ತೆನೆ-ಕೈಗೆ ಲೋಕಲ್‌ ವಾರ್‌ ಪ್ರತಿಷ್ಠೆ


Team Udayavani, Aug 9, 2018, 4:16 PM IST

man.jpg

ಮಂಡ್ಯ: ನಗರಸಭೆ ಚುನಾವಣೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ನಗರಸಭೆ ಆಡಳಿತ ಸದ್ಯ ಕೈ ವಶದಲ್ಲಿದೆ. ಅದನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿದೆ. ಸ್ಥಳೀಯ ನಾಯಕತ್ವವಿಲ್ಲದೇ ಸೊರಗಿರುವ ಕಾಂಗ್ರೆಸ್‌ ಅತಂತ್ರ ಪರಿಸ್ಥಿತಿಯಲ್ಲಿದ್ದು, ಜಿಲ್ಲೆಯ ಏಳು ಕ್ಷೇತ್ರಗಳನ್ನು ವಶಕ್ಕೆ ಪಡೆದಿರುವ ಜೆಡಿಎಸ್‌ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ. ನಗರಸಭೆ ಅಧಿಕಾರ ಹಿಡಿಯುವುದಕ್ಕೆ ರಣತಂತ್ರ ನಡೆಸಿದೆ.

ಸಮರ್ಥ ನಾಯಕರು ಇಲ್ಲ: ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಸರಿಸಮನಾಗಿ ತನ್ನ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣಾ ರಣರಂಗದಲ್ಲಿ ಹೋರಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ಆದರೆ, ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಅಭಾವವಿದೆ. ಸಮರ್ಥ ನಾಯಕರೂ ಇಲ್ಲದೇ ಸಾಂಪ್ರದಾ ಯಿಕ ಪೈಪೋಟಿ ನೀಡುವುದಕ್ಕೆ ತಯಾರಿ ನಡೆಸಿದೆ.

ಜೆಡಿಎಸ್‌ನಲ್ಲಿ ಆಕಾಂಕ್ಷಿಗಳು ಹೆಚ್ಚು: ನಗರಸಭೆಯ 35 ವಾರ್ಡ್‌ಗಳಿಂದ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಟಿಕೆಟ್‌ಗೆ ಬಿರುಸಿನ ಪೈಪೋಟಿ ಏರ್ಪಟ್ಟಿದೆ. ವಾರ್ಡ್‌ ಜನರ ವಿಶ್ವಾಸಗಳಿಸುವುದಕ್ಕಿಂತ ಮೊದಲು ಟಿಕೆಟ್‌ಗಾಗಿ ಸಮರ ನಡೆಸುತ್ತಿದ್ದಾರೆ. ಒಂದೊಂದು ವಾರ್ಡ್‌ನಲ್ಲಿ ಕನಿಷ್ಠ 3 ರಿಂದ 4 ಮಂದಿ ಆಕಾಂಕ್ಷಿಗಳಿದ್ದಾರೆ. ಈ ಹಿಂದೆ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದವರಲ್ಲಿ ಕೆಲವರು ಜೆಡಿಎಸ್‌ ನಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
 
ಕೆಲವರು ಸ್ಥಳೀಯ ಶಾಸಕರನ್ನು ಬಿಟ್ಟು ಪ್ರಭಾವಿ ನಾಯಕರಾದ ಸಿ.ಎಸ್‌.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಅವರ ಮೂಲಕ ವರಿಷ್ಠರ ಮೇಲೆ ಪ್ರಭಾವ ಬೀರಿ ಟಿಕೆಟ್‌ ಗಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಎರಡನೇ ಹಂತದ ನಾಯಕರ ಬೆನ್ನು ಹತ್ತಿರುವ ಹಲವರು ಬಿ-ಫಾರಂಗಾಗಿ ಪ್ರಯಾಸಪಡುತ್ತಿದ್ದಾರೆ.

ನಾಯಕತ್ವವಿಲ್ಲದ ಕಾಂಗ್ರೆಸ್‌: ಕಾಂಗ್ರೆಸ್‌ನಲ್ಲಿ ಸ್ಥಳೀಯವಾಗಿ ಸಮರ್ಥ ನಾಯಕತ್ವವಿಲ್ಲ. ಈ ಹಿಂದೆ ಅಂಬರೀಶ್‌ ನಾಯಕತ್ವ ಜಿಲ್ಲೆಯಲ್ಲಿತ್ತು. ಕಳೆದ ಚುನಾವಣಾ ಸಮಯದಲ್ಲೇ ಅವರು ಚುನಾವಣೆಗೆ ನಿರುತ್ಸಾಹ ತೋರಿಸಿ ಹೋರಾಟದಿಂದ ಹಿಂದೆ ಸರಿದರು. ಅವರಿಗೀಗ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಆಸಕ್ತಿಯೂ ಇಲ್ಲ. ಪ್ರಚಾರಕ್ಕೆ ಬರುವ ಸಾಧ್ಯತೆಗಳೂ ತೀರಾ ಕಡಿಮೆ. 

ಕಾಂಗ್ರೆಸ್‌ನಲ್ಲಿ ಮೊದಲ ಹಂತದ ನಾಯಕತ್ವದ ಜೊತೆಗೆ ಎರಡನೇ ಹಂತದ ನಾಯಕತ್ವವೂ ಹೆಚ್ಚು ಪ್ರಬಲವಾಗಿಲ್ಲ. ಭಿನ್ನಮತ, ಬಣ ರಾಜಕೀಯದಿಂದ ತಾಂಡವವಾಡುತ್ತಿದ್ದು, ಒಬ್ಬೊಬ್ಬರು ಒಂದೊಂದು ಹಾದಿಯಲ್ಲಿ ಸಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಪಕ್ಷದ ಸ್ಪರ್ಧಾಕಾಂಕ್ಷಿಗಳು ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.

 ಕಳೆದ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 15 ಸ್ಥಾನಗಳಲ್ಲಿ ಜಯಗಳಿಸಿತ್ತು. ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಪ್ರಸ್ತುತ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲು ಹೋರಾಟ ನಡೆಸಬೇಕಿದ್ದರೂ ಸಮರ್ಥ ಸಾರಥಿ ಇಲ್ಲದೆ ಕಾಂಗ್ರೆಸ್‌ ಪಾಳಯದಲ್ಲಿ ಉತ್ಸಾಹ ಅಷ್ಟಾಗಿ ಕಂಡುಬರುತ್ತಿಲ್ಲ.

ಬಿಜೆಪಿಯಲ್ಲಿ ಅಭ್ಯರ್ಥಿಗಳ ಅಭಾವ: ಕಾಂಗ್ರೆಸ್‌ -ಜೆಡಿಎಸ್‌ಗೆ ಸಮರ್ಥ ಪೈಪೋಟಿ ನೀಡುವುದಕ್ಕೆ ಬಿಜೆಪಿ ಉತ್ಸಾಹವೇನೋ ತೋರುತ್ತಿದೆ. ಆದರೆ, ನಗರದ 35 ವಾರ್ಡ್‌ಗಳಿಂದ ಸ್ಪರ್ಧಿಸುವುದಕ್ಕೆ ಆ ಪಕ್ಷದಲ್ಲಿ ಅಭ್ಯರ್ಥಿಗಳ ಅಭಾವ ಎದುರಾಗಿದೆ. ಆದರೂ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್‌.ಆರ್‌.ಅರವಿಂದ್‌ ಈಗಾಗಲೇ ಕಾರ್ಯಕರ್ತರ ಪೂರ್ವ ಭಾವಿಸಭೆ ನಡೆಸಿ ಚುನಾವಣೆಗೆ ಕಣಕ್ಕಿಳಿಸುವ ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ತಯಾರಿಯಲ್ಲಿದ್ದಾರೆ.
 
ಚುನಾವಣಾ ಸಮಯದಲ್ಲಿ ಮಂಡ್ಯದೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದ ತೇಜಸ್ವಿನಿ ರಮೇಶ್‌ ಈಗ ವಿಧಾನಪರಿಷತ್‌ ಸದಸ್ಯೆಯಾಗಿದ್ದಾರೆ. ಆದರೂ, ಮಂಡ್ಯ ಕಡೆ ಮುಖ ಮಾಡುತ್ತಿಲ್ಲ. ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್‌ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮರೆಯಾಗಿದ್ದಾರೆ. ಉಳಿದಂತೆ ಬಿಜೆಪಿ ನಾಯಕರು ಮಂಡ್ಯ ಕಡೆ ಬರುತ್ತಿಲ್ಲ. ಹೀಗಾಗಿ ನಗರಸಭೆ ಚುನಾವಣೆಗೆ ಬಿಜೆಪಿ ಪಾಳಯದೊಳಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 

 ಕಳೆದ ಚುನಾವಣೆಯಲ್ಲಿ ಹತ್ತು ಮಂದಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಈ ಬಾರಿಯೂ ಸ್ಪರ್ಧಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕಾರಣ ಎರಡೂ ಪಕ್ಷಗಳಲ್ಲಿ ಟಿಕೆಟ್‌ ವಂಚಿತರಾದವರು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ. ಒಟ್ಟಾರೆ ಸ್ಥಳೀಯ ಸಂಸ್ಥೆ ಚುನಾವಣೆ ಕಣ ದಿನೇ ದಿನೆ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆ ದಿನದಿಂದ ಪ್ರಚಾರದ ಕಾವೇರಲಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.