ಕೊನೆ ಭಾಗದ ನಾಲೆಗಳಿಗೆ ನೀರು ಹರಿಸಲು ಆಗ್ರಹ


Team Udayavani, Feb 3, 2019, 7:20 AM IST

naleg.jpg

ಮಳವಳ್ಳಿ: ಹೆಬ್ಟಾಳ ಚನ್ನಯ್ಯ ನಾಲೆ ಹಾಗೂ ಕೊನೆ ಭಾಗದ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಹರಿಸುವಂತೆ ಮದೂರು- ಮಳವಳ್ಳಿ ರೈತ ಸಂಘದ ಮುಖಂಡರು ತಾಲೂಕಿನ ಕಾಗೇಪುರದ ಕಾವೇರಿ ನೀರಾವರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮನವಿ ಮಾಡಿದರು.

ರೈತ ಸಂಘದ ಸಭೆಯಲ್ಲಿ ಕೊನೆಯ ಭಾಗಕ್ಕೆ ನೀರು ಬಿಡಬೇಕೆಂದು ಆಗ್ರಹಿಸಿದ್ದರ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ಸಹಾಯಕ ಕಾರ್ಯಪಾಲಕ ರಾಮಕೃಷ್ಣ ತಮ್ಮ ಕಚೇರಿಯಲ್ಲಿ ಶನಿವಾರ ಸಭೆ ಕರೆದು ರೈತರ ಮನವಿ ಸ್ವೀಕರಿಸಿದರು.

ಚೆನ್ನಯ್ಯನ ನಾಲೆಗೂ ನೀರು ಬಿಡಿ: ರೈತ ಮುಖಂಡ ಅಣ್ಣೂರು ಮಹೇಂದ್ರ ಮಾತನಾಡಿ, ಈಗಾಗಲೇ ವಿಸಿ ನಾಲೆಗೆ ನೀರು ಬಿಡಲಾಗಿದ್ದು, ಕೊನೆಯ ಭಾಗಕ್ಕೂ ನೀರು ತಲುಪಿಸುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಹೆಬ್ಟಾಳ ಚೆನ್ನಯ್ಯ ನಾಲೆಗೆ ಬೀರು ಬೀಡದಿರುವುದರಿಂದ ಮದ್ದೂರು ಮಳವಳ್ಳಿ ವ್ಯಾಪ್ತಿಯಲ್ಲಿ ನಾಲ್ಕು ಸಾವಿರ ಎಕರೆಯಲ್ಲಿ ಬೆಳೆದಿರುವ ಕಬ್ಬು ಸೇರಿ ಇತರೆ ಬೆಳೆಗಳು ಒಣಗುತ್ತಿವೆ.

ಅವುಗಳನ್ನು ಉಳಿಸಬಹುದಾಗಿದೆ. ವಿಸಿ ನಾಲೆಯ ಜೊತೆಗೆ ಅಲ್ಲಿಯೇ ಹೆಬ್ಟಾಳ ಚೆನ್ನಯ್ಯ ನಾಲೆಗೂ ನೀರು ಬಿಡಬೇಕೆಂದು ಮನವಿ ಮಾಡಿದರು. ಕಳೆದ ನಾಲ್ಕು ವರ್ಷದಿಂದ ಬರದಿಂದ ತತ್ತರಿಸಿದ ರೈತರು, ಪ್ರಸಕ್ತ ಸಾಲಿನಲ್ಲಿ ಒಂದು ಬೆಳೆ ಬೆಳೆದಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಇನ್ನೂ ಹೆಚ್ಚಿನ ನೀರು ಇದೆ. ಈಗಾಗಲೇ ಬಿತ್ತನೆ ಮತ್ತು ನಾಟಿ ಮಾಡಿರುವ ಬೆಳೆಗಳಿಗೆ ನೀರು ಹರಿಸಿ ಅನ್ನದಾತರನ್ನು ಉಳಿಸಬೇಕು ಎಂದು ಹೇಳಿದರು.

ರೈತರ ನೀರಿನ ಸಮಸ್ಯೆಗೆ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯವರು ಸ್ಪಂದಿಸಬೇಕಿದೆ. ಕಾವೇರಿ ನೀರಾವರಿ ನಿಗಮ ಅಧಿಕಾರಿಗಳು ಮತ್ತು ಕಾರ್ಖಾನೆ ಅಧಿಕಾರಿಗಳು ರೈತರು ಬೆಳೆದಿರುವ ಬೇಸಿಗೆ ಬೆಳೆ ಉಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಆಗ್ರಹಿಸಿದರು.

ಕೊನೆ ಭಾಗಕ್ಕೂ ನೀರು ಹರಿಸಿ: ಕಸ ಹೂಳಿನಿಂದ ಮುಚ್ಚಿರುವ ನಾಲೆ ದುರಸ್ತಿ ಮಾಡಬೇಕು, ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ತಲುಪುವವರೆಗೂ ಅಧಿಕಾರಿಗಳು ನೀರು ಹರಿಸಬೇಕು ಎಂದ ರೈತ ಸಂಘದ ಕಾರ್ಯಕರ್ತರು, ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿರುವ ನೀರಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು.

ನೀರು ಹರಿಸುವ ಭರವಸೆ: ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಮಕೃಷ್ಣ ಮಾತನಾಡಿ, ಈಗಾಗಲೇ ಮೇಲ್ಭಾಗದಲ್ಲಿ ಹರಿದಿರುವ ಕಡೆಗಳಲ್ಲಿ ನೀರು ಕಡಿಮೆ ಮಾಡಿ, ಕೊನೆ ಭಾಗಕ್ಕೂ ತಲುಪುವಂತೆ ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದ ನೀರು ಫೆ.6ರವರೆಗೂ ಹರಿಯುವುದರಿಂದ ಹೆಬ್ಟಾಳ ಚೆನ್ನಯ್ಯ ನಾಲೆ ಹಾಗೂ ಕೊನೆ ಭಾಗಕ್ಕೆ ನೀರು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

ನಂತರ ಫೆ.15ರಿಂದ 2ನೇ ಕಟ್ಟು ಪದ್ಧತಿಯ ನೀರನ್ನು ಹರಿಸಲಾಗುವುದು ಎಂದು ಹೇಳಿದರು. ರೈತ ಮುಖಂಡರಾದ ದೇವರಾಜು, ಮಾದೇಗೌಡ, ಬೊಪ್ಪಸಮುದ್ರ ದೇವರಾಜು, ರವಿಕುಮಾರ್‌ ಜಯರಾಮು, ನಾಗರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.