ಗ್ರಾಮೀಣ ಶಿಕ್ಷಣಕ್ಕೆ ಮಂಡ್ಯ ರಾಜಕಾರಣಿಗಳ ಕೊಡುಗೆ ಅಪಾರ
Team Udayavani, Sep 3, 2017, 4:40 PM IST
ಮಂಡ್ಯ: ಬಹುಸಂಖ್ಯಾತ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಮಂಡ್ಯದ ರಾಜಕೀಯ ದಿಗ್ಗಜರ ಕೊಡುಗೆ ಅಪಾರ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ತಿಳಿಸಿದರು.
ನಗರದ ರೈತ ಸಭಾಂಗಣದಲ್ಲಿ ಜನದನಿ ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ್ದ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಮತ್ತು ಶಾರದಮ್ಮ ಕೆಂಪಮ್ಮ ವಿದ್ಯಾರ್ಥಿ ಪುರಸ್ಕಾರ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಕೆ.ವಿ.ಶಂಕರೇಗೌಡ, ಎಚ್.ಹೊನ್ನಯ್ಯ, ಎಚ್.ಕೆ.ವೀರಣ್ಣಗೌಡ, ಎಸ್.ಸಿ.ಮಲ್ಲಯ್ಯ ಸೇರಿದಂತೆ ಹಲವು ಮಹನೀಯರು ಶಿಕ್ಷಣಕ್ಕೆ ಒತ್ತು ನೀಡಿದ್ದರ ಜೊತೆಗೆ ಹಲವು ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಹೋರಾಟದ ಫಲವಾಗಿ ಇಂದು ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ಅನುಕೂಲಗಳು ಲಭ್ಯವಾಗುತ್ತಿವೆ.ಇರ್ವಿನ್ ನಾಲಾ ಚಳವಳಿಯಿಂದಾಗಿ ನೀರಾವರಿ ಯೋಜನೆಗೆ
ಒತ್ತು ನೀಡಿದಂತಾಯಿತು. ಇದರಿಂದಾಗಿ ರೈತರ ಬದುಕು ಹಸನಾಯಿತು ಎಂದು ತಿಳಿಸಿದರು.
ರೈತರ ವ್ಯವಸಾಯೋತ್ಪನ್ನ ಸಹಕಾರ ಸಂಘ, ಮೈಷುಗರ್ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಬೆಳವಣಿಗೆಯಲ್ಲಿ ಎಚ್.ಹೊನ್ನಯ್ಯ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ವೇಳೆ ಕೆ.ವಿ.ಶಂಕರಗೌಡರೂ ಅವರೊಂದಿಗಿದ್ದರು ಎಂದು ತಿಳಿಸಿದರು. ಸ್ವಾರ್ಥರಹಿತ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ. ಈ ನಿಟ್ಟಿನಲ್ಲಿ ಇಂದು ಪ್ರಶಸ್ತಿ ಪಡೆಯುತ್ತಿರುವ ಜನವಾದಿ ಮಹಿಳಾ ಸಂಘಟನೆಯ ದೇವಿ ಹಾಗೂ ಪ್ರೇರಣಾ ಸಂಸ್ಥೆಯ ರವಿಕುಮಾರ್ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಜನದನಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಸಮಾಜಮುಖೀ ಕಾರ್ಯಗಳನ್ನು ನಡೆಸಲಾಗುತ್ತಿದೆ. ಪ್ರತಿ ವರ್ಷ ಸಾಧಕರನ್ನು ಗುರುತಿಸಿ ನಗದು ಸೇರಿದಂತೆ ಪ್ರಶಸ್ತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದನ್ನು ಶ್ಲಾಸಿದರು.
ಪ್ರಶಸ್ತಿ ಪುರಸ್ಕೃತರು:ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ದೇವಿ, ಪ್ರೇರಣಾ ವಿಶೇಷ ಚೇತನರ ಟ್ರಸ್ಟ್ ನ ರವಿಕುಮಾರ್ಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಾದ ವಿ.ಕೆ.ಶ್ರೀಕಲಾ, ಬಿ.ಪಿ.ಮದನ್, ಸಿ.ಎಸ್. ಭುವನೇಶ್, ಬಿ.ಎಸ್.ಕವನ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಜನದನಿ ಸಾಂಸ್ಕೃತಿಕ ಟ್ರಸ್ಟ್ ಸಂಸ್ಥಾಪಕ ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷ ಕೆ.ಜಯರಾಮು, ಕಾರ್ಯದರ್ಶಿ ಎಸ್.ಡಿ. ಸೋಮಶೇಖರ್, ಎಂ.ಕೆ. ಹರೀಶ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ