ರೇಡಿಯೋದಲ್ಲಿ  ಮಾರ್ದನಿಸಲಿದೆ ಮತದಾನ ಸಂದೇಶ


Team Udayavani, Mar 22, 2019, 1:00 AM IST

radio.jpg

ಉಡುಪಿ: ರೇಡಿಯೋ ಈಗಲೂ ಗ್ರಾಮೀಣ ಪ್ರದೇಶದಲ್ಲಿ ಅತೀ ಹೆಚ್ಚು ಕೇಳುಗರನ್ನು ಹೊಂದಿದೆ. ಮೊಬೈಲ್‌ ನೆಟ್‌ವರ್ಕ್‌ ಮತ್ತು ಕೇಬಲ್‌ ವಾಹಿನಿಗಳು ತಲುಪದ ಹಾಗೂ ರಸ್ತೆ ಸಂಪರ್ಕ ಇಲ್ಲದ ಕಾಡು-ಗುಡ್ಡಗಾಡು ಪ್ರದೇಶಗಳಲ್ಲಿ ಈಗಲೂ ರೇಡಿಯೋವೇ ಪ್ರಮುಖ ಸಂವಹನ ಸಾಧನ. ರೇಡಿಯೋ ಕೇಳುಗರಲ್ಲಿ ಮತದಾನ ಜಾಗೃತಿ ಮೂಡಿಸಲು ಉಡುಪಿ ಜಿಲ್ಲಾ ಸ್ವೀಪ್‌ ಸಮಿತಿಯು ನಾಲ್ಕು ವಿನೂತನ ರೀತಿಯ ಜಿಂಗಲ್‌ಗ‌ಳನ್ನು ಸಿದ್ಧಪಡಿಸಿದೆ.
ಮೊದಲ ಜಿಂಗಲ್‌ ತುಳು ಭಾಷೆಯಲ್ಲಿರು ವಂಥದ್ದು, ಯುವ ಜನರನ್ನು ಮುಟ್ಟುವುದು ಇದರ ಉದ್ದೇಶ. ಚುನಾವಣೆಯ ದಿನ ರಜೆ ಇದ್ದು, ಅಂದು ಪ್ರವಾಸ ಹೋಗಬೇಡಿ, ಮತದಾನ ಮಾಡಿ ಎಂಬ ಮತದಾನ ಜಾಗೃತಿಯ ಸಂದೇಶ ನೀಡಲಾಗಿದೆ. 

ಎರಡನೇ ಜಿಂಗಲ್‌ನಲ್ಲಿ ಕುಂದಾಪ್ರ ಕನ್ನಡ ಬಳಕೆಯಾಗಿದೆ. ಯುವ ಮತದಾರರೊಬ್ಬರು ತಾನು ಪ್ರಥಮ ಬಾರಿ ಮತದಾನ ಮಾಡುವುದರ ಜತೆಗೆ ಮತ ಚಲಾಯಿಸಲು ಉತ್ಸುಕತೆ ತೋರದ ಕನಿಷ್ಠ ಇಬ್ಬರನ್ನಾದರೂ ಮತದಾನಕ್ಕೆ ಕರೆದೊಯ್ದು ಸಂದರ್ಭವನ್ನು ಸ್ಮರಣೀಯವನ್ನಾಗಿ ಮಾಡಿಕೊಳ್ಳುತ್ತೇನೆ ಎನ್ನುವ ಎಂಬ ಸಂದೇಶ ಇದೆ. 3ನೆಯದು ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಪ್ರತಿಯೊಬ್ಬರೂ ಮತದಾನ ಮಾಡಿ ಎಂಬ ಸಂದೇಶ ಹೊಂದಿರುವ ಜಿಂಗಲ್‌. ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನೀಡಿರುವ ಮತದಾನ ಕುರಿತ ಸಂದೇಶ 4ನೇ ಜಿಂಗಲ್‌ನಲ್ಲಿದೆ.

ಎಲ್ಲ ಜಿಂಗಲ್‌ಗ‌ಳಲ್ಲಿ ಎ. 18ರಂದು ಉಡುಪಿ, ಕುಂದಾಪುರ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಎ. 23ರಂದು ಬೈಂದೂರು ಕ್ಷೇತ್ರದಲ್ಲಿ ನಡೆಯುವ ಮತದಾನದಲ್ಲಿ ತಪ್ಪದೆ ಭಾಗವಹಿಸಿ ಎಂಬ ಸಂದೇಶ ಇದೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ 2 ಹಂತದಲ್ಲಿ ನಡೆಯುವ ಚುನಾವಣೆಯಲ್ಲಿ ಎಲ್ಲ ಮತದಾರನ್ನೂ ತಲುಪಲು ಸ್ವೀಪ್‌ ಸಮಿತಿ ತಯಾರಿ ನಡೆಸಿದೆ.

ಸಾಮಾಜಿಕ ಜಾಲ ತಾಣದಲ್ಲಿ ಈ ಜಿಂಗಲ್‌ಗ‌ಳು ಈಗಾಗಲೇ ಹರಿದಾಡುತ್ತಿದ್ದು, ಆಕಾಶವಾಣಿಯಲ್ಲಿ ಪ್ರತಿದಿನ ನಿಗದಿತ ಸಮಯದಲ್ಲಿ ಕೇಳುಗರನ್ನು ತಲುಪಲಿದೆ. 

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಮತ್ತು ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ಅವರ ನಿರ್ದೇಶನದಂತೆ ಆಕಾಶವಾಣಿ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮಗಳಾದ ವಾಟ್ಸ್‌ಆ್ಯಪ್‌, ಯೂ ಟ್ಯೂಬ್‌, ಫೇಸ್‌ ಬುಕ್‌, ಟ್ವಿಟರ್‌ಗಳಲ್ಲಿಯೂ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಸ್ವೀಪ್‌ ಸಮಿತಿಯ ಕಾರ್ಯಕ್ರಮಗಳ ಮೇಲ್ವಿಚಾರಣೆ ನಡೆಸುತ್ತಿರುವ ಜಿ.ಪಂ. ಸಹಾಯಕ ನಿರ್ದೇಶಕ ಜೇಮ್ಸ್‌ ಡಿಸಿಲ್ವಾ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.