ವಿಶ್ವಾಸ ಮೂಡಿಸದ “ವಿಶ್ವಾಸ ಕಿರಣ’


Team Udayavani, Oct 25, 2018, 4:22 PM IST

mandya-1.jpg

ಕೆ.ಆರ್‌.ಪೇಟೆ: ಸರ್ಕಾರ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಎಂಬ ನೂತನ ಯೋಜನೆ ಜಾರಿಗೊಳಿಸಿ ಆಂಗ್ಲ ಭಾಷೆಯಲ್ಲಿ ಹಿಂದುಳಿದಿರುವ ಗ್ರಾಮಿಣ ಭಾಗದ ಮಕ್ಕಳಿಗೆ ಅನುಕೂಲ ಕಲ್ಪಿಸಿಕೊಡಲು ಮುಂದಾಗಿದೆ. ಆದರೆ, ತಾಲೂಕಿನಲ್ಲಿ ಸಾವಿರಾರು ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿದ್ದರೂ ಕೇವಲ 271 ವಿದ್ಯಾರ್ಥಿಗಳು ಮಾತ್ರ ವಿಶೇಷ ತರಗತಿಗೆ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

271 ವಿದ್ಯಾರ್ಥಿಗಳಲ್ಲಿ ಎರಡು ವಿಭಾಗ ಮಾಡಲಾಗಿದೆ. 201 ವಿದ್ಯಾರ್ಥಿಗಳ ತಂಡವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ, 70 ವಿದ್ಯಾರ್ಥಿಗಳ ತಂಡವನ್ನು ಸ್ವತಂತ್ರ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ನಿಯೋಜನೆ ಮಾಡಲಾಗಿತ್ತು. ಆದರೆ, ಈ ವಿದ್ಯಾರ್ಥಿಗಳು ನಿರಾಸಕ್ತಿ ವಹಿಸುತ್ತಿದ್ದು, ಕೇವಲ 30 ರಿಂದ 40 ವಿದ್ಯಾರ್ಥಿಗಳು ಮಾತ್ರ ಹಾಜರಾಗುತ್ತಿದ್ದಾರೆ.

ಹಿರಿಯ ಸಂಪನ್ಮೂಲ ವ್ಯಕ್ತಿಗಳಿಗೆ ಮುಜುಗರ: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ದೂರದ ಮೈಸೂರು ನಗರದಿಂದ ನಿವೃತ್ತ ಅಧಿಕಾರಿಗಳು, ಹಿರಿಯ ಉಪನ್ಯಾಸಕರು ಸಮಯಕ್ಕೆ ಸರಿಯಾಗಿ 9.30ಕ್ಕೆ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಆದರೆ, ಸ್ಥಳೀಯ ವಿದ್ಯಾರ್ಥಿಗಳು ಮಾತ್ರ 10.30 ರ ನಂತರ ಆಗಮಿಸುತ್ತಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 201ಕ್ಕೆ ಕೇವಲ 30, ಸ್ವತಂತ್ರ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 70ಕ್ಕೆ ಕೇವಲ 7 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಮಕ್ಕಳಿಗೆ ಜ್ಞಾನ ನೀಡುವ ಆಶಯ ಹೊತ್ತು ಇಳಿ ವಯಸ್ಸಿನಲ್ಲಿಯೂ ದೂರದ ಊರುಗಳಿಂದ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಇದರಿಂದ ಮುಜುಗರವಾಗುತ್ತಿದೆ.

ಕೆ.ಆರ್‌.ಪೇಟೆ ವಿಶ್ವಾಸ ಕಿರಣ ಯೋಜನೆಯ ವಿಶೇಷ ತರಗತಿಯಲ್ಲಿ ಉಪನ್ಯಾಸಕ ಗೋವಿಂದರಾಜು ಬೆರಳೆಣಿಕೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವುದು. ವಿದ್ಯಾರ್ಥಿಗಳು ಹಿರಿಯ ಅನುಭವಗಳ ಜ್ಞಾನ ಪಡೆದುಕೊಂಡು ಉತ್ತಮ ಸಾಧನೆ ಮಾಡ ಬಹುದಾಗಿದೆ. ನಾನೂ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮಸ್ಯೆ ಬಗ್ಗೆ ಅರಿವಿದೆ. ಹಾಗಾಗಿ ನಾನು ಇಂಥ ಮಕ್ಕಳಿಗೆ ಸೇವೆ ಸಲ್ಲಿಸಬೇಕು ಎಂದು ನನ್ನ ನಿವೃತ್ತಿ ಸಮಯ ಮೀಸಲಿಟ್ಟಿದ್ದೇನೆ. ನನ್ನಂತೆಯೇ ನೂರಾರು ಮಂದಿ ಮಕ್ಕಳಿಗೆ ಜ್ಞಾನ ಧಾರೆಯರೆಯಲು ಸಿದ್ಧ ರಾಗಿದ್ದಾರೆ. ಆದರೆ, ವಿದ್ಯಾರ್ಥಿಗಳು ಇಂಥ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. 
 ನಾಗರಾಜು, ನಿವೃತ್ತ ಸಹಾಯಕ ಆಯುಕ್ತರು, ಕೇಂದ್ರ

ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸರ್ಕಾರ ವಿದ್ಯಾರ್ಥಿಗಳನ್ನು ಜಾತಿಯ ಆಧಾರದ ಮೇಲೆ ವಿಂಗಡಣೆ ಮಾಡಿ ವಿದ್ಯಾಭ್ಯಾಸ ನೀಡುತ್ತಿ ರುವುದು ತಪ್ಪು. ಅವಕಾಶ ಸದ್ಬಳಕೆ ಮಾಡಿ ಕೊಂಡು ಉತ್ತಮ ಫ‌ಲಿತಾಂಶ ಪಡೆಯುವ ನಿಟ್ಟಿನಲ್ಲಿ ಯೋಚನೆ ಮಾಡಬೇಕು. ಆದರೆ, ಶೇ.10 ರಷ್ಟು ವಿದ್ಯಾರ್ಥಿಗಳು ಈ ಯೋಜನೆ ಬಳಸಿಕೊಳ್ಳುತ್ತಿಲ್ಲ ಎಂಬ ವಿಷಯ ತುಂಬಾ ನೋವಿನ ಸಂಗತಿಯಾಗಿದೆ. ಸರ್ಕಾ ರದ ಯೋಜನೆಗಳು ಸಿಗುತ್ತಿರುವಾಗ ಅದನ್ನು ಬಳ ಕೊಳ್ಳಬೇಕು. ಸರ್ಕಾರ ಮುಂದಿನ ದಿನಗಳಲ್ಲಾದರೂ ಎಲ್ಲಾ ವಿದ್ಯಾರ್ಥಿಗಳನ್ನು ಒಳಗೊಂಡ ಯೋಜನೆ ಜಾರಿ ಮಾಡಬೇಕು.
  ಮಣಿ, ವಿದ್ಯಾರ್ಥಿ 

ಎಚ್‌.ಬಿ.ಮಂಜುನಾಥ

ಟಾಪ್ ನ್ಯೂಸ್

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.