ಸ್ಮಾರಕಗಳಾಗದ ಹುತಾತ್ಮ ಯೋಧರ ಸಮಾಧಿ 


Team Udayavani, Feb 19, 2019, 7:40 AM IST

yodhara.jpg

ಮಂಡ್ಯ: ದೇಶಕ್ಕಾಗಿ ಹೋರಾಟ ನಡೆಸಿ ವೀರ ಮರಣವನ್ನಪ್ಪಿದ ವೀರಯೋಧರಿಗೆ ನಾವು ಯಾವ ರೀತಿ ಗೌರವ ಸಲ್ಲಿಸುತ್ತಿದ್ದೇವೆ, ಅವರ ಬಲಿದಾನವನ್ನು ಹೇಗೆಲ್ಲಾ ಸ್ಮರಿಸುತ್ತಿದ್ದೇವೆ ಎನ್ನುವುದಕ್ಕೆ ವೀರಯೋಧ ಬಿ.ಕೆ.ಸುಧೀರ್‌ ಉದ್ಯಾನವನವೇ ಪ್ರತ್ಯಕ್ಷ ಸಾಕ್ಷಿ.

ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ನಗರದ ಸ್ವರ್ಣಸಂದ್ರ ಬಡಾವಣೆಗೆ ಹೊಂದಿಕೊಂಡಿರುವ ವೀರಯೋಧನ ಉದ್ಯಾನವನ ಕಳೆದ ಇಪ್ಪತ್ತು ವರ್ಷಗಳಿಂದ ಅಭಿವೃದ್ಧಿ ಭಾಗ್ಯ ಕಂಡಿಲ್ಲ. ಯೋಧರಿಗಾಗಿ ಯಾವುದೇ ಸ್ಮಾರಕವೂ ನಿರ್ಮಾಣವಾಗಿಲ್ಲ. ಯೋಧರ ಸಮಾಧಿಯನ್ನು ಗ್ರಾನೈಟ್‌ ಶಿಲೆಗಳಿಂದ ಅಲಂಕರಿಸಿರುವುದನ್ನು ಬಿಟ್ಟರೆ ಉಳಿದಿದ್ದೆಲ್ಲವೂ ಗೌಣವಾಗಿದೆ.

ಯೋಧರ ಸ್ಮರಿಸದ ಜಿಲ್ಲಾಡಳಿತ: ಇಲ್ಲಿ ಇಬ್ಬರು ಹುತಾತ್ಮ ಯೋಧರ ಸಮಾಧಿ ಇವೆ. ಸಿಯಾಚಿನ್‌ ಗಡಿಯಲ್ಲಿ ವೀರ ಮರಣಹೊಂದಿದ ಬಿ.ಕೆ.ಸುಧೀರ್‌ ಹಾಗೂ ಬಾರಮುಲ್ಲಾದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಜಿ.ಶರತ್‌ ಸಮಾಧಿಗಳು ಅಕ್ಕ-ಪಕ್ಕದಲ್ಲಿಯೇ ಇವೆ. ಬಿ.ಕೆ.ಸುಧೀರ್‌ 17 ಸೆಪ್ಟೆಂಬರ್‌ 1999ರಂದು ಹಾಗೂ ಜಿ.ಶರತ್‌ 6 ಸೆಪ್ಟೆಂಬರ್‌ 2004ರಂದು ಹುತಾತ್ಮರಾಗಿದ್ದರು.

1999ರಲ್ಲಿ ಬಿ.ಕೆ.ಸುಧೀರ್‌ ಹುತಾತ್ಮರಾದ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಸ್ವರ್ಣಸಂದ್ರ ಬಡಾವಣೆಯ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲೇ ಸಮಾಧಿ ಮಾಡಿ ಆ ಉದ್ಯಾನಕ್ಕೆ ವೀರಯೋಧ ಬಿ.ಕೆ.ಸುಧೀರ್‌ ಉದ್ಯಾನವೆಂದು ನಾಮಕರಣ ಮಾಡಲಾಯಿತು. 2004ರಲ್ಲಿ ಜಿ.ಶರತ್‌ ದೇಶರಕ್ಷಣೆಯಲ್ಲಿದ್ದಾಗ ಪ್ರಾಣತ್ಯಾಗ ಮಾಡಿದ್ದರಿಂದ ಅವರ ಅಂತ್ಯಕ್ರಿಯೆಯನ್ನು ಪಕ್ಕದಲ್ಲೇ ಮಾಡಿ ಸಮಾಧಿ ಕಟ್ಟಲಾಯಿತು.

ದೇಶ ರಕ್ಷಣೆಗಾಗಿ ಯೋಧರು ಮಾಡಿದ ತ್ಯಾಗ, ಬಲಿದಾನ ಯುವಕರಿಗೆ ಪ್ರೇರಣೆಯಾಗುವಂತೆ ಸಮಾಧಿ ಸ್ಥಳವನ್ನು ಸ್ಮಾರಕವಾಗಿ ಪರಿವರ್ತಿಸುವ ಆಲೋಚನೆ ಸ್ಥಳೀಯ ಜನಪ್ರತಿನಿಧಿಗಳಿಂದ ಆರಂಭವಾಗಿ ಯಾವೊಬ್ಬ ಅಧಿಕಾರಿಗೂ ಇಲ್ಲ. ಹುತಾತ್ಮರ ದಿನದಂದೂ ಹುತಾತ್ಮ ಯೋಧರನ್ನು ಸ್ಮರಿಸುವ ಸಂಪ್ರದಾಯವನ್ನೂ ಯಾರೊಬ್ಬರೂ ರೂಢಿಸಿಕೊಂಡು ಬಾರದಿರುವುದು ವಿಪರ್ಯಾಸದ ಸಂಗತಿ.

ನಾಮಫ‌ಲಕವೂ ಅಳವಡಿಸಿಲ್ಲ: ಈ ಉದ್ಯಾನವನಕ್ಕೆ ಬಿ.ಕೆ.ಸುಧೀರ್‌ ಉದ್ಯಾನವೆಂದು ಹೆಸರಿಡಲಾಗಿದ್ದರೂ ಅದನ್ನು ಗುರುತಿಸುವುದಕ್ಕೆ ಉದ್ಯಾನದ ಯಾವುದೇ ಭಾಗದಲ್ಲೂ ಒಂದೇ ಒಂದು ನಾಮಫ‌ಲಕವನ್ನೂ ಅಳವಡಿಸಿಲ್ಲ. ಸಮಾಧಿ ಸ್ಥಳಕ್ಕೆ ನೆರಳಿನ ವ್ಯವಸ್ಥೆಯನ್ನು ಮಾಡುವ ಆಸಕ್ತಿಯೂ ಅಧಿಕಾರಿ ವರ್ಗಕ್ಕಿಲ್ಲ. ಬಿಸಿಲು-ಮಳೆ-ಗಾಳಿಗೆ ಎನ್ನದೆ ವೀರಯೋಧರ ಸಮಾಧಿಗಳು ಮೈಯೊಡ್ಡಿ ನಿಂತಿವೆ. ಸಮಾಧಿಗಳ ಮೇಲೆ ಕಸ-ಕಡ್ಡಿ ಬಿದ್ದು ಧೂಳು ಮೆತ್ತಿಕೊಂಡು ಕಳಾಹೀನವಾಗಿ ನಾಮಕಾವಸ್ಥೆಯಾಗಷ್ಟೇ ಉಳಿದುಕೊಂಡಿವೆ.

ಅಭಿವೃದ್ಧಿ ನಿರ್ಲಕ್ಷ್ಯ: ಉದ್ಯಾನವನದಲ್ಲಿ ಸಮೃದ್ಧವಾಗಿ ಹಸಿರು ಗಿಡಗಳನ್ನು ಬೆಳೆಸುವುದಕ್ಕೆ ಅವಕಾಶಗಳಿವೆ. ಹುತಾತ್ಮ ಸ್ಮಾರಕದ ಮಾದರಿಯಲ್ಲೇ ಇಲ್ಲಿಯೂ ಸ್ಮಾರಕ ನಿರ್ಮಾಣ ಮಾಡಿ ಅವರನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಕೆಲಸ ಯಾರಿಂದಲೂ ನಡೆಯುತ್ತಿಲ್ಲ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲೇ ಉದ್ಯಾನವನವಿದ್ದು ಈ ಮಾರ್ಗವಾಗಿ ಹಾದು ಹೋಗುವಾಗ ಹೊರ ಜಿಲ್ಲೆಯವರಿಗೆ ಜಿಲ್ಲೆಯ ವೀರಯೋಧರನ್ನು ನೆನಪಿಸುವ, ಸ್ಮರಿಸುವಂತೆ ಮಾಡುವ ಅವಕಾಶವಿದ್ದರೂ ಯಾರಿಗೂ ಆ ಬಗ್ಗೆ ಆಸಕ್ತಿಯೇ ಇಲ್ಲ.

ಉದ್ಯಾನವನದಲ್ಲಿ ನೆಟ್ಟಿದ್ದ ಗಿಡಗಳು ನೀರಿಲ್ಲದೆ ನಿಧಾನವಾಗಿ ಮೇಲೇಳುತ್ತಿವೆ. ನೆಲಕ್ಕೆ ಹಸಿರು ಹುಲ್ಲಿನ ಹೊದಿಕೆ ಇಲ್ಲ. ಅಲಂಕಾರಿಕ ಹೂವಿನ ಗಿಡಗಳನ್ನು ಬೆಳೆಸಿ ಉದ್ಯಾನವನ್ನು ಸುಂದರಗೊಳಿಸಿಲ್ಲ. ರಾತ್ರಿ ವೇಳೆ ವಿದ್ಯುತ್‌ ದೀಪಗಳಿಲ್ಲದೆ ಕಾರ್ಗತ್ತಲು ಆವರಿಸಿರುತ್ತದೆ. ಅನೈತಿಕ ಚಟುವಟಿಕೆಯ ತಾಣವಾಗಿ ಪರಿವರ್ತನೆಯಾಗಿದೆ.

ಕಾಂಪೌಂಡ್‌ ನಿರ್ಮಿಸಿಲ್ಲ: ಈ ಉದ್ಯಾನದ ಸುತ್ತ ಕಾಂಪೌಂಡ್‌ ಹಾಗೂ ಗೇಟ್‌ ಅಳವಡಿಸಿ ಒಳಗೆ ಕೂರುವುದಕ್ಕೆ ಕಲ್ಲಿನ ಬೆಂಚುಗಳನ್ನು ಹಾಕಲಾಗಿದೆ. ಮಕ್ಕಳ ಆಟಿಕೆ ಸಾಮಾನುಗಳನ್ನು ಅಲ್ಲಿ ಜೋಡಿಸಲಾಗಿದೆ. ಆದರೆ, ವೀರಯೋಧರ ಸಮಾಧಿಗಳನ್ನು ಆಕರ್ಷಣೀಯಗೊಳಿಸುವ ಅವುಗಳನ್ನು ಹುತಾತ್ಮ ಸ್ಮಾರಕವಾಗಿಸುವ ಬಗ್ಗೆ ಯಾರಿಗೂ ಚಿಂತೆಯೇ ಇಲ್ಲ. 

ಈಗ ಹುತಾತ್ಮ ಗುಡಿಗೆರೆ ಕಾಲೋನಿಯ ಹೆಚ್‌.ಗುರು ಸರದಿ. ಮದ್ದೂರು-ಮಳವಳ್ಳಿ ರಸ್ತೆಯ ಮೆಳ್ಳಹಳ್ಳಿ ಪಕ್ಕದ ಸರ್ಕಾರಿ ಜಾಗದಲ್ಲಿ ಹೆಚ್‌.ಗುರು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ಸಮಾಧಿ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿದೆ. ಸ್ಮಾರಕದ ರೂಪು-ರೇಷೆ ಯಾವ ರೀತಿ ಇರಲಿದೆ, ಯಾವ ರೀತಿ ನಿರ್ಮಾಣವಾಗಲಿದೆ ಎಂಬುದರ ಚಿತ್ರಣವಂತೂ ಇಲ್ಲ. ಆದರೆ, ವೀರಯೋಧ ಬಿ.ಕೆ.ಸುಧೀರ್‌ ಉದ್ಯಾನದ ಮಾದರಿಯಲ್ಲಿ ನೆಪಮಾತ್ರಕ್ಕೆ ಸಮಾಧಿ ಸ್ಥಳ ಉಳಿಯುವಂತಾಗದಿರಲಿ ಎನ್ನುವುದು ಎಲ್ಲರ ಆಶಯವಾಗಿದೆ.

* ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.