250 ಮೀಟರ್ ಎಳೆದೊಯ್ದ ಲಾರಿ ; ಬೈಕ್ ಸವಾರರಿಬ್ಬರು ಛಿದ್ರ ಛಿದ್ರ
Team Udayavani, Aug 12, 2018, 1:06 PM IST
ಮಂಡ್ಯ: ನಗರದ ಹೊರವಲಯದ ವಿ.ಸಿ. ಫಾರಂ ಗೇಟ್ ಬಳಿ ಹೆದ್ದಾರಿಯಲ್ಲಿ ಇಬ್ಬರು ಬೈಕ್ ಸವಾರರು ಲಾರಿ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ರಣಭೀಕರ ಅಪಘಾತ ಭಾನುವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಕಂಠಪೂರ್ತಿ ಕುಡಿದ ಚಾಲಕ ಯದ್ವಾತದ್ವಾ ಲಾರಿ ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದ್ದು, ಲಾರಿಯಡಿ ಬಿದ್ದ ಇಬ್ಬರನ್ನು ಬೈಕ್ ಸಮೇತ 250 ಮೀಟರ್ ಎಳೆದೊಯ್ದಿದ್ದು ಇಬ್ಬರ ದೇಹವೂ ಛಿದ್ರ ಛಿದ್ರಗೊಂಡಿದೆ ಎಂದು ತಿಳಿದು ಬಂದಿದೆ.
250 ಮೀಟರ್ ತೆರಳಿದ ಬಳಿಕ ಚಕ್ರದಲ್ಲಿ ಬೈಕ್ ಇರುವುದು ಅರಿವಾಗಿ ಲಾಯಿ ನಿಲ್ಲಿಸಿ ಗದ್ದೆಯಲ್ಲಿ ಇಳಿದು ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಂಠಪೂರ್ತಿ ಕುಡಿದು ಅಮಲಿನಲ್ಲಿ ನಿಲ್ಲಲೂ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಚಾಲಕ ಬಿದ್ದುಕೊಂಡಿದ್ದ.
ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ