ್ನಡೆ ಸಾಧಿಸಿತ್ತು.

2013ರ ಎಂಎಲ್‌ಎ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಮಾನಾಥ ರೈ (81,665 ಮತಗಳು) ಅವರು ಬಿಜೆಪಿಯ ರಾಜೇಶ್‌ ನಾೖಕ್‌(63,815 ಮತಗಳು) ಅವರ ವಿರುದ್ಧ 17,850 ಮತಗಳಿಂದ ಗೆದ್ದಿದ್ದರು. ಆದರೆ 2014ರ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯು(83,327 ಮತಗಳು) ಕಾಂಗ್ರೆಸ್‌(69,000) ವಿರುದ್ಧ 14,327 ಮತಗಳಿಂದ ಮುನ್ನಡೆ ಸಾಧಿಸಿತ್ತು.

ಆದರೆ 2018ರಲ್ಲಿ ನಡೆದ ಎಂಎಲ್‌ಎ ಚುನಾವಣೆಯ ಬಿಜೆಪಿ ರಾಜೇಶ್‌ ನಾೖಕ್‌ ಉಳಿಪ್ಪಾಡಿ (97,802 ಮತಗಳು) ಅವರು ಕಾಂಗ್ರೆಸ್‌ನ ರಮಾನಾಥ ರೈ (81,831) ಅವರ ವಿರುದ್ಧ 15,971 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿಯು ಹೆಚ್ಚಿನ ವಿಶ್ವಾಸ ದಲ್ಲಿದ್ದರೂ, ಬಂಟ್ವಾಳದಲ್ಲಿ ತಮ್ಮ ಅಧಿಪತ್ಯವನ್ನು ಮರು ಸಾಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ಶತ ಪ್ರಯತ್ನ ನಡೆಸಲಿದ್ದಾರೆ.

ಬಂಟ್ವಾಳ ಕ್ಷೇತ್ರದಲ್ಲಿ ಶಾಂತ ರೀತಿಯ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಆಯೋಗವು ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದು, ದ.ಕ.ಜಿ.ಪಂ.ನ ಉಪಕಾರ್ಯದರ್ಶಿ ಮಹೇಶ್‌ ಅವರು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಜತೆಗೆ ತಹಶೀಲ್ದಾರ್‌ ಸಣ್ಣರಂಗಯ್ಯ ಅವರು ಸೇರಿದಂತೆ ಸರಕಾರಿ ಸಿಬಂದಿ ವಿವಿಧ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಮೋದಿ ಕುರಿತು ಮಾತು
ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯ ಕರ್ತರು ಅಭ್ಯರ್ಥಿಯ ಕುರಿತು ಹೆಚ್ಚು ಮಾತನಾಡುತ್ತಿಲ್ಲ. ಬದಲಾಗಿ ಯಾರೇ ಅಭ್ಯರ್ಥಿ ಯಾದರೂ ಮೋದಿಗಾಗಿ ನಾವು ಎಂಬ ರೀತಿಯಲ್ಲಿ ಮಾತನಾಡು ತ್ತಿ¨ªಾರೆ. ಕೆಲವೊಂದೆಡೆ ಹಾಲಿ ಸಂಸದರ ಕುರಿತು ಅಸಮಾಧಾನದ ಮಾತುಗಳು ಕೇಳಿ ಬರುತ್ತಿದೆ. ಹಾಗೆಂದು ನಾವು ಮೋದಿಗಾಗಿ ಯಾರೇ ಅಭ್ಯರ್ಥಿಯಾ ದರೂ ಚಿಂತೆಯಿಲ್ಲ ಎನ್ನುತ್ತಿ¨ªಾರೆ. 

ಕಾಂಗ್ರೆಸ್‌ನಲ್ಲಿ ಉತ್ಸಾಹ
ದ.ಕ. ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಈ ಬಾರಿ ಮಾಜಿ ಸಚಿವ ಬಿ. ರಮಾನಾಥ ರೈ ಆಯ್ಕೆ ಯಾಗುತ್ತಾರೆ ಎಂಬ ಮಾತು ಹಲವು ಸಮಯಗಳಿಂದ ಕೇಳಿ ಬರುತ್ತಿತ್ತು. ಬಂಟ್ವಾಳದಲ್ಲಿ 6 ಬಾರಿ ಗೆದ್ದು ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿರುವ ರೈ ಅವರು ಅಭ್ಯರ್ಥಿಯಾದರೆ ಹೆಚ್ಚಿನ ಮತ ಪಡೆಯುತ್ತಾರೆ. ಜತೆಗೆ ಬಿಜೆಪಿಯಲ್ಲಿ ಸಂಸದರ ಕುರಿತು ಭಿನ್ನಾಭಿ ಪ್ರಾಯಗಳಿರುವುದರಿಂದ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಬಂಟ್ವಾಳದ ಕಾಂಗ್ರೆಸ್‌ ಕಾರ್ಯಕರ್ತರು ಅಭಿಪ್ರಾಯ ಪಡುತ್ತಿದ್ದರು. ಹೀಗಾಗಿ ರೈ ಅವರ ಅಭ್ಯರ್ಥಿಯಾಗುತ್ತಾರೆ ಎಂಬ ಮಾತು ಬಂಟ್ವಾಳ ಕಾಂಗ್ರೆಸ್‌ನಲ್ಲಿ ಉತ್ಸಾಹ ಹೆಚ್ಚಿಸುವಂತೆ ಮಾಡಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.