ಸುಮಲತಾ ಚುನಾವಣಾ ಪ್ರಕ್ರಿಯೆ ಆರಂಭ


Team Udayavani, Feb 22, 2019, 7:25 AM IST

sumala.jpg

ಮಂಡ್ಯ: ಲೋಕಸಭಾ ಚುನಾವಣೆಯ ಸೀಟು ಹಂಚಿಕೆಗೆ ಮುನ್ನವೇ ಸುಮಲತಾ ಮಂಡ್ಯ ಕ್ಷೇತ್ರದಲ್ಲಿ ಸಂಚರಿಸುವುದರೊಂದಿಗೆ ಹೊಸ ರಾಜಕೀಯ ಸಂಚಲನ ಮೂಡಿಸಿದ್ದಾರೆ. ಇದು ಮೇಲ್ನೋಟಕ್ಕೆ ಅವರ ಚುನಾವಣಾ ಪೂರ್ವತಯಾರಿಯಂತೆ ಕಂಡುಬಂದಿದೆ. 

ಜೆಡಿಎಸ್‌-ಕಾಂಗ್ರೆಸ್‌ ನಡುವೆ  ಲೋಕಸಭಾ ಸೀಟು ಹಂಚಿಕೆಗೆ ಹಗ್ಗ-ಜಗ್ಗಾಟ ನಡೆದಿರುವ ಸಂದರ್ಭದಲ್ಲೇ ಸುಮಲತಾ ಮಂಡ್ಯ ಜಿಲ್ಲೆಯೊಳಗೆ ಪ್ರವಾಸ ನಡೆಸುತ್ತಿರುವುದು ರಾಜಕೀಯ ಕುತೂಹಲಕ್ಕೂ ಕಾರಣವಾಗಿದೆ. ಚುನಾವಣೆಗೆ ಸ್ಪರ್ಧಿಸುವುದಾದರೆ ಮಂಡ್ಯ ಕ್ಷೇತ್ರದಿಂದಲೇ ಎಂದು ದೃಢ ನಿಶ್ಚಯ ಮಾಡಿರುವುದು ಜೆಡಿಎಸ್‌ ಪಾಳಯದಲ್ಲಿ ಆತಂಕ ಮೂಡಿಸಿದೆ.

ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳನ್ನೂ ತನ್ನ ಹಿಡಿತದಲ್ಲಿಟ್ಟುಕೊಂಡಿರುವ ಜೆಡಿಎಸ್‌ ಸೀಟು ಹಂಚಿಕೆ ವೇಳೆ ಮಂಡ್ಯ ಕ್ಷೇತ್ರ ತಮ್ಮ ವಶವಾಗಲಿದೆ ಎಂಬ ಖಚಿತ ಭರವಸೆಯಲ್ಲಿದ್ದಾರೆ. ಇದೇ ಸಮಯಕ್ಕೆ ಸುಮಲತಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿರುವುದು, ಒಮ್ಮೆ ಪಕ್ಷದ ಟಿಕೆಟ್‌ ಸಿಗದಿದ್ದರೆ ಅಭಿಮಾನಿಗಳ ಒತ್ತಡಕ್ಕೆ ಮಣಿದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಪರೋಕ್ಷ ಇಂಗಿತವನ್ನು ಸುಮಲತಾ ವ್ಯಕ್ತಪಡಿಸಿರುವುದು ಜೆಡಿಎಸ್‌ನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 

ಸುಮಲತಾರನ್ನು ಕೆಣಕಲು ಹೆದರಿಕೆ: ಅಂಬರೀಶ್‌ ಜೊತೆ ವಿಶ್ವಾಸದ ರಾಜಕಾರಣವನ್ನು ಮಾಡುತ್ತಲೇ ಬಂದಿದ್ದ ಜೆಡಿಎಸ್‌ ವರಿಷ್ಠರು ಹಾಗೂ ಸ್ಥಳೀಯ ಜೆಡಿಎಸ್‌ ಶಾಸಕರಿಗೆ ಸುಮಲತಾ ಅವರನ್ನು ಸುಲಭವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಅಂಬಿ ಕುಟುಂಬವನ್ನು ರಾಜಕೀಯದಿಂದ ದೂರವಿಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸ್ಥಳೀಯ ಶಾಸಕರು ಆಡಿದ ಕೆಲವು ದುಡುಕಿನ ಮಾತುಗಳು ಜೆಡಿಎಸ್‌ ವಿರುದ್ಧ ಜನವಿರೋಧಿ ಅಲೆಗೆ ಕಾರಣವಾಗಿದ್ದಲ್ಲದೆ, ಪಕ್ಷದ ವರ್ಚಸ್ಸಿಗೂ ಹಾನಿ ಉಂಟುಮಾಡಿದೆ. ಇಂತಹ ಸಮಯದಲ್ಲಿ ಅಂಬಿ ಕುಟುಂಬದ ವಿರುದ್ಧ ಮಾತನಾಡುವುದಕ್ಕೂ ಶಾಸಕರು ಹೆದರುತ್ತಿರುವಂತೆ ಕಂಡುಬರುತ್ತಿದ್ದಾರೆ.

ಸೂಕ್ಷ್ಮ ಅವಲೋಕನ: ಅಧಿಕೃತವಾಗಿ ಚುನಾವಣೆ ಪ್ರವೇಶಿಸುವ ಮುನ್ನ ಜಿಲ್ಲೆಯೊಳಗಿನ ರಾಜಕೀಯ ವಾತಾವರಣವನ್ನು ಸೂಕ್ಷ್ಮವಾಗಿಯೇ ಗಮನಿಸುತ್ತಿರುವ ಸುಮಲತಾ ಅವರು, ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಜನರ ಮನಃಸ್ಥಿತಿ ಹಾಗೂ ಅವರ ಅಭಿಪ್ರಾಯವನ್ನು ಗ್ರಹಿಸುವ ಮೂಲಕ ರಾಜಕೀಯ ಲೆಕ್ಕಾಚಾರ ಹಾಕುತ್ತಿದ್ದಾರೆ. ಯಾವುದೇ ಹಂತದಲ್ಲೂ ಆತುರದ ನಿರ್ಧಾರ ಕೈಗೊಳ್ಳದೆ ಎಚ್ಚರಿಕೆಯಿಂದಲೇ ರಾಜಕೀಯ ಹೆಜ್ಜೆಗಳನ್ನಿಡುತ್ತಾ ಅಂಬರೀಶ್‌ ವರ್ಚಸ್ಸಿಗೆ ಧಕ್ಕೆಯಾಗದಂತೆ, ಅಂಬಿ ಕುಟುಂಬದ ಮೇಲೆ ಜನರಿಗೆ ಇರುವ ಅಭಿಮಾನ, ಗೌರವ ಕಡಿಮೆಯಾಗದಂತೆ ಜಾಗರೂಕತೆಯಿಂದ ಮುನ್ನಡೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ನೊಳಗೆ ಸಂತಸ: ಜಿಲ್ಲೆಯೊಳಗೆ ಅಸ್ತಿತ್ವವನ್ನೇ ಕಳೆದುಕೊಂಡು ದುರ್ಬಲವಾಗಿರುವ ಕಾಂಗ್ರೆಸ್‌ ಪಾಲಿಗೆ ಸುಮಲತಾ ಸಂಜೀವಿನಿಯಂತೆ ಕಂಡುಬಂದಿದ್ದಾರೆ. ಅಧಿಕಾರ ರಾಜಕಾರಣದಿಂದ ದೂರವಾಗಿರುವ ಕೈ ನಾಯಕರು ಸುಮಲತಾ ಅವರನ್ನು ಅಸ್ತ್ರವಾಗಿ ಬಳಸಿಕೊಂಡು ಕ್ಷೇತ್ರದಲ್ಲಿ ರಾಜಕೀಯ ಅಸ್ತಿತ್ವದ ಮರು ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ. ಇದೇ ಕಾರಣದಿಂದ ಅವರ ಬೆನ್ನಿಗೆ ನಿಂತು ಪರೋಕ್ಷವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿರುವುದಲ್ಲದೆ, ಸುಮಲತಾ ಅವರನ್ನೇ ಅಭ್ಯರ್ಥಿ ಎಂದು ಜನಮಾನಸದಲ್ಲಿ ಬಿಂಬಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಮೌನಕ್ಕೆ ಶರಣು: ಚುನಾವಣೆ ಘೋಷಣೆಯಾಗುವುದರೊಳಗೆ ಕಾಂಗ್ರೆಸ್‌ ನಾಯಕರನ್ನೆಲ್ಲಾ ಭೇಟಿಯಾಗಿ ಬೆಂಬಲ ಕೋರಲು ನಿರ್ಧರಿಸಿರುವ ಸುಮಲತಾ ಅವರು, ಜೆಡಿಎಸ್‌ ನಾಯಕರ ವಿರೋಧಿ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆಯನ್ನೂ ನೀಡದೆ ಮೌನಕ್ಕೆ ಶರಣಾಗಿ ಜಾಣ ನಡೆ ಪ್ರದರ್ಶಿಸುತ್ತಿದ್ದಾರೆ. ಜೆಡಿಎಸ್‌ ಭದ್ರಕೋಟೆಯೊಳಗೆ ಪುತ್ರ ನಿಖೀಲ್‌ಗೆ ರಾಜಕೀಯ ನೆಲೆ ದೊರಕಿಸುವ ಮಹತ್ವಾಕಾಂಕ್ಷೆ ಹೊಂದಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ಸುಮಲತಾ ಚುನಾವಣಾ ಸ್ಪರ್ಧೆಗೆ ಆಸಕ್ತಿ ವಹಿಸಿರುವುದು ದೊಡ್ಡ ಆಘಾತ ನೀಡಿದೆ. ನಿಖೀಲ್‌ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿ ಎಂದು ದೃಢವಾಗಿ ಹೇಳುತ್ತಾ, ಅವರ ಹೆಸರನ್ನು ಮುಂಚೂಣಿಗೆ ತರುವ ಪ್ರಯತ್ನಕ್ಕೂ ಸ್ಥಳೀಯ ಶಾಸಕರು ಗಮನಹರಿಸುತ್ತಿಲ್ಲ. ಇದು ಕುಟುಂಬದ ಕುಡಿಯನ್ನು ಜಿಲ್ಲೆಗೆ ಕರೆತರುವ ಜೆಡಿಎಸ್‌ ವರಿಷ್ಠರ ಪ್ರಯತ್ನಕ್ಕೂ ಹಿನ್ನಡೆ ಉಂಟುಮಾಡಿದೆ.

ಹಲವು ನಾಯಕರ ಭೇಟಿ: ಬೆಂಗಳೂರಿನಿಂದ ಮಂಡ್ಯಕ್ಕೆ ಬರುವಾಗಲೇ ರಾಮನಗರದಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಿರುವ ಸುಮಲತಾ ರಾಜಕೀಯ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆನಂತರ ಹುತಾತ್ಮ ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಪಾಂಡವಪುರ ಶಾಸಕರಾಗಿದ್ದ ದಿವಂಗತ ಕೆ.ಎಸ್‌.ಪುಟ್ಟಣ್ಣಯ್ಯ ಕುಟುಂಬ ಹಾಗೂ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ. ಇಂಡುವಾಳು ಎಸ್‌.ಸಚ್ಚಿದಾನಂದ ನಿವಾಸಕ್ಕೂ ತೆರಳಿ ಅಲ್ಲಿಯೂ ಸ್ಥಳೀಯರೊಟ್ಟಿಗೆ ಚರ್ಚಿಸಿದ್ದಾರೆ. ಸುಮಲತ ಚುನಾವಣಾ ಪ್ರವೇಶಕ್ಕೆ ಮುನ್ನವೇ ಜಿಲ್ಲೆಯೊಳಗೆ ವ್ಯವಸ್ಥಿತ ವೇದಿಕೆ ರೆಡಿಯಾಗುತ್ತಿದೆ. ಸ್ಥಳೀಯ ನಾಯಕತ್ವದ ಪ್ರಶ್ನೆ ಎದುರಾಗಿರುವುದರಿಂದ ಸುಮಲತಾ ಸ್ಪರ್ಧೆಗೆ ಹೆಚ್ಚಿನ ಒಲವು ವ್ಯಕ್ತವಾಗುತ್ತಿರುವಂತೆ ಕಂಡುಬರುತ್ತಿದೆ.

ಅದ್ಧೂರಿ ಸ್ವಾಗತ: ಹುತಾತ್ಮ ಯೋಧ ಎಚ್‌ಗುರು ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ ಸುಮಲತಾ ಅಂಬರೀಶ್‌ ಅವರಿಗೆ ರಸ್ತೆಯುದ್ದಕ್ಕೂ ಅಭಿಮಾನಿಗಳು ಅಭಿನಂದನೆಗಳ ಮಹಾಪೂರದೊಂದಿಗೆ ಅದ್ಧೂರಿ ಸ್ವಾಗತ ನೀಡಿದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಎಲ್ಲರಿಂದಲೂ ಒಕ್ಕೊರಲ ಆಗ್ರಹ ಕೇಳಿಬಂದಿತು. ಎಳನೀರು, ಕಬ್ಬಿನ ಜ್ಯೂಸ್‌ ನೀಡಿ ಸತ್ಕರಿಸಿದರಲ್ಲದೆ ಅಭಿಷೇಕ್‌ ಹಾಗೂ ಸುಮಲತಾ ಜೊತೆಗೆ ಸೆಲ್ಫಿ ತೆಗೆಸಿಕೊಳ್ಳುವುದಕ್ಕೆ ಮುಗಿಬಿದ್ದರು. ಅಭಿಮಾನಿಗಳ ಆಸೆಯನ್ನು ನಿರಾಸೆಗೊಳಿಸದೆ ಅವರ ಜೊತೆಗಿದ್ದು ಸೆಲ್ಫಿಗೆ ಸಹಕರಿಸಿದರಲ್ಲದೆ, ಅಭಿಮಾನಿಗಳತ್ತ ಕೈ ಬೀಸುತ್ತಾ ಮುನ್ನಡೆಯುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂತು.
 
ಯೋಧನ ಕುಟುಂಬದ ರೋಧನ: ಸುಮಲತಾ ಕಣ್ಣೀರು
ಮಂಡ್ಯ/ಭಾರತೀನಗರ:
ಹುತಾತ್ಮ ಯೋಧ ಎಚ್‌ಗುರು ಕುಟುಂಬದವರಿಗೆ ಸುಮಲತಾ ಸಾಂತ್ವನ, ತಂದೆ, ತಾಯಿ, ಪತ್ನಿಯ ರೋಧನ ಕಂಡು ಭಾವುಕರಾಗಿ ಕಣ್ಣೀರಿಟ್ಟು ದುಃಖದಲ್ಲಿ ಭಾಗಿ, ಯೋಧನ ಪತ್ನಿ ಕಲಾವತಿ ಕಾಲಿಗೆ ಬಿದ್ದು ನಮಸ್ಕರಿಸಿದಾಗಲಂತೂ ಇನ್ನಷ್ಟು ಭಾವುಕತೆಯಿಂದ ಅವರನ್ನು ಹಿಡಿದು ಮೇಲೆತ್ತಿ ಅಪ್ಪಿಕೊಂಡು ಅತ್ತ ದೃಶ್ಯ ಎಲ್ಲರ ಮನಕಲಕುವಂತಿತ್ತು.

ಯೋಧರ ಹತ್ಯೆಗೆ ಇಡೀ ದೇಶವೇ ದುಃಖಪಡುತ್ತಿದೆ. ನಾವೆಲ್ಲರೂ ಸಾಮಾನ್ಯ ಮನುಷ್ಯರು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಗುರುವಿನಂತಹ ಸೈನಿಕರು ವೀರಯೋಧರಾಗಿದ್ದಾರೆ. ಅವರ ಜೊತೆ ಇಡೀ ದೇಶದ ಜನರಿದ್ದಾರೆ. ನೀವು ಹೆದರಬೇಡಿ. ನಿಮ್ಮೊಂದಿಗೆ ನಾವು ಸದಾ ಇದ್ದೇವೆ ಎಂದು ಧೈರ್ಯ ತುಂಬಿದರು.

ಯೋಧ ಗುರುವಿನ ತಾಯಿ ಚಿಕ್ಕೋಳಮ್ಮ, ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಒಬ್ಬ ಮಗನನ್ನು ಈಗಾಗಲೇ ಕಳೆದುಕೊಂಡು ಸಾಕಷ್ಟು ನೊಂದಿದ್ದೇವೆ. ಇನ್ನೊಬ್ಬ ಮಗ ಕೆಇಬಿಯಲ್ಲಿ ಲೈನ್‌ಮನ್‌ ಆಗಿ ಕೆಲಸ ಮಾಡುತ್ತಿದ್ದಾನೆ. ಆತ ಮನೆಗೆ ಬರುವವರೆಗೂ ನಮಗೆ ಆತಂಕವಿರುತ್ತದೆ. ದಯಮಾಡಿ ಅವನಿಗೆ ಇಲಾಖೆಯಲ್ಲೇ ಬೇರೊಂದು ಜಾಗಕ್ಕೆ ಅವಕಾಶ ಮಾಡಿಕೊಡಲು ಶಿಫಾರಸು ಮಾಡುವಂತೆ ಸುಮಲತಾ ಅವರಲ್ಲಿ ಮನವಿ ಮಾಡಿದರು.

ಈ ಬಗ್ಗೆ ನಾನು ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ನಿಮ್ಮ ಮಗ ಕೆಲಸ ಮಾಡುವ ಸ್ಥಳ ಹಾಗೂ ಕೆಲಸದ ಬಗ್ಗೆ ವಿವರಗಳನ್ನು ನೀಡುವಂತೆ ತಿಳಿಸಿದರಲ್ಲದೆ, ನಿಮ್ಮ ಕುಟುಂಬಕ್ಕೆ ಅರ್ಧ ಎಕರೆ ಜಮೀನು ನೀಡುವ ಬಗ್ಗೆ ನನ್ನ ಮಗ ಅಭಿಷೇಕ್‌ ಜೊತೆ  ಮಾತನಾಡಿದ್ದೇನೆ. ಅವನೇ ಬಂದು ನಿಯಮಾನುಸಾರ ಜಮೀನನ್ನು ಕುಟುಂಬಕ್ಕೆ ವರ್ಗಾಯಿಸಿಕೊಡಲಿದ್ದಾನೆ ಎಂದು ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮಲೇಷಿಯಾದಲ್ಲಿ ಇದ್ದಾಗಲೇ ಯೋಧನ ಕುಟುಂಬಕ್ಕೆ ಅರ್ಧ ಎಕರೆ ಜಮೀನು ನೀಡುವ ಬಗ್ಗೆ ತಿಳಿಸಿದ್ದೆ. ಈಗಲೂ ಅವರ ಕುಟುಂಬಕ್ಕೆ ಜಮೀನು ನೀಡುವುದಾಗಿ ಹೇಳಿದ್ದೇನೆ. ಅವರೂ ಸಹ ಜಮೀನು ಪಡೆಯಲು ಒಪ್ಪಿದ್ದಾರೆ. ಆದಷ್ಟು ಶೀಘ್ರವೇ ಜಮೀನನ್ನು ಅವರ ಸುಪರ್ದಿಗೆ ದೊರಕಿಸಿಕೊಡುವುದಾಗಿ ತಿಳಿಸಿದರು.

ಸಮಾಧಿಗೆ ನಮನ: ಇದಕ್ಕೂ ಮುನ್ನ ಸುಮಲತಾ ಅವರು ದೊಡ್ಡರಸಿನಕೆರೆ ಗ್ರಾಮಕ್ಕೆ ತೆರಳಿ ಜಮೀನು ವೀಕ್ಷಣೆ ಮಾಡಿ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಅಭಿಷೇಕ್‌, ರಾಕ್‌ಲೈನ್‌ ವೆಂಕಟೇಶ್‌ ಅವರೊಂದಿಗೆ ಮದ್ದೂರು-ಮಳವಳ್ಳಿ ಹೆದ್ದಾರಿಯ ಮೆಳ್ಳಹಳ್ಳಿ ಬಳಿ ಇರುವ ವೀರಯೋಧ ಎಚ್‌ಗುರು ಸಮಾಧಿಗೆ ನಮನ ಸಲ್ಲಿಸಿದರು.

* ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.