250 ಮೀಟರ್ ಎಳೆದೊಯ್ದ ಲಾರಿ ; ಬೈಕ್ ಸವಾರರಿಬ್ಬರು ಛಿದ್ರ ಛಿದ್ರ
Team Udayavani, Aug 12, 2018, 1:06 PM IST
ಮಂಡ್ಯ: ನಗರದ ಹೊರವಲಯದ ವಿ.ಸಿ. ಫಾರಂ ಗೇಟ್ ಬಳಿ ಹೆದ್ದಾರಿಯಲ್ಲಿ ಇಬ್ಬರು ಬೈಕ್ ಸವಾರರು ಲಾರಿ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ರಣಭೀಕರ ಅಪಘಾತ ಭಾನುವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಕಂಠಪೂರ್ತಿ ಕುಡಿದ ಚಾಲಕ ಯದ್ವಾತದ್ವಾ ಲಾರಿ ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದ್ದು, ಲಾರಿಯಡಿ ಬಿದ್ದ ಇಬ್ಬರನ್ನು ಬೈಕ್ ಸಮೇತ 250 ಮೀಟರ್ ಎಳೆದೊಯ್ದಿದ್ದು ಇಬ್ಬರ ದೇಹವೂ ಛಿದ್ರ ಛಿದ್ರಗೊಂಡಿದೆ ಎಂದು ತಿಳಿದು ಬಂದಿದೆ.
250 ಮೀಟರ್ ತೆರಳಿದ ಬಳಿಕ ಚಕ್ರದಲ್ಲಿ ಬೈಕ್ ಇರುವುದು ಅರಿವಾಗಿ ಲಾಯಿ ನಿಲ್ಲಿಸಿ ಗದ್ದೆಯಲ್ಲಿ ಇಳಿದು ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಂಠಪೂರ್ತಿ ಕುಡಿದು ಅಮಲಿನಲ್ಲಿ ನಿಲ್ಲಲೂ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಚಾಲಕ ಬಿದ್ದುಕೊಂಡಿದ್ದ.
ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ