ರಾಜಕಾರಣಕ್ಕೆ ದೇವರ ಕರೆಯುವುದು ಸೂಕ್ತವಲ್ಲ


Team Udayavani, Feb 11, 2019, 7:23 AM IST

rajakarana.jpg

ಮಂಡ್ಯ: ರಾಜಕಾರಣಕ್ಕೆ ದೇವರನ್ನು ಕರೆಯುವುದು ಸೂಕ್ತವಲ್ಲ ಎಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು. ಮದ್ದೂರು ತಾಲೂಕಿನ ಬೆಸಗರಹಳ್ಳಿಯ ಮಾನಸ ವಿದ್ಯಾಸಂಸ್ಥೆಯ ಮಾನಸೋತ್ಸವ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಗತ್ತಿನ ಜನರಿಗೆ ನೆಮ್ಮದಿಯ ಆಶೀರ್ವಾದ ಮಾಡಲೆಂಬ ಕಾರಣಕ್ಕೆ ಧರ್ಮಸ್ಥಳದಲ್ಲಿ ಮಂಜುನಾಥನನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಯಾರಧ್ದೋ ವೈಯಕ್ತಿಕ ತೇಜೋವಧೆಗಾಗಿ ಆಣೆ ಪ್ರಮಾಣ ಮಾಡುವುದು, ದೇವರನ್ನು ಕರೆಯುವುದು ರಾಜಕಾರಣಿಗಳಿಗೆ ಸೂಕ್ತವಲ್ಲ ಎಂದು ಹೇಳಿದರು.

ಶಾಸಕರನ್ನು ಪಕ್ಷಕ್ಕೆ ಸೆಳೆಯುವ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರೇ ತಪ್ಪು ಮಾಡಿದ್ದರೆ ತಪ್ಪೇ. ಅಥವಾ ಎಚ್.ಡಿ.ಕುಮಾರಸಾಮಿ ನಾನೇ ರೆಕಾರ್ಡ್‌ ಮಾಡಿಸಿದ್ದೆ ಎಂದು ಒಮ್ಮೆ ಹೇಳಿದ್ದರೆ, ಮತ್ತೂಮ್ಮೆ ಬೇರೆಯವರು ತಿಳಿಸಿದ್ದಾರೆ ಎಂದಿದ್ದಾರೆ.

ಯಾರು ಮಾಡಿದರೂ ಅದು ತಪ್ಪೇ, ಇಬ್ಬರಲ್ಲೂ ಗೊಂದಲಕಾರಿ ಹೇಳಿಕೆಗಳಿವೆ. ಒಟ್ಟಾರೆ ಜನ ನಮ್ಮಿಂದ ನಿರೀಕ್ಷೆ ಮಾಡುವುದು ರಾಜ್ಯದ ಅಭಿವೃದ್ಧಿ. ನಾಡಿನ ಜನರ ಭವಿಷ್ಯಕ್ಕೆ ಒಳ್ಳೆಯ ಕಾರ್ಯಕ್ರಮ ರೂಪಿಸುತ್ತಾರೆಂಬ ನಿರೀಕ್ಷೆ ಇರುತ್ತೆ ಎಂದರು.

ಪೈಪೋಟಿಗಿಳಿಯಬಾರದು: ಇಬ್ಬರೂ ನನಗಿಂತಲೂ ದೊಡ್ಡವರಿದ್ದಾರೆ. ಇದೇ ರೀತಿ ಇಬ್ಬರೂ ಪೈಪೋಟಿಗಿಳಿದರೆ ಅದು ಎಲ್ಲಿಗೆ ಮುಟ್ಟುತ್ತೋ ಗೊತ್ತಿಲ್ಲ. ಮುಂದೆ ಜನ ತೀರ್ಮಾನ ಮಾಡುತ್ತಾರೆ. ಅದು ಅವರಿಗೆ ಬಿಟ್ಟಿದ್ದು ಎಂದು ಪ್ರತಿಕ್ರಿಯಿಸಿದರು.

ಬಜೆಟ್ ಬಗ್ಗೆ ಕೆಟ್ಟದ್ದು ಅಥವಾ ಒಳ್ಳೆಯದ್ದು ಎಂದು ಹೇಳುವುದಕ್ಕಿಂತಲೂ ಬಜೆಟ್ ಎಂದ ಮೇಲೆ ಕಳೆದ ವರ್ಷ ಏನೆಲ್ಲಾ ಕೊಡಲಾಗಿದೆ ಅದು ಅನುಷ್ಠಾನವಾಗಿದೆಯೋ, ಇಲ್ಲವೋ ಎಂಬ ಅರಿವು ಇರಬೇಕು. ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಅನುಷ್ಠಾನವಾದಾಗ ಮಾತ್ರ ಅದಕ್ಕೊಂದು ಅರ್ಥ ಬರುತ್ತೆ ಎಂದರು.

ಅಸ್ಥಿರಗೊಳಿಸುವುದು ಅಪರಾಧ: ಒಂದು ಸರ್ಕಾರ ರಚನೆಯಾದ ನಂತರ ಅದನ್ನು ಅಸ್ಥಿರಗೊಳಿಸುವುದು ಅಪರಾಧ. ಪೂರ್ಣಪ್ರಮಾಣದ ಸರ್ಕಾರ ಇರಬಹುದು. ಅಥವಾ ಸಮ್ಮಿಶ್ರ ಸರ್ಕಾರವೇ ಆಗಿರಬಹುದು. ಆ ಸರ್ಕಾರ ಸಂಪೂರ್ಣವಾಗಿ ನಡೆಯಲು ಅವಕಾಶ ಕೊಡಬೇಕು. ಬಹುಮತದ ವ್ಯತ್ಯಾಸವೋ ಅಥವಾ ನಾಯಕನ ಮೇಲೆ ವಿಶ್ವಾಸವಿಲ್ಲದಿದ್ದರೆ ಅವಿಶ್ವಾಸ ಮಂಡನೆ ಮಾಡಬಹುದು. ಅದು ಬಿಟ್ಟು ಆಪರೇಷನ್‌ ಮಾಡುವುದು ಸರಿಯಲ್ಲ ಎಂದರು.

ಅಸಮಾಧಾನಕ್ಕೆ ಯಾರು ಕಾರಣ: ಯಾಡಿಯೂರಪ್ಪನವರು ಯಾವ ಕಾರಣಕ್ಕೆ ಆಪರೇಷನ್‌ ಕಮಲ ಮಾಡಲು ಹೊರಟಿದ್ದಾರೋ ಅಥವಾ ಶಾಸಕರು ಏಕೆ ಅಸಮಾಧಾನಗೊಂಡಿದ್ದಾರೋ ಎಂಬುದನ್ನು ತಿಳಿದು ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನ ಮಾಡಬೇಕು.

ಇದಕ್ಕೆ ಯಾರು ಕಾರಣ ಎಂಬುದರ ಕುರಿತಂತೆ ಚರ್ಚೆ ನಡೆಯಬೇಕು. ಅದು ಬಿಟ್ಟು ಗೊಂದಲಗಳಲ್ಲೇ ಮುಳುಗಿ ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ನಡೆಯದಿದ್ದರೆ ಅದು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗುತ್ತದೆ. ಜೊತೆಗೆ ಅಪರೇಷನ್‌ ಕಮಲದಂತಹ ಪ್ರಕ್ರಿಯೆ ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.