ಕೆರೆಯ ಮಧ್ಯೆ ಗಣಪತಿ ಪ್ರತಿಷ್ಠಾಪನೆ
Team Udayavani, Sep 3, 2017, 4:09 PM IST
ಭಾರತೀನಗರ: ಹೋಬಳಿಯ ಹಾಗಲಹಳ್ಳಿಯಲ್ಲಿ ಕೆರೆಯ ಮಧ್ಯೆ ವಿಶಿಷ್ಟ ರೀತಿಯಲ್ಲಿ ಗಣಪತಿಯನ್ನು
ಗ್ರಾಮಸ್ಥರು ಪ್ರತಿಷ್ಠಾಪನೆ ಮಾಡಿದ್ದಾರೆ. ಸಾರ್ವಜನಿಕರ ಸ್ಥಳದಲ್ಲಿ ಗಣೇಶ ಮೂರ್ತಿಯನ್ನು
ಪ್ರತಿಷ್ಠಾಪಿಸುವುದು ಸಹಜ. ಈ ಗ್ರಾಮದಲ್ಲಿ ಕೆರೆ ಮಧ್ಯೆ ಪ್ರತಿಷ್ಠಾಪಿಸಿರುವುದು ವಿಶೇಷವಾಗಿದೆ. ಮರದ ಪೋಲುಗಳ ಸಹಾಯದಿಂದ ಚಪ್ಪರ ನಿರ್ಮಿಸಿ ಗಣೇಶನನ್ನು ಪ್ರತಿಷ್ಠಾಪಿಸಿದ್ದಾರೆ. ಗ್ರಾಮಸ್ಥರು ಗಣೇಶನ ಬಳಿಗೆ ಹೋಗಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುವುದರ ಜೊತೆಗೆ ವಿದ್ಯುತ್ ದೀಪಾಂಲಕಾರವನ್ನೂ ಮಾಡಲಾಗಿದೆ. ರಾತ್ರಿ ವೇಳೆ ಈ ಸ್ಥಳ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಗ್ರಾಮದಲ್ಲಿ ಕೆರೆ ಬತ್ತಿ ಹೋಗಿದ್ದ ಹಿನ್ನೆಲೆಯಲ್ಲಿ ಕೆರೆಗೆ ನೀರು ತುಂಬಿ ಅಂತರ್ಜಲ ವೃದ್ಧಿಯಾಗಲೆಂಬ ದೃಷ್ಟಿಯಿಂದ ಕೆರೆಯ ಮಧ್ಯೆದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ದಿನನಿತ್ಯ
ಪೂಜೆ ಸಲ್ಲಿಸುತ್ತಿದ್ದಾರೆ. ಗ್ರಾಮದ ರೈತರಿಗೆ ಬಂದಿರುವ ಕಷ್ಟ-ಕಾರ್ಪಣ್ಯಗಳು ದೂರವಾಗಲಿ. ವಿಶ್ವೇಶ್ವರಯ್ಯ ನಾಲೆಯ ಕೊನೆ ಭಾಗದಲ್ಲಿರುವ ಗ್ರಾಮದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹರಿದು ಬೆಳೆ ಬೆಳೆಯಲು ಪೂರಕ ಮಳೆ ಸುರಿಯಲಿ ಎಂದು ಗ್ರಾಮಸ್ಥರು ಗಣೇಶನಲ್ಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರಸ್ತುತ ದಿನದಲ್ಲಿ ಮುಚ್ಚುತ್ತಿರುವ ಕೆರೆಗಳನ್ನು ಉಳಿಸಬೇಕೆಂಬ ಸಂದೇಶವನ್ನೂ ಗಣೇಶನ ಮೂಲಕ ಸಾರಲು ಕೆರೆಯ ನಡುವೆ ಗಣೇಶನನ್ನು ಪ್ರತಿಷ್ಠಾಪಿಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್