ಮಂಡ್ಯ : ಜೈಲಿನಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆ
Team Udayavani, Jul 21, 2017, 3:20 PM IST
ಮಂಡ್ಯ: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.
ಸರಗಳ್ಳತನ ಪ್ರಕರಣದಲ್ಲಿ 3 ತಿಂಗಳ ಹಿಂದೆ ಜೈಲು ಸೇರಿದ್ದ ರಾಘವೇಂದ್ರ (33) ಎಂಬ ಕೈದಿ ಹೊದಿಯಲು ಕೊಟ್ಟ ಬಟ್ಟೆಯನ್ನುನೇಣು ಕುಣಿಕೆಯನ್ನಾಗಿಸಿ ಕಿಟಕಿಗೆ ಬಿಗಿದು ಸಾವಿಗೆ ಶರಣಾಗಿದ್ದಾನೆ.
ರಾಘವೇಂದ್ರನನ್ನು ಮನೆಯವರು ಬಹಿಷ್ಕರಿಸಿದ್ದು, ಜಾಮೀನು ನೀಡಲಾಗಲಿ,ಜೈಲಿನಲ್ಲಿ ನೋಡಲೂ ಬಂದಿರಲಿಲ್ಲ. ಇದರಿಂದಾಗಿ ಖನ್ನನಾಗಿ ಸಾವಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.
ಮಂಡ್ಯ ಎಸ್ಪಿ ರಾಧಿಕಾ ಅವರು ಜೈಲಿಗೆ ಆಗಮಿಸಿ ಪರಿಶೀಲನೆ ನಡೆಸಿ ವಿವರಣೆ ಕೇಳಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ