ಚಿತಾಭಸ್ಮ ವೇಳೆ ಜೇಬುಗಳ್ಳತನ
Team Udayavani, Nov 29, 2018, 2:53 PM IST
ಶ್ರೀರಂಗಪಟ್ಟಣ: ಕಾವೇರಿ ಸಂಗಮದಲ್ಲಿ ತನ್ನ ನೆಚ್ಚಿನ ನಟ ಅಂಬರೀಶ್ ಚಿತಾಭಸ್ಮ ವಿಸರ್ಜನೆ ವೀಕ್ಷಣೆಗೆ ಆಗಮಿಸಿದ್ದ ಅಭಿಮಾನಿಯ ಕಿಸೆಯಿಂದ 70 ಸಾವಿರ ರೂ. ಹಣ ಜೇಬುಗಳ್ಳರು ಕದ್ದಿರುವ ಘಟನೆ ನಡೆಯಿತು. ಮೈಸೂರು ಜಿಲ್ಲೆ ಸಿದ್ದರಾಮನಹುಂಡಿ ಗ್ರಾಮದ ವ್ಯಾಪಾರಿ ಮಹೇಂದ್ರ ಹಣ ಕಳೆದುಕೊಂಡು ಕಾವೇರಿ ಸಂಗಮದಲ್ಲಿ ಪೊಲೀಸರೆದುರು ರೋಧಿಸುತ್ತಿದ್ದುದ್ದು ಕಂಡು ಬಂದಿತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ನಟ ಅಂಬರೀಶ್ ಚಿತಾಭಸ್ಮ ವಿಸರ್ಜನೆ ವೇಳೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿದ್ದರು. ಈ ವೇಳೆ ಮಹೇಂದ್ರ ಸಹ ಕಾವೇರಿ ಸಂಗಮದಲ್ಲಿ ನಿಂತು ವೀಕ್ಷಿಸುತ್ತಿದ್ದರು.
ಪೊಲೀಸರು ನದಿ ತಟಕ್ಕೆ ಜನರು ಆಗಮಿಸಿದಂತೆ ಬ್ಯಾರಿಕೇಡ್ ಅಳವಡಿಸಿ ತಡೆದು ಭದ್ರತೆ ಒದಗಿಸಿದ್ದರು. ಈ ವೇಳೆ ಅಧಿಕ ಜನರು ಕಿಕ್ಕಿರಿದು ತುಂಬಿದ್ದರು. ಜನರ ತಳ್ಳಾಟದ ನಡುವೆ ತನ್ನ ಪ್ಯಾಂಟ್ ಜೇಬಿನಲ್ಲಿದ್ದ 70 ಸಾವಿರ ರೂ. ಗಳನ್ನು ಕಳ್ಳರು ಎಗರಿಸಿದ್ದಾರೆ ಎಂದು ಮಹೇಂದ್ರ ಶ್ರೀರಂಗಪಟ್ಟಣ ಠಾಣೆಗೆ ದೂರು ನೀಡಿದ್ದು, ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ