250 ಮೀಟರ್ ಎಳೆದೊಯ್ದ ಲಾರಿ ; ಬೈಕ್ ಸವಾರರಿಬ್ಬರು ಛಿದ್ರ ಛಿದ್ರ
Team Udayavani, Aug 12, 2018, 1:06 PM IST
ಮಂಡ್ಯ: ನಗರದ ಹೊರವಲಯದ ವಿ.ಸಿ. ಫಾರಂ ಗೇಟ್ ಬಳಿ ಹೆದ್ದಾರಿಯಲ್ಲಿ ಇಬ್ಬರು ಬೈಕ್ ಸವಾರರು ಲಾರಿ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ರಣಭೀಕರ ಅಪಘಾತ ಭಾನುವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಕಂಠಪೂರ್ತಿ ಕುಡಿದ ಚಾಲಕ ಯದ್ವಾತದ್ವಾ ಲಾರಿ ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದ್ದು, ಲಾರಿಯಡಿ ಬಿದ್ದ ಇಬ್ಬರನ್ನು ಬೈಕ್ ಸಮೇತ 250 ಮೀಟರ್ ಎಳೆದೊಯ್ದಿದ್ದು ಇಬ್ಬರ ದೇಹವೂ ಛಿದ್ರ ಛಿದ್ರಗೊಂಡಿದೆ ಎಂದು ತಿಳಿದು ಬಂದಿದೆ.
250 ಮೀಟರ್ ತೆರಳಿದ ಬಳಿಕ ಚಕ್ರದಲ್ಲಿ ಬೈಕ್ ಇರುವುದು ಅರಿವಾಗಿ ಲಾಯಿ ನಿಲ್ಲಿಸಿ ಗದ್ದೆಯಲ್ಲಿ ಇಳಿದು ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಂಠಪೂರ್ತಿ ಕುಡಿದು ಅಮಲಿನಲ್ಲಿ ನಿಲ್ಲಲೂ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಚಾಲಕ ಬಿದ್ದುಕೊಂಡಿದ್ದ.
ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ