ಕೊಕ್ಕರೆ ಬೆಳ್ಳೂರಿನಲ್ಲಿ ಮತ್ತೆರಡು ಪೆಲಿಕಾನ್ ಸಾವು
Team Udayavani, Mar 11, 2018, 11:59 AM IST
ಭಾರತೀನಗರ (ಮಂಡ್ಯ): ಇಲ್ಲಿಗೆ ಸಮೀಪದ ಕೊಕ್ಕರೆಬೆಳ್ಳೂರಿನಲ್ಲಿ ಪೆಲಿಕಾನ್ ಹಕ್ಕಿಗಳ ಸರಣಿ ಸಾವು ಮುಂದುವರಿದಿದ್ದು, ಮತ್ತೆರಡು ಕೊಕ್ಕರೆಗಳು ಮೃತಪಟ್ಟಿವೆ. ಇದರೊಂದಿಗೆ ಕಳೆದ ಮೂರು ತಿಂಗಳಿಂದ ಒಟ್ಟಾರೆ 43 ಪೆಲಿಕಾನ್ಗಳು ಮೃತಪಟ್ಟಿದಂತಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಜಂತು ಹುಳುಗಳ ಬಾಧೆಯಿಂದಾಗಿ ಕೆಲವು ಪೆಲಿಕಾನ್ ಹಕ್ಕಿಗಳು ಅಸುನೀಗಿವೆ. ಮತ್ತೆ ಕೆಲವು ಕಲುಷಿತ ನೀರು ಕುಡಿದು ಸಾವನ್ನಪ್ಪಿರುವುದು ದೃಢಪಟ್ಟಿತ್ತು. ಈಗ ಮತ್ತೆ ಕೊಕ್ಕರೆಗಳು ಅಸ್ವಸ್ಥವಾಗಿ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಸೂಳೆಕೆರೆ ಹಾಗೂ ಮಾದರಹಳ್ಳಿ ಕೆರೆಗಳಲ್ಲಿ ಪೆಲಿಕಾನ್ ಹಕ್ಕಿಗಳು ಅಸ್ವಸ್ಥಗೊಳ್ಳುವುದು ಮಾಮೂಲಿಯಾಗಿ ಬಿಟ್ಟಿದೆ. ಈಗಾಗಲೇ ಹಲವು ವಿಜ್ಞಾನಿಗಳ ತಂಡಗಳು ಹಕ್ಕಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ವರದಿ ನೀಡಿವೆ. ಆದರೂ, ಹಕ್ಕಿಗಳ ಸಾವನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. “ಹಕ್ಕಿಗಳ ನಿರಂತರ ಸಾವು ನಮಗೆ ತುಂಬಾ ನೋವು ಉಂಟು ಮಾಡಿದೆ.
ಸಾವನ್ನು ತಡೆಗಟ್ಟಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೆಜ್ಜಾರ್ಲೆ ಬಳಗದ ಅಧ್ಯಕ್ಷ ಲಿಂಗೇಗೌಡ ಮನವಿ
ಮಾಡಿಕೊಂಡಿದ್ದಾರೆ. “ಮಾ.12ರಂದು ದೆಹಲಿಯ ಡಬ್ಲ್ಯೂಡಬ್ಲ್ಯೂಎಫ್ ಸೇರಿ ಬೆಂಗಳೂರು, ಉತ್ತರ ಪ್ರದೇಶ, ಕೊಯಮತ್ತೂರು, ಮುಂಬೈ, ಕೊಡಗಿನಿಂದ ತಜ್ಞರ ತಂಡವನ್ನು ಕರೆಸಿ, ಸಂಪೂರ್ಣ ಅಧ್ಯಯನ ನಡೆಸಿ, ಸಾವಿನ
ನಿಖರತೆ ತಿಳಿಯಲಾಗುವುದು’ ಎಂದು ಮೈಸೂರಿನ ವನ್ಯಜೀವಿ ವಿಭಾಗದ ಮುಖ್ಯಸ್ಥ ಏಡುಕೊಂಡಲು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು