ಗಾಳಿಗೆ ಉರುಳಿಬಿದ್ದ ಸ್ವಾಗತ ಕಮಾನು
Team Udayavani, Jul 21, 2018, 4:18 PM IST
ಮಂಡ್ಯ: ಮತದಾರರಿಗೆ ಕೃತಜ್ಞತೆ ಅರ್ಪಿಸಲು ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಲು ಹಾಕಿದ್ದ ಕಮಾನು ಉರುಳಿಬಿದ್ದ ಘಟನೆ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಡೆದಿದೆ. ಜನಸಂಚಾರವಿಲ್ಲದಿದ್ದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದಂತಾಗಿದೆ.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿರುವ ಜಯಚಾಮರಾಜೇಂದ್ರ ವೃತ್ತದಲ್ಲಿ
ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಬ್ಬಿಣದ ಕಂಬಿಗಳಿಂದ ಕೂಡಿದ ಬೃಹತ್ ಸ್ವಾಗತ ಕಮಾನನ್ನು ಅಳವಡಿಸಿ ಅದಕ್ಕೆ ಫ್ಲೆಕ್ಸಗಳನ್ನು ಅಳವಡಿಸಲಾಗಿತ್ತು. ಬೆಳಗ್ಗೆ 11.15ರ ವೇಳೆಗೆ ಬೀಸಿದ ಭಾರೀ ಗಾಳಿಯಿಂದ ಸ್ವಾಗತ ಕಮಾನು ಆಧಾರ ಕಳಚಿಕೊಂಡು ಕುಸಿದುಬಿದ್ದಿದೆ. ಈ ಮಾರ್ಗದ ರಸ್ತೆಯು ಸದಾ ಜನನನಿಬಿಡ ಹಾಗೂ ವಾಹನಗಳ ಸಂಚಾರದಿಂದ ಕೂಡಿರುತ್ತದೆ. ಅದೃಷ್ಟವಶಾತ್ ಕಮಾನು ಕುಸಿದು ಬೀಳುವ ಸಮಯದಲ್ಲಿ ಜನ ಮತ್ತು ವಾಹನಸಂಚಾರವಿರ ಲಿಲ್ಲವಾದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಕುಸಿದುಬಿದ್ದ ಸ್ವಾಗತ ಕಮಾನನ್ನು ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಅಲ್ಲಿಂದ ತೆರವುಗೊಳಿಸಿದರು. ಮತ್ತೆ ಅದನ್ನು ಪುನರ್ ಪ್ರತಿಷ್ಠಾಪಿಸುವುದಕ್ಕೆ ಅವಕಾಶ ನೀಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ